AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR Ramesh Kumar ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ :ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ.

KR Ramesh Kumar ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ :ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ
ಕೋಲಾರ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ -ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ
TV9 Web
| Edited By: ಸಾಧು ಶ್ರೀನಾಥ್​|

Updated on:Jul 29, 2022 | 7:39 PM

Share

ಕೋಲಾರ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ (Kolar Congress) ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್ (KR Ramesh Kumar) ಹಲ್ಲೆ (Attack) ನಡೆಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯ ದೃಶ್ಯ ಸೆರೆ ಹಿಡಿಯುವಾಗ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್. ಮುನಿಯಪ್ಪ ಬಣದವರು ಕಿತ್ತಾಟ ನಡೆಸಿದ್ದರು. ಕೈ ಕೈ ಮಿಲಾಯಿಸುವ ಹಂತಕ್ಕೂ ಕಾರ್ಯಕರ್ತರು ತಲುಪಿದ್ದರು. ಬ್ಯಾನರ್ ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಬೆಂಬಲಿಗರು ಪ್ರಶ್ನೆ ಮಾಡಿದ್ದರು. ಬಳಿಕ ಎರಡೂ ಬಣದವರ ನಡುವೆ ಮಾತಿಗೆ ಮಾತು ಬೆಳೆದು,ಕಿತ್ತಾಟ ನಡೆಯುತ್ತಿತ್ತು. ಈ ಗಲಾಟೆಯ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ರಮೇಶ್ ಕುಮಾರ್ ಕೋಪಗೊಂಡು ಹಲ್ಲೆ ನಡೆಸಿದ್ದಾರೆ. ಸಭೆಯಲ್ಲಿ ಚೇರಿನಲ್ಲಿ ಕುಳಿತಿದ್ದ ರಮೇಶ್ ಕುಮಾರ್ ಎದ್ದು ಬಂದು ಇಬ್ಬರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ, ಕೋಪೋದ್ರಿಕ್ತರಾಗಿದ್ದ ರಮೇಶ್ ಕುಮಾರ್ ಸಭೆಯಿಂದ ದಿಢೀರನೆ ಹೊರ ನಡೆದಿದ್ದಾರೆ. ಹಿರಿಯ ನಾಯಕ ರಮೇಶ್ ಕುಮಾರ್ ಅವರ ಈ ನಡೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

Published On - 3:15 pm, Fri, 29 July 22

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ