AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್ ಮೀಸಲಾತಿ ವಿವಾದ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಕೈ ನಾಯಕರು ಖಾಕಿ ವಶಕ್ಕೆ

ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

ಬಿಬಿಎಂಪಿ ವಾರ್ಡ್ ಮೀಸಲಾತಿ ವಿವಾದ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಕೈ ನಾಯಕರು ಖಾಕಿ ವಶಕ್ಕೆ
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Aug 18, 2022 | 1:40 PM

Share

ಬೆಂಗಳೂರು: ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅವೈಜ್ಞಾನಿಕ ವಾರ್ಡ್ ಮೀಸಲಾತಿ ಹಿಂಪಡೆಯುವಂತೆ ಒತ್ತಾಯ ಮಾಡುತ್ತಿದ್ದಾರೆ.

ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿ 2 ಸಾವಿರಕ್ಕೂ ಹೆಚ್ಚು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರೂ ಬಿಜೆಪಿ ಮನ್ನಣೆ ನೀಡಿಲ್ಲವೆಂದು ಆರೋಪಿಸಿ ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಜಿಲ್ಲಾ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂಪಾರ್ಕ್​ನಿಂದ ಸಿಎಂ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಹೊರಟ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್​​​, ಶಾಸಕರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿವಿ9 ಜೊತೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಮೀಸಲಾತಿ ಮಾಡುವ ಸಂದರ್ಭದಲ್ಲಿ ಎಲ್ಲ ವರ್ಗದವರಿಗೂ ಅವಕಾಶ ಸಿಗಬೇಕು ಅಂತ ಮಾಡಲಾಗಿದೆ. ಕಾಂಗ್ರೆಸ್ ಇರುವ ಕಡೆಗಳಲ್ಲಿ ಎಲ್ಲಾ ಮಹಿಳಾ ಮೀಸಲಾತಿ ಮಾಡಿದ್ದಾರೆ. ಇದೊಂದು ಅವೈಜ್ಞಾನಿಕ ಮೀಸಲಾತಿ. ಕೇಶವ ಕೃಪದಲ್ಲಿ ಕೂತು ಆರ್​ಎಸ್​ಎಸ್​ನವರು ಹೇಳಿದಂತೆ ಮಾಡಿರುವ ಮೀಸಲಾತಿ ಇದು ಎಂದರು.

ಸರ್ಕಾರಕ್ಕೆ ಗೋಡ್ಸೆ ಮೇಲೆ ಬಹಳ ಪ್ರೀತಿ, ಗೋಡ್ಸೆ ಹಾಗೂ ಸಾವರ್ಕರ್ ಅವರ ಫೊಟೋಗಳನ್ನು ಕಸದ ತೊಟ್ಟಿಯ ಮೇಲೂ ಹಾಕುವುದಕ್ಕೆ ಲಾಯಕ್ಕಲ್ಲ, ಉತ್ತರಪ್ರದೇಶ ಮಾದರಿ ಮಾಡುತ್ತೇವೆ ಅಂತ ಹೊರಟಿದ್ದಾರೆ. ಅನಾಗರಿಕ ರಾಜ್ಯ ಮಾಡಲು ಹೊರಟಿದ್ದಾರೆ. ನಮ್ಮ ಹೆಣದ ಮೇಲೆ ಅದು ಆಗುತ್ತದೆ ಎಂದರು.

ಪ್ರತಿಭಟನೆಗೆ ನಿರಸ ಪ್ರತಿಕ್ರಿಯೆ

ಬೆಂಗಳೂರಿನ ಫ್ರೀಡಂಪಾರ್ಕ್ ಬಳಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನೆಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್​​ ನಾಯಕರು ಕರೆ ನೀಡಿದ್ದ ಧರಣಿಯಲ್ಲಿ ಬೆಂಗಳೂರಿನ ಬಹುತೇಕ ಕಾಂಗ್ರೆಸ್​ ನಾಯಕರು ಗೈರಾಗಿದ್ದಾರೆ. ಪ್ರತಿಭಟೆನಯಲ್ಲಿ ಭಾಗಿಯಾಗುವಂತೆ ಸೂಚಿಸಿದ್ದರೂ ಶಾಸಕ ಜಮೀರ್ ಅಹಮ್ಮದ್, ಎನ್.ಎ ಹ್ಯಾರಿಸ್, ಭೈರತಿ ಸುರೇಶ್, ದಿನೇಶ್ ಗುಂಡೂರಾವ್, ಅಖಂಡ ಶ್ರೀನಿವಾಸ್ ಮೂರ್ತಿ, ಸೌಮ್ಯ ರೆಡ್ಡಿ, ಎಂ.ಕೃಷ್ಣಪ್ಪ, ಕೆ.ಜೆ ಜಾರ್ಜ್, ಸಂಸದ ಡಿ.ಕೆ ಸುರೇಶ್, ಪಿ.ಆರ್ ರಮೇಶ್, ಗೋವಿಂದ ರಾಜ್, ಯು.ಬಿ ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿಲ್ಲ..

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Thu, 18 August 22

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್