AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ವಿರುದ್ಧ ಸ್ವಪಕ್ಷ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿದ್ದಾರೆ. ಆದರೆ, ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೆ ಏರಿದೆ, ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ವಾಗ್ದಾಳಿ
ಬೇಳೂರು ಗೋಪಾಕೃಷ್ಣ ಮತ್ತು ಮಧು ಬಂಗಾರಪ್ಪ
Malatesh Jaggin
| Edited By: |

Updated on:Dec 02, 2023 | 2:42 PM

Share

ಬೆಂಗಳೂರು, ಡಿ.2: ಸಚಿವ ಮಧು ಬಂಗಾರಪ್ಪ (Madhu Bangarappa) ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Gopala Krishna) ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಇದನ್ನೂ ಓದಿ: ಶಿವಮೊಗ್ಗ ಕಾಂಗ್ರೆಸ್​​​ನಲ್ಲಿ ಶೀತಲ ಸಮರ: ಲೋಕಸಭೆ ಚುನಾವಣೆಗೆ ಮೊದಲೇ ಅಸಮಧಾನ ಸ್ಫೋಟ

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರೆಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

ಮೂರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಗೋಪಾಲಕೃಷ್ಣ, ಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯ ಓಡಾಡಿದ್ದರು. ಆದರೆ ಕೇವಲ 65 ಸೀಟ್​ಗಳು ಬಂದಿವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ. ಆದರೂ ಅಧಿಕಾರಕ್ಕೆ ಬಂದಿಲ್ಲ ಎಂದರು.

ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಯಡಿಯೂರಪ್ಪ ಮಗ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಎಂದು ಪ್ರಶ್ನಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Sat, 2 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್