AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಪ್ರಯೋಜನ?-ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್​

BS Yediyurappa Resign: ಬಿಜೆಪಿ ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಸವಾಲು ಹಾಕಿದೆ.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಪ್ರಯೋಜನ?-ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್​
ಸಿದ್ದರಾಮಯ್ಯ
Follow us
TV9 Web
| Updated By: Lakshmi Hegde

Updated on:Jul 26, 2021 | 1:29 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಸರಣಿ ಟ್ವೀಟ್​ ಮಾಡಿ, ಬಿಜೆಪಿಯನ್ನು ಟೀಕಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಪದತ್ಯಾಗ ಅಲ್ಲ..ಪದಚ್ಯುತಿ ಎಂದು ಹೇಳಿದೆ. ಯಡಿಯೂರಪ್ಪನವರು ಪದತ್ಯಾಗ ಮಾಡಿದ್ದಲ್ಲ. ಬದಲಿಗೆ ಅವರನ್ನು ಪದಚ್ಯುತಿಗೊಳಿಸಲಾಗಿದೆ ಎಂಬುದನ್ನು ಅವರ ಕಣ್ಣೀರೇ ಹೇಳುತ್ತಿದ್ದವು. ತಮ್ಮದು ವಿಫಲ ನಾಯಕತ್ವ ಎಂಬುದಕ್ಕೆ ಬಿಎಸ್​ವೈ ರಾಜೀನಾಮೆ ಘೋಷಿಸಿದ್ದೇ ಸಾಕ್ಷಿ ಎಂದೂ ವ್ಯಂಗ್ಯವಾಡಿದೆ.

ಕಾಂಗ್ರೆಸ್​ ಟ್ವೀಟ್​ನ ಸಾರಾಂಶ ಹೀಗಿದೆ..ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎಂಬುದನ್ನು ಬಿ.ಎಸ್​.ಯಡಿಯೂರಪ್ಪನವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಿಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದರೆ ಈಗ ಪದಚ್ಯುತಿ ಮಾಡಿದ್ದೇಕೆ?

ಬಿಜೆಪಿ ದುರಾಡಳಿತದಿಂದ ಬೇಸತ್ತ ರಾಜ್ಯದ ಜನರು ಬಯಸುತ್ತಿರುವುದು ನಾಯಕತ್ವ ಬದಲಾವಣೆಯನ್ನಲ್ಲ..ಸರ್ಕಾರವೇ ಬದಲಾಗಲಿ ಎಂದು ಬಯಸುತ್ತಿದ್ದಾರೆ. ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಿದ್ದರಾಮಯ್ಯ ಟ್ವೀಟ್​ ಇನ್ನೊಂದೆಡೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೂ ಟ್ವೀಟ್​ ಮಾಡಿದ್ದಾರೆ. ಜನ ಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಬಿಜೆಪಿ ನಾಯಕರು ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ. ಇಷ್ಟಾದರೂ ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಬಿಎಸ್​ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ ಎಂದು ಟೀಕಿಸಿದ್ದಾರೆ.

Published On - 1:29 pm, Mon, 26 July 21

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ