AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ವಿರುದ್ಧ ಸ್ವಪಕ್ಷ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿದ್ದಾರೆ. ಆದರೆ, ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೆ ಏರಿದೆ, ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ವಾಗ್ದಾಳಿ
ಬೇಳೂರು ಗೋಪಾಕೃಷ್ಣ ಮತ್ತು ಮಧು ಬಂಗಾರಪ್ಪ
ಮಾಲತೇಶ ಜಗ್ಗೀನ್
| Edited By: |

Updated on:Dec 02, 2023 | 2:42 PM

Share

ಬೆಂಗಳೂರು, ಡಿ.2: ಸಚಿವ ಮಧು ಬಂಗಾರಪ್ಪ (Madhu Bangarappa) ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Gopala Krishna) ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಇದನ್ನೂ ಓದಿ: ಶಿವಮೊಗ್ಗ ಕಾಂಗ್ರೆಸ್​​​ನಲ್ಲಿ ಶೀತಲ ಸಮರ: ಲೋಕಸಭೆ ಚುನಾವಣೆಗೆ ಮೊದಲೇ ಅಸಮಧಾನ ಸ್ಫೋಟ

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರೆಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

ಮೂರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಗೋಪಾಲಕೃಷ್ಣ, ಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯ ಓಡಾಡಿದ್ದರು. ಆದರೆ ಕೇವಲ 65 ಸೀಟ್​ಗಳು ಬಂದಿವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ. ಆದರೂ ಅಧಿಕಾರಕ್ಕೆ ಬಂದಿಲ್ಲ ಎಂದರು.

ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಯಡಿಯೂರಪ್ಪ ಮಗ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಎಂದು ಪ್ರಶ್ನಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Sat, 2 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ