AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿ ಯೋಗೇಶ್ವರ್‌ ನಿದ್ದೆಗೆಡಿಸಿದೆ ಜಮೀರ್!

ಸಚಿವ ಜಮೀರ್ ಅಹಮ್ಮದ್ ಖಾನ್ ಆಡಿದ ಮಾತೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕಂಪನ ಎಬ್ಬಿಸಿದೆ. ಫಲಿತಾಂಶಕ್ಕೂ ಮುನ್ನವೇ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನೀಡಿದ ಹೇಳಿಕೆ ಕಾಂಗ್ರೆಸ್ ಮನೆಯಲ್ಲಿ ನಾನಾ ಚರ್ಚೆ ಹುಟ್ಟು ಹಾಕಿದೆ. ಯೋಗೇಶ್ವರ್ ಹೇಳಿಕೆಯಿಂದ ಕಾಂಗ್ರೆಸ್ಸಿಗರ ಸಿಟ್ಟು ಸಚಿವ ಜಮೀರ್ ಕಡೆಗೆ ತಿರುಗಿದೆ.

ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿ ಯೋಗೇಶ್ವರ್‌ ನಿದ್ದೆಗೆಡಿಸಿದೆ ಜಮೀರ್!
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 15, 2024 | 3:11 PM

Share

ಬೆಂಗಳೂರು, (ನವೆಂಬರ್ 15): ಸಂಡೂರು ಹಾಗೂ ಶಿಗ್ಗಾಂವಿ ಉಪಚುನಾವಣೆ ಫಲಿತಾಂಶಕ್ಕಿಂತ ಚನ್ನಪಟ್ಟಣ ರಿಸಲ್ಟ್​ ಭಾರೀ ಕುತೂಹಲ ಕೆರಳಿಸಿದೆ. ಚನ್ನಪಟ್ಟಣದಲ್ಲಿ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಜೋರಾಗಿವೆ. ಆದ್ರೆ, ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್​ ಆಡಿದ ಹತಾಶೆಯ ಮಾತುಗಳನ್ನು ಗಮನಿಸಿದರೆ ಕಾಂಗ್ರೆಸ್​ ಸೋಲು ಆತಂಕದಲ್ಲಿದೆ. ಒಕ್ಕಲಿಗ ಸಮುದಾಯದ ಮತಗಳು ತಮಗೆ ಕಡಿಮೆ ಬಂದಿರಬಹುದೆಂಬ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಮಾಜಿ ಸಂಸದ ಡಿ.ಕೆ ಸುರೇಶ ಪ್ರತಿಕ್ರಿಯಿಸಿದ್ದಾರೆ. ನಾವೆಲ್ಲಾ ಆತ್ಮವಿಶ್ವಾಸದಿಂದ ಇದ್ದೇವೆ. ಯೋಗೇಶ್ವರ್ ಯಾವ ಆಯಾಮದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಯೋಗೇಶ್ವರ್ ಹೇಳಿಕೆ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಯೋಗೇಶ್ವರ್ ಅಲ್ಲಿನ ರಾಜಕೀಯ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಅವರ ಹೇಳಿಕೆಗೆ ಮಹತ್ವ ಕೊಡೋದು ಬೇಡ ಎಂದಿದ್ದಾರೆ. ಅಷ್ಟಕ್ಕೂ ವಿಷ್ಯ ಏನಂದ್ರೆ, ಜಮೀರ್ ಆಡಿದ್ದ ಮಾತೇ ಚನ್ನಪಟ್ಟಣದಲ್ಲಿ ಮುಳುವಾಗುತ್ತೆಂಬ ಚರ್ಚೆ ಶುರುವಾಗಿದೆ. ದೇವೇಗೌಡರ ಕುಟುಂಬವನ್ನ ಖರೀದಿಸ್ತೀವಿ. ಕರಿಯಾ ಎಂದು ನೀಡಿದ್ದ ಹೇಳಿಕೆಗಳು ಉಲ್ಟಾ ಹೊಡೆದಿವೆ ಎನ್ನಲಾಗ್ತಿದೆ. ಹೀಗಾಗಿಯೇ ಸಿ.ಪಿ ಯೋಗೇಶ್ವರ್, ಜಮೀರ್ ಹೇಳಿಕೆಯಿಂದ ಲಾಭವೂ ಆಗಿದೆ, ನಷ್ಟವೂ ಆಗಿದೆ ಅನ್ನೋ ಅರ್ಥದಲ್ಲಿ ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, JDS ಕೆಲಸ ಬಹಳಷ್ಟು ವರ್ಕೌಟ್ ಆಗಿದೆ: ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಸೋಲೋಪ್ಪಿಕೊಂಡ್ರಾ?

ಆದ್ರೆ, ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದ ಜಮೀರ್, ನನ್ನ ಅವರು ಕುಳ್ಳ ಅಂತಾರೆ ಎಂದಿದ್ರು. ಇದಕ್ಕೆ ತಿರುಗೇಟು ಕೊಟ್ಟಿರೋ ಹೆಚ್‌ಡಿಕೆ, ನಾನು ಯಾವತ್ತೂ ಜಮೀರ್‌ರನ್ನ ಕುಳ್ಳ ಎಂದಿಲ್ಲ ಎಂದಿದ್ದಾರೆ. ಇನ್ನೂ ಡಿ.ಕೆ ಸುರೇಶ್, ಕರಿಯಾ ಅಂದ್ರೆ ಏನ್ ಮಾಡೋಕಾಗುತ್ತೆ ಅಂತೇಳೋ ಮೂಲಕ ಜಮೀರ್ ಹೇಳಿಕೆಯಿಂದ ಎಫೆಕ್ಟ್ ಆಗಿಲ್ಲ ಅನ್ನೋ ಅರ್ಥದಲ್ಲಿ ಮಾತನಾಡಿದ್ದಾರೆ.

ಇನ್ನೂ ದೇವೇಗೌಡರ ಕುಟುಂಬವನ್ನ ಖರೀದಿ ಮಾಡುವ ತಾಕತ್ತಿದೆ ಎಂಬ ಹೇಳಿಕೆಯಿಂದಲೂ ಹಿನ್ನೆಡೆಯಾಯ್ತು ಎಂಬ ಚರ್ಚೆಯೂ ಆಗುತ್ತಿದೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಹೆಚ್‌ಡಿಕೆ, ಇದೆಲ್ಲ ದುಡ್ಡಿನ ಮದ ಎಂದು ತಿವಿದಿದ್ದಾರೆ. ಇದಕ್ಕೂ ಸಮರ್ಥನೆ ನೀಡಿರೋ ಡಿಕೆ ಸುರೇಶ್, ಆ ರೀತಿಯಾಗಿ ಜಮೀರ್ ಹೇಳಿಲ್ಲ ಎಂದಿದ್ದಾರೆ.

ಜಮೀರ್ ಹೇಳಿಕೆ ಮೈತ್ರಿ ನಾಯಕರಿಗೆ ಅಸ್ತ್ರವಾಗಿದ್ರೆ, ಯೋಗೇಶ್ವರ್ ಹೇಳಿಕೆ ಬಳಿಕ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದೆ. ಆದ್ರೆ, ಕಾಂಗ್ರೆಸ್ ಮನೆಯಲ್ಲೇ ಆಕ್ರೋಶ ಭುಗಿಲೆದ್ದಿದ್ದು, ಮಂಡ್ಯದಲ್ಲಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಜಮೀರ್‌ರನ್ನ ಪ್ರಚಾರಕ್ಕೆ ಕರೆಸಬಾರದಿತ್ತು. ಪ್ರಚಾರಕ್ಕೆ ಕರೆಸಿ ತಪ್ಪು ಮಾಡಿದ್ರು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ಈ ಮಧ್ಯೆ ಜಮೀರ್ ವಿರುದ್ಧ ಒಕ್ಕಲಿಗ ಸಮುದಾಯವೂ ಸಿಡಿದೆದ್ದಿದ್ದು, ನೆಲಮಂಗಲದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕುಣಿಗಲ್ ಸರ್ಕಲ್‌ನಿಂದ ಱಲಿ ನಡೆಸಿ ಜಮೀರ್ ಪ್ರತಿಕೃತಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಜಮೀರ್ ಆಡಿದ ಎರಡು ಮಾತು, ಯೋಗೇಶ್ವರ್‌ ನಿದ್ದೆಗೆಡಿಸಿದೆ. ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿದೆ. ಒಕ್ಕಲಿಗರನ್ನ ಬಡಿದೆಬ್ಬಿಸಿದೆ. ರಿಸಲ್ಟ್ ಏನಾಗುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!