AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟುಪಿಡ್ ಹೇಳಿಕೆ, ಗಿಲ್ಟಿ ಮೈಂಡ್​ನಿಂದ ಸುಧಾಕರ್ ಹಾಗೆ ಹೇಳಿದ್ದಾರೆ: ಸಿದ್ದರಾಮಯ್ಯ ಟಾಂಗ್

ಮಂತ್ರಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಜನರಾಗಿ ಅಲ್ಲ. ಹಾಗಾಗಿ ಇದೊಂದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಸದನದ ಹೊರಗೆ ಅವರು ಈ ಹೇಳಿಕೆ ನೀಡಿದ್ದರೂ, ಸೆಷನ್ ಅವಧಿಯಲ್ಲಿ ಹೀಗೆ ಹೇಳಿರುವುದರಿಂದ ಹಕ್ಕು ಚ್ಯುತಿ ನಿರ್ಣಯ ಆಗುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸ್ಟುಪಿಡ್ ಹೇಳಿಕೆ, ಗಿಲ್ಟಿ ಮೈಂಡ್​ನಿಂದ ಸುಧಾಕರ್ ಹಾಗೆ ಹೇಳಿದ್ದಾರೆ: ಸಿದ್ದರಾಮಯ್ಯ ಟಾಂಗ್
ಸಿದ್ದರಾಮಯ್ಯ
TV9 Web
| Edited By: |

Updated on:Apr 05, 2022 | 1:16 PM

Share

ಬೆಂಗಳೂರು: ಎಲ್ಲ ಶಾಸಕರು ಏಕಪತ್ನೀವ್ರತಸ್ಥರೇ ಎಂಬ ಸಚಿವ ಡಾ.ಕೆ.ಸುಧಾಕರ ಅವರ ಪ್ರಶ್ನೆ ವಿವಾದಕ್ಕೀಡಾಗಿದೆ. ಇಂದು (ಮಾರ್ಚ್ 24) ಸಂಜೆ ನಡೆದ ಸುದ್ದಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಈ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೀಡಿರುವುದು ಸ್ಟುಪಿಂಡ್ ಸ್ಟೇಟ್​ಮೆಂಟ್ (ಮೂರ್ಖತನದ ಹೇಳಿಕೆ) ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಂತ್ರಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಜನರಾಗಿ ಅಲ್ಲ. ಹಾಗಾಗಿ ಇದೊಂದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಸದನದ ಹೊರಗೆ ಅವರು ಈ ಹೇಳಿಕೆ ನೀಡಿದ್ದರೂ, ಸೆಷನ್ ಅವಧಿಯಲ್ಲಿ ಹೀಗೆ ಹೇಳಿರುವುದರಿಂದ ಸದಸ್ಯರ ಹಕ್ಕುಚ್ಯುತಿ ಆಗುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸದನದಲ್ಲಿರುವ ಎಲ್ಲಾ 225 ಶಾಸಕರ ಬಗ್ಗೆ ಸುಧಾಕರ್ ಈ ಹೇಳಿಕೆ ನೀಡಿದ್ದಾರೆ. ಸದನದಲ್ಲಿ ಹೆಣ್ಣುಮಕ್ಕಳೂ ಇದ್ದಾರೆ. ಮಹಿಳಾ ಸಚಿವರೂ ಇದ್ದಾರೆ. ಅವರ ವಿರುದ್ಧ ಹೀಗೆ ಹೇಳಿದ್ದಾರೆ. ಇದೊಂದು ಸ್ಟುಪಿಡ್ ಹೇಳಿಕೆ ಎಂದು ಗುಡುಗಿದ್ದಾರೆ.

ಎಲ್ಲರನ್ನೂ ಸೇರಿಸಿ ಹೀಗೆ ಹೇಳಿದ್ದಾರೆ. ಗಂಡಸರನ್ನು ಅವ್ನೇನೋ ಗಂಡ್ಸು ಅಂತ ಜನ ಬಿಡ್ತಾರೆ. ಆದರೆ, ಮಹಿಳೆಯರು ಏನು ಏನು ಅಂತ ಹೇಳಬೇಕು? ಹಳ್ಳಿನಲ್ಲಿ ಗಂಡ್ಸು ಬಿಡು ಅಂತಾರೆ. ಹೆಂಗ್ಸರನ್ನು ಹಂಗೇ ಅಂತಾರಾ? ಸುಧಾಕರ್ ಇದು ಗಿಲ್ಟಿ ಮೈಂಡ್​ನಿಂದ ಹೇಳಿರೋದು. ಆ ಮಾತನ್ನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಬೆಳಗಾವಿ ಕ್ಯಾಂಡಿಡೇಟ್ ಸತೀಶ್ ಜಾರಕಿಹೊಳಿ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಶಾಸಕರ ಮೇಲೆ ಎಸ್​ಐಟಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಶಾಸಕರನ್ನು ಸೇರಿಸಿ ಭೋಜನಕೂಟ ನಡೆಸಿರುವ ಕಾಂಗ್ರೆಸ್​ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಕುರಿತು ದೂರು ನೀಡಲು ಮುಂದಾಗಿದೆ.

ತಮ್ಮ ಹೇಳಿಕೆ ಹಲವು ಆಯಾಮಗಳಲ್ಲಿ ವಿವಾದಕ್ಕೀಡಾಗಿದ್ದನ್ನು ಮನಗಂಡ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆಗೆ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ. ‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನಾನು ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ’ ಎಂದು ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವೀವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Published On - 5:19 pm, Wed, 24 March 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು