AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆಗೆ ಕರೆದಿಲ್ಲವೆಂದು ಸಿಎಂ ಕಾರ್ಯಕ್ರಮದಿಂದ ಹೊರ ನಡೆದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್

ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ, ಆಮಂತ್ರಣ ಪತ್ರ ನೀಡಲಾಗಿತ್ತು. ಆದರೆ ವೇದಿಕೆಗೆ ಕರೆಯದೇ ಅವಮಾನಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮ ಬಿಜೆಪಿಯ ಕಾರ್ಯಕ್ರಮದಂತಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕಾರ ಮಾಡುವುದಾಗಿ ಹೇಳಿ ಎಂ.ವೈ.ಪಾಟೀಲ್ ಹೊರ ನಡೆದಿದ್ದಾರೆ.

ವೇದಿಕೆಗೆ ಕರೆದಿಲ್ಲವೆಂದು ಸಿಎಂ ಕಾರ್ಯಕ್ರಮದಿಂದ ಹೊರ ನಡೆದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್
ಎಂ.ವೈ.ಪಾಟೀಲ್
TV9 Web
| Edited By: |

Updated on:Jul 10, 2021 | 2:49 PM

Share

ಕಲಬುರಗಿ: ಕಣ್ಣಿ ಮಾರುಕಟ್ಟೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕೈ ಶಾಸಕರನ್ನು ವೇದಿಕೆ ಮೇಲೆ ಕರೆದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್, ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ. ಕಾಂಗ್ರೆಸ್​ನ ಯಾವುದೇ ಶಾಸಕರನ್ನು ವೇದಿಕೆಗೆ ಆಹ್ವಾನಿಸಿಲ್ಲ. ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಅಂತ ಆರೋಪಿಸಿದ ಎಂ.ವೈ.ಪಾಟೀಲ್, ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.

ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ, ಆಮಂತ್ರಣ ಪತ್ರ ನೀಡಲಾಗಿತ್ತು. ಆದರೆ ವೇದಿಕೆಗೆ ಕರೆಯದೇ ಅವಮಾನಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮ ಬಿಜೆಪಿಯ ಕಾರ್ಯಕ್ರಮದಂತಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕಾರ ಮಾಡುವುದಾಗಿ ಹೇಳಿ ಎಂ.ವೈ.ಪಾಟೀಲ್ ಹೊರ ನಡೆದಿದ್ದಾರೆ.

ಪ್ರಧಾನಿ ಮೋದಿ ರೈತ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ರೈತರ ಪರವಾಗಿ ಶೋಭಾ ಕರಂದ್ಲಾಜೆ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಅವರು ರಾಜ್ಯದ ರೈತರ ಸಮಸ್ಯೆಗಳನ್ನು ಕೇಂದ್ರಕ್ಕೆ ತಿಳಿಸಲಿದ್ದಾರೆ. ಹೆಚ್ಚಿನ ಕೆಲಸ ಮಾಡುವ ಶಕ್ತಿ ಶೋಭಾ ಕರಂದ್ಲಾಜೆ ಅವರಿಗೆ ನೀಡಲಿ. ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇಂತಹ ಒಳ್ಳೆಯ ಕಾಲ ಬಂದಿರೋದು ನಮ್ಮ ಸುದೈವ ಎಂದು ನಗರದ ಕಣ್ಣಿ ತರಕಾರಿ ಮಾರುಕಟ್ಟೆಯಲ್ಲಿ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ ಕಲಬುರಗಿಯಲ್ಲಿ ನೂತನ ಕಣ್ಣಿ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚಿಂತನೆಯೂ ನಡೆದಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದರೆ ತಿಳಿಸುತ್ತೇನೆ ಎಂದರು. ಸಂಸದೆ ಸುಮಲತಾ, ಹೆಚ್.ಡಿ.ಕುಮಾರಸ್ವಾಮಿ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ರೀತಿಯಾಗಿ ಕಚ್ಚಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಸಹೋದರರಂತೆ ಬಾಳುವುದನ್ನು ಕಲಿಯಬೇಕು. ಅಲ್ಲಿನ ಅಭಿವೃದ್ಧಿ ಬಗ್ಗೆ ಎಲ್ಲರೂ ಒಟ್ಟಾಗಿ ಹೋಗಬೇಕು. ಅಂಬಿ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು ನನಗೆ ಸಮಾಧಾನವಿದೆ ಎಂದು ಅಭಿಪ್ರಾಯಪಟ್ಟರು.

ಸಾಲ ವಿತರಣೆಗೆ ಚಾಲನೆ ಡಿಸಿಸಿ ಬ್ಯಾಂಕ್​ನಿಂದ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆಗೆ ಬಿಎಸ್​ವೈ ಚಾಲನೆ ನೀಡಿದರು. 50 ಕೋಟಿ ರೂಪಾಯಿ ಸಾಲ ವಿತರಣೆಗೆ ಸಿಎಂ ಚಾಲನೆ ನೀಡಿದ್ದಾರೆ. ಕಲಬುರಗಿಯ ರಂಗಮಂದಿರದಲ್ಲಿ ಡಿಸಿಸಿ ಬ್ಯಾಂಕ್ ಕಾರ್ಯಕ್ರಮ ನಡೆಯಿತು. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಾಲದ ಚೆಕ್​ನ ಮುಖ್ಯಮಂತ್ರಿ ವಿತರಿಸಿದ್ದಾರೆ.

ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಜಿಲ್ಲೆಯಲ್ಲಿ ಪಿಡಬ್ಲ್ಯುಡಿ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಚೆಕ್​​ ವಿತರಿಸಿದ್ದಾರೆ.

ಇದನ್ನೂ ಓದಿ

ಮುಕ್ಕಾಲು ಎಕರೆ ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಆದಾಯ ಗಳಿಸಿದ ರೈತ; ಬಿಬಿಎಂ ಪದವೀಧರನ ಕೃಷಿ ಒಲವು

ಕೆಆರ್​ಎಸ್​ ಒಡೆದಿಲ್ಲ ಅಂತಿದ್ದಾರೆ ಅಧಿಕಾರಿಗಳು, ಈಗಲಾದರೂ ಕ್ಷಮೆ ಕೇಳಿ ವಿವಾದಕ್ಕೆ ಇಲ್ಲಿಗೇ ತೆರೆ ಎಳೆಯೋಣ -ದಳಪತಿಗಳಿಂದ ಹಸಿರು ಬಾವುಟ

(Congress MLA MY Patil walked out of the CM program in Kalaburagi)

Published On - 12:50 pm, Sat, 10 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?