AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಸಾವು ಪ್ರಕರಣ: ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಗಂಭೀರ ಆರೋಪ

ಜಿಲ್ಲಾಡಳಿತ ಮೃತಪಟ್ಟವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೃತಪಟ್ಟವರ ಪಟ್ಟಿಯಲ್ಲಿ ಹನೂರು ಕ್ಷೇತ್ರದವರ ಹೆಸರು ಇಲ್ಲ. ಹನೂರು ಕ್ಷೇತ್ರದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆದರೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಲ್ಲ.

24 ಸಾವು ಪ್ರಕರಣ: ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಗಂಭೀರ ಆರೋಪ
ಜಿಲ್ಲಾಧಿಕಾರಿ ಎಂ.ಆರ್.ರವಿ
sandhya thejappa
|

Updated on: May 04, 2021 | 8:37 AM

Share

ಚಾಮರಾಜನಗರ: ರಾಜ್ಯದಲ್ಲಿ ಆಕ್ಸಿಜನ್ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಆಕ್ಸಿಜನ್ ಸಿಗದೆ ಪ್ರತಿದಿನ ಸಾವನ್ನಪ್ಪುತ್ತಿದ್ದಾರೆ. ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಿಗದೆ 24 ಗಂಟೆಯಲ್ಲಿ ಸುಮಾರು 24 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. 24 ರೋಗಿಗಳೆಲ್ಲರೂ ಆಕ್ಸಿಜನ್ ಸಿಗದೆ ಸಾವನ್ನಪ್ಪಿಲ್ಲ. ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದವರು ಸಾವನ್ನಪ್ಪಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಈ ನಡುವೆ ಸಾವಿನ ಸಂಖ್ಯೆ ಸರಿಯಾಗಿ ಹೇಳುತ್ತಿಲ್ಲವೆಂದು ಕೆಲವರು ಆರೋಪಿಸುತ್ತಿದ್ದಾರೆ. ಹನೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆಂದು ಇದೀಗ ಗಂಭೀರವಾಗಿ ಆರೋಪಿಸುತ್ತಿದ್ದಾರೆ.

ಜಿಲ್ಲಾಡಳಿತ ಮೃತಪಟ್ಟವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೃತಪಟ್ಟವರ ಪಟ್ಟಿಯಲ್ಲಿ ಹನೂರು ಕ್ಷೇತ್ರದವರ ಹೆಸರು ಇಲ್ಲ. ಹನೂರು ಕ್ಷೇತ್ರದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆದರೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಲ್ಲ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಜಿಲ್ಲಾಡಳಿತ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ ಎಂದು ಆರೋಪಿಸುತ್ತಿರುವ ಶಾಸಕ ಆರ್.ನರೇಂದ್ರ ಸಾವಿನ ಸಂಖ್ಯೆ ಮುಚ್ಚಿಡುತ್ತಿಲ್ಲವೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿಯನ್ನು ತರಾಟೆ ತೆಗೆದುಕೊಂಡರು.

ಜಿಲ್ಲಾಡಳಿತ ಎಲ್ಲವನ್ನೂ ಮುಚ್ಚಿಡುತ್ತಿದೆ ಎಂದು ಜಿಲ್ಲಾಧಿಕಾರಿ ಎದುರಲ್ಲಿಯೇ ಶಾಸಕರು ಗಂಭೀರ ಆರೋಪ ಮಾಡಿದರು. ಈ ವೇಳೆ ಶಾಸಕರ ಬಾಯಿಯನ್ನು ಮುಚ್ಚಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮುಂದಾದರು. ಅಲ್ಲೇ ಜಿಲ್ಲಾಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ

ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊರೊನಾ ಲಾಕ್​ಡೌನ್​ನಿಂದ ಕುಸಿದು ಬಿತ್ತು ಕೃಷಿ ಉತ್ಪನ್ನಗಳ ಬೆಲೆ; ಕೋಲಾರದ ರೈತರಲ್ಲಿ ಹೆಚ್ಚಿದ ಆತಂಕ

(Congress MLA R Narendra is blaming district collector for death toll in Chamarajanagar)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು