AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajadwani Yatre: ದೊಡ್ಡಬಳ್ಳಾಪುರದಲ್ಲಿ ಅಬ್ಬರಿಸಿದ ಕೈ ನಾಯಕರು; ರಮೇಶ್ ಜಾರಕಿಹೊಳಿ ಮಂಚದ ಮಂತ್ರಿ ಎಂದ ಡಿ.ಕೆ ಶಿವಕುಮಾರ್​

ಇಂದು ಜಿಲ್ಲೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿ ಸ್ಥಳೀಯ ಶಾಸಕರು ಬಿಜೆಪಿ ಜೆಡಿಎಸ್​ ವಿರುದ್ದ ವಾಗ್ವಾದ ನಡೆಸಿದ್ದಾರೆ.

Prajadwani Yatre: ದೊಡ್ಡಬಳ್ಳಾಪುರದಲ್ಲಿ ಅಬ್ಬರಿಸಿದ ಕೈ ನಾಯಕರು; ರಮೇಶ್ ಜಾರಕಿಹೊಳಿ ಮಂಚದ ಮಂತ್ರಿ ಎಂದ ಡಿ.ಕೆ ಶಿವಕುಮಾರ್​
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jan 25, 2023 | 8:46 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು(ಜ.24) ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನ ಹಮ್ಮಿಕೊಂಡಿದ್ದು, ಸಾವಿರಾರು ಜನ ಕಾರ್ಯಕರ್ತರು, ಮುಖಂಡರು ನಗರದ ಭಗತ್ ಸಿಂಗ್ ಕ್ರೀಡಾಂಗಣಕ್ಕೆ ಬಂದಿದ್ದು ಎಲ್ಲರೂ ಸಹ ನಾಯಕರ ಭಾಷಣಕ್ಕೆ ಎರಡು ಗಂಟೆಗಳಿಗೂ ಅಧಿಕ ಕಾಲ ಕಾದು ಕುಳಿತಿದ್ದರು. ಬಳಿಕ ಕೈ ನಾಯಕರು ಬರ್ತಿದ್ದಂತೆ ವೇದಿಕೆ ಮೇಲೇರಿ ಮೈಕ್​ ಹಿಡಿದು ಜೆಡಿಎಸ್ ಮತ್ತು ಬಿಜೆಪಿ ವಿರುದ್ದ ಮಾತಿನ ಯುದ್ದವನ್ನ ನಡೆಸಿದರು. ಮೊದಲಿಗೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(D. K. Shivakumar) ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದೆ ಬರ್ತಿವಿ ಆದರೆ ಬೆಳಗಾವಿನಲ್ಲಿ ಒಬ್ಬ ಮಾಜಿ ಮಂಚದ ಮಂತ್ರಿ 10 ಕೋಟಿ ಹೆಚ್ಚಾಗಿ ಖರ್ಚು ಮಾಡಿಯಾದರೂ ಸರಿ ಒಂದು ಓಟಿಗೆ 6 ಸಾವಿರ ಹಣಕೊಟ್ಟು ಕೊಂಡುಕೊಳ್ತಿವಿ ಅಂತಿದ್ದಾನೆ. ಅಂತವರ ವಿರುದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಬಾಷಣ ಮುಗಿಸಿ ಬರ್ತಿದ್ದಂತೆ ಮೈಕ್ ಮುಂದೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಬಿಜೆಪಿ ವಿರುದ್ದ ಮಾತಿನ ಯುದ್ದವನ್ನ ಮುಂದುವರೆಸಿದ್ರು. ನಾವು ಬಿಜೆಪಿ ಪಾಪದ ಪುರಾಣದ ಪುಸ್ತಕ ಹೊರ ತಂದಿದ್ವಿ ಹೀಗಾಗಿ ಬಿಜೆಪಿ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪಗಳನ್ನ ಮಾಡ್ತಿದೆ. ಅಲ್ಲದೆ ನಮ್ಮಲ್ಲೆ ಇದ್ದು ನಮ್ಮಿಂದ ಹೋದ ಪಕ್ಕದ ಕ್ಷೇತ್ರದ ಗಿರಾಕಿಯಿಂದ ನಮ್ಮ ಮೇಲೆ ಆರೋಪಗಳನ್ನ ಬೊಮ್ಮಾಯಿ ಮಾಡಿಸುತ್ತಿದ್ದಾನೆ. ಬೊಮ್ಮಾಯಿ ಈಸ್ ಕ್ರಿಮಿನಲ್ ಎಂದಿದ್ದಾರೆ. ಜೊತೆಗೆ ಬೊಮ್ಮಾಯಿ ಮತ್ತು ಅವರ ಮಂತ್ರಿ ಮಂಡಲ ಹೇಗೆ ಅಂದ್ರೆ ನಾವು ಶಾಲೆಯಲ್ಲಿ ಆಲಿಬಾಬ ಮತ್ತು ಕಳ್ಳರು ಅಂತ ಓದಿದ್ವಿ ಹಾಗೆ ಇವರು ಭೂತದ ಬಾಯಲ್ಲಿ ಮಂತ್ರ ಹೇಳಿಸುತ್ತಾರೆ ಎಂದು ಕಿಡಿಕಾರಿದರು. ಇನ್ನು ಮುಂದೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನೇಕಾರರಿಗೆ 20 ಹೆಚ್​ಪಿ ವಿದ್ಯುತ್ ಉಚಿತವಾಗಿ ನೀಡಲಿದ್ದೇವೆ. ಜೊತೆಗೆ 50 ಕ್ವಿಂಟಾಲ್​ವರೆಗೂ ರೈತರ ರಾಗಿಯನ್ನ ಸರ್ಕಾರ ಖರೀದಿ ಮಾಡಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ:ತುಮಕೂರು: ಪ್ರಜಾಧ್ವನಿ ಯಾತ್ರೆ ಕೇವಲ ಕಾಂಗ್ರೆಸ್ ಯಾತ್ರೆಯಲ್ಲ, ಹೊಸ ಬದಲಾವಣೆಗಾಗಿ ರೂಪುಗೊಂಡ ಯಾತ್ರೆ: ರಣದೀಪ್ ಸಿಂಗ್ ಸುರ್ಜೇವಾಲ

ಒಟ್ಟಾರೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ನಾಯಕರು ಜನರ ಮನಗೆಲ್ಲುವುದರ ಜೊತೆಗೆ ಮುಂದಿನ ಚುನಾವಣೆಯಲ್ಲಿ ಜಯಗಳಿಸಲು ಆರೋಪ ಪ್ರತ್ಯಾರೋಪಗಳ ಸುರಿಮಳೆಯನ್ನ ಸುರಿಸುತ್ತಿದ್ದಾರೆ.ಯಾರ ಪಾಲಿಗೆ ಮತದಾರ ಒಲಿಯಲಿದ್ದಾನೆ ಕಾದು ನೋಡಬೇಕಾಗಿದೆ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:42 pm, Wed, 25 January 23

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ