Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟುಪಿಡ್ ಹೇಳಿಕೆ, ಗಿಲ್ಟಿ ಮೈಂಡ್​ನಿಂದ ಸುಧಾಕರ್ ಹಾಗೆ ಹೇಳಿದ್ದಾರೆ: ಸಿದ್ದರಾಮಯ್ಯ ಟಾಂಗ್

ಮಂತ್ರಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಜನರಾಗಿ ಅಲ್ಲ. ಹಾಗಾಗಿ ಇದೊಂದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಸದನದ ಹೊರಗೆ ಅವರು ಈ ಹೇಳಿಕೆ ನೀಡಿದ್ದರೂ, ಸೆಷನ್ ಅವಧಿಯಲ್ಲಿ ಹೀಗೆ ಹೇಳಿರುವುದರಿಂದ ಹಕ್ಕು ಚ್ಯುತಿ ನಿರ್ಣಯ ಆಗುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸ್ಟುಪಿಡ್ ಹೇಳಿಕೆ, ಗಿಲ್ಟಿ ಮೈಂಡ್​ನಿಂದ ಸುಧಾಕರ್ ಹಾಗೆ ಹೇಳಿದ್ದಾರೆ: ಸಿದ್ದರಾಮಯ್ಯ ಟಾಂಗ್
ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on:Apr 05, 2022 | 1:16 PM

ಬೆಂಗಳೂರು: ಎಲ್ಲ ಶಾಸಕರು ಏಕಪತ್ನೀವ್ರತಸ್ಥರೇ ಎಂಬ ಸಚಿವ ಡಾ.ಕೆ.ಸುಧಾಕರ ಅವರ ಪ್ರಶ್ನೆ ವಿವಾದಕ್ಕೀಡಾಗಿದೆ. ಇಂದು (ಮಾರ್ಚ್ 24) ಸಂಜೆ ನಡೆದ ಸುದ್ದಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಈ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೀಡಿರುವುದು ಸ್ಟುಪಿಂಡ್ ಸ್ಟೇಟ್​ಮೆಂಟ್ (ಮೂರ್ಖತನದ ಹೇಳಿಕೆ) ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಂತ್ರಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ಜನರಾಗಿ ಅಲ್ಲ. ಹಾಗಾಗಿ ಇದೊಂದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಸದನದ ಹೊರಗೆ ಅವರು ಈ ಹೇಳಿಕೆ ನೀಡಿದ್ದರೂ, ಸೆಷನ್ ಅವಧಿಯಲ್ಲಿ ಹೀಗೆ ಹೇಳಿರುವುದರಿಂದ ಸದಸ್ಯರ ಹಕ್ಕುಚ್ಯುತಿ ಆಗುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸದನದಲ್ಲಿರುವ ಎಲ್ಲಾ 225 ಶಾಸಕರ ಬಗ್ಗೆ ಸುಧಾಕರ್ ಈ ಹೇಳಿಕೆ ನೀಡಿದ್ದಾರೆ. ಸದನದಲ್ಲಿ ಹೆಣ್ಣುಮಕ್ಕಳೂ ಇದ್ದಾರೆ. ಮಹಿಳಾ ಸಚಿವರೂ ಇದ್ದಾರೆ. ಅವರ ವಿರುದ್ಧ ಹೀಗೆ ಹೇಳಿದ್ದಾರೆ. ಇದೊಂದು ಸ್ಟುಪಿಡ್ ಹೇಳಿಕೆ ಎಂದು ಗುಡುಗಿದ್ದಾರೆ.

ಎಲ್ಲರನ್ನೂ ಸೇರಿಸಿ ಹೀಗೆ ಹೇಳಿದ್ದಾರೆ. ಗಂಡಸರನ್ನು ಅವ್ನೇನೋ ಗಂಡ್ಸು ಅಂತ ಜನ ಬಿಡ್ತಾರೆ. ಆದರೆ, ಮಹಿಳೆಯರು ಏನು ಏನು ಅಂತ ಹೇಳಬೇಕು? ಹಳ್ಳಿನಲ್ಲಿ ಗಂಡ್ಸು ಬಿಡು ಅಂತಾರೆ. ಹೆಂಗ್ಸರನ್ನು ಹಂಗೇ ಅಂತಾರಾ? ಸುಧಾಕರ್ ಇದು ಗಿಲ್ಟಿ ಮೈಂಡ್​ನಿಂದ ಹೇಳಿರೋದು. ಆ ಮಾತನ್ನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಬೆಳಗಾವಿ ಕ್ಯಾಂಡಿಡೇಟ್ ಸತೀಶ್ ಜಾರಕಿಹೊಳಿ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಶಾಸಕರ ಮೇಲೆ ಎಸ್​ಐಟಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ಶಾಸಕರನ್ನು ಸೇರಿಸಿ ಭೋಜನಕೂಟ ನಡೆಸಿರುವ ಕಾಂಗ್ರೆಸ್​ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಈ ಕುರಿತು ದೂರು ನೀಡಲು ಮುಂದಾಗಿದೆ.

ತಮ್ಮ ಹೇಳಿಕೆ ಹಲವು ಆಯಾಮಗಳಲ್ಲಿ ವಿವಾದಕ್ಕೀಡಾಗಿದ್ದನ್ನು ಮನಗಂಡ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆಗೆ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ. ‘ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನಾನು ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ’ ಎಂದು ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವೀವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Published On - 5:19 pm, Wed, 24 March 21

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!