AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಬೆಡ್ ಸಿಗದ ಹಿನ್ನೆಲೆ; ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ವಶಕ್ಕೆ

ಬೆಡ್ ಸಮಸ್ಯೆ ಸರಿಮಾಡಿ, ಬೆಡ್ ಕೊಡಿಸಿ, ನಂತರ ಪ್ರತಿಭಟನೆ ನಿಲ್ಲಿಸುವುದಾಗಿ ಸೌಮ್ಯ ರೆಡ್ಡಿ ಮತ್ತು ತಂಡ ವಾದ ಮಾಡಿದ್ಧಾರೆ. ಹೀಗೆ ಪ್ರತಿಭಟನೆ ಕೈಬಿಡದ ಕಾರಣಕ್ಕೆ ಸೌಮ್ಯ ರೆಡ್ಡಿ ಹಾಗೂ ಪ್ರತಿಭಟನಾಕಾರರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಸೋಂಕಿತರಿಗೆ ಬೆಡ್ ಸಿಗದ ಹಿನ್ನೆಲೆ; ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ವಶಕ್ಕೆ
ಸೌಮ್ಯಾ ರೆಡ್ಡಿ
TV9 Web
| Edited By: |

Updated on:Aug 23, 2021 | 12:51 PM

Share

ಬೆಂಗಳೂರು: ಕೊರೊನಾ ಸೋಂಕಿತರಿಗೆ ಬೆಡ್ ಸಿಗದ ಹಿನ್ನೆಲೆ ಪ್ರತಿಭಟನೆ ನಡೆಸುತ್ತಿದ್ದ ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಧರಣಿ ನಡೆಸುತ್ತಿದ್ದ ಸೌಮ್ಯಾ ರೆಡ್ಡಿ ಮತ್ತು ಬೆಂಬಲಿಗರನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ವಲಯದ ಕಚೇರಿ ಬಳಿ ಸೌಮ್ಯಾ ರೆಡ್ಡಿ ಧರಣಿ ನಡೆಸುತ್ತಿದ್ದರು. ಪ್ರತಿಭಟನೆ ಕೈಬಿಡುವಂತೆ ಸೌಮ್ಯಾ ರೆಡ್ಡಿಗೆ ಪೊಲೀಸರು ಮನವಿ ಮಾಡಿದ್ದರು. ಪೊಲೀಸರ ಮನವಿಗೆ ಬಗ್ಗದ ಹಿನ್ನೆಲೆ ಸೌಮ್ಯಾ ರೆಡ್ಡಿ ವಶಕ್ಕೆ ಪಡೆಯಲಾಗಿದೆ.

ಸರ್ಕಾರ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕಿ ಸೌಮ್ಯಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಆಯುಕ್ತರನ್ನ ಕರೆಸಿ ಎಂದು ಸೌಮ್ಯಾ ಒತ್ತಾಯಮಾಡಿದ್ದರು. ಈಗಾಗಲೇ ನಿಮ್ಮ ಕಮಿಷನರ್ ಫೇಕ್ ಎಫ್​ಐಆರ್ ಹಾಕಿದ್ದಾರೆ. ನನ್ನ ಸಾಯಿಸಿ ಬಿಡಿ ಎಂದು ಶಾಸಕಿ ಸೌಮ್ಯ ರೆಡ್ಡಿ ಪ್ರತಿಭಟಿಸಿದ್ದಾರೆ. ಸೌಮ್ಯ ರೆಡ್ಡಿ ವ್ಯಾನ್​ಗೆ ಹತ್ತಿಸಲು ಹೆಚ್ಚುವರಿ ಮಹಿಳಾ ಪೊಲೀಸರನ್ನು ಅಧಿಕಾರಿಗಳು ಕರೆಸಿಕೊಂಡಿದ್ದಾರೆ.

ಬೆಡ್ ಸಮಸ್ಯೆ ಸರಿಮಾಡಿ, ಬೆಡ್ ಕೊಡಿಸಿ, ನಂತರ ಪ್ರತಿಭಟನೆ ನಿಲ್ಲಿಸುವುದಾಗಿ ಸೌಮ್ಯ ರೆಡ್ಡಿ ಮತ್ತು ತಂಡ ವಾದ ಮಾಡಿದ್ಧಾರೆ. ಹೀಗೆ ಪ್ರತಿಭಟನೆ ಕೈಬಿಡದ ಕಾರಣಕ್ಕೆ ಸೌಮ್ಯ ರೆಡ್ಡಿ ಹಾಗೂ ಪ್ರತಿಭಟನಾಕಾರರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದಲ್ಲಿ ಇಂದು ಅತಿಹೆಚ್ಚು ಸೋಂಕಿತರು ಪತ್ತೆ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ 50 ಸಾವಿರದ ಗಡಿ ದಾಟಿದೆ. ರಾಜ್ಯದ ವಿವಿಧೆಡೆ ಬುಧವಾರ (ಮೇ 5) ಒಟ್ಟು 50,112 ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು 346 ಮಂದಿ ಸಾವನ್ನಪ್ಪಿದ್ದಾರೆ. ಇಂದು ವರದಿಯಾಗಿರುವ ಸೋಂಕಿತರ ಒಟ್ಟು ಸಂಖ್ಯೆಯು ಈವರೆಗಿನ ಗರಿಷ್ಠ ಸಂಖ್ಯೆ ಎನಿಸಿದೆ.

ಕರ್ನಾಟಕದ ಒಟ್ಟು ಸೋಂಕಿತರ ಸಂಖ್ಯೆ 17,41,046ಕ್ಕೆ (17.41 ಲಕ್ಷ) ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ 16,884 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 12,36,854 (12.36 ಲಕ್ಷ) ಜನರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಅಗಿದ್ದಾರೆ. 4,87,288 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ 

ಕೊವಿಡ್ 3ನೇ ಅಲೆ ತಡೆ ಅಸಾಧ್ಯ, ಕೊರೊನಾವೈರಸ್ ಸೋಂಕು ಅಧಿಕ: ಕೇಂದ್ರ ಸರ್ಕಾರ

Published On - 8:57 pm, Wed, 5 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು