AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?

ಮಾಜಿ ಸಿ.ಎಂ. ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?
ಕಾಂಗ್ರೆಸ್ ಶಾಸಕ ರಾಮಪ್ಪ
TV9 Web
| Edited By: |

Updated on:Apr 06, 2022 | 11:03 PM

Share

ದಾವಣಗೆರೆ: ಬಿಜೆಪಿ ನಾಯಕ ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕ ರಾಮಪ್ಪ ಜೈಕಾರ ಹಾಕಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಕುರುಬರ ಸಮಾವೇಶದಲ್ಲಿ ಹರಿಹರದ ಕಾಂಗ್ರೆಸ್ ಶಾಸಕ ರಾಮಪ್ಪ ಹೀಗೆ ಜೈಕಾರ ಹಾಕಿದ್ದಾರೆ. ದಾವಣೆಗೆರೆಯ ಬೀರಲಿಂಗೇಶ್ವರ ದೇಗುಲದ ಆವರಣದಲ್ಲಿ ಕುರುಬ ಸಮುದಾಯದ ಎಸ್​​ಟಿ ಮೀಸಲಾತಿ ಸಮಾವೇಶ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ. ಈ ಬಗ್ಗೆ ವೇದಿಕೆಯಲ್ಲೇ ‘ಕೈ’ ಶಾಸಕ ಎಸ್.ರಾಮಪ್ಪ ಒತ್ತಾಯಿಸಿದ್ದಾರೆ. ಈಶ್ವರಪ್ಪ ಸಿಎಂ ಆಗಲೇಬೇಕು ಎಂದು ಜೈಕಾರ ಹಾಕಿದ್ದಾರೆ.

ಇನ್ನೊಂದೆಡೆ ಶಾಸಕ ಆರ್.ಶಂಕರ್ ಮತ್ತೊಂದು ಬಗೆಯ ಹೇಳಿಕೆ ನೀಡಿದ್ದಾರೆ. ನಾನು ಈಗಾಗಲೇ ಮಂತ್ರಿಯಾಗಿರಬೇಕಾಗಿತ್ತು. ಯಾಕೋ ಸಚಿವನಾಗುವ ಅವಕಾಶ ಮುಂದೆ ಹೋಗುತ್ತಿದೆ. ಮಂತ್ರಿ ಮಾಡುವುದಾಗಿ ಯಡಿಯೂರಪ್ಪ ಹೇಳುತ್ತಿದ್ದಾರೆ. ಯಾಕೋ ಗೊತ್ತಿಲ್ಲ. ಅದು ಮುಂದಕ್ಕೆ ಹೋಗುತ್ತಿದೆ ಎಂದು ದಾವಣಗೆರೆಯಲ್ಲಿ ಶಾಸಕ ಆರ್.ಶಂಕರ್ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಗೋ ಪೂಜೆ ಮಾಡಲು ಹೊರಟಾಗ ಸಚಿವ ಈಶ್ವರಪ್ಪಗೆ ಗೋವಿನ ಗುದ್ದು!

Published On - 6:11 pm, Wed, 6 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?