AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zameer Ahmed: ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು; ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ಆರೋಪ

HD Kumaraswamy: ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿಕೆ ಮಾಡಿದ್ದಾರೆ. ಸದಾಶಿವ ನಗರದ ಗೆಸ್ಟ್​​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ.

Zameer Ahmed: ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು; ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ಆರೋಪ
ಜಮೀರ್ ಅಹ್ಮದ್. ಕುಮಾರಸ್ವಾಮಿ
TV9 Web
| Edited By: |

Updated on:Jun 09, 2021 | 8:16 PM

Share

ಬೆಂಗಳೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ. ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿಕೆ ಮಾಡಿದ್ದಾರೆ. ಸದಾಶಿವ ನಗರದ ಗೆಸ್ಟ್​​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ.

ಸದಾಶಿವ ನಗರದ ಗೆಸ್ಟ್​​ಹೌಸ್​​ಗೆ ಗನ್​ಮ್ಯಾನ್​ಗಳು ಪ್ರವೇಶ ಮಾಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗನ್​ಮ್ಯಾನ್​ಗಳು ಬೀಗ ಮುರಿದು ಒಳನುಗ್ಗಿದ್ದಾರೆ. ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ದೂರು ಸಲ್ಲಿಸಲಾಗಿದೆ.

ಸದಾಶಿವನಗರದ ಗೆಸ್ಟ್​ಹೌಸ್ ತೆರವು ಮಾಡಿದ್ದರು. ಕುಮಾರಸ್ವಾಮಿಗೆ ಸೇರಿದ ಅಗತ್ಯ ವಸ್ತುಗಳು ಅಲ್ಲಿದ್ದವು. ಗೆಸ್ಟ್​​ಹೌಸ್ ಕೀಲಿ ಶಾಸಕ ಜಮೀರ್ ಅಹ್ಮದ್​ ಬಳಿಯಿತ್ತು. ಜಮೀರ್​ಗೆ ಭೋಜೇಗೌಡ ಕರೆ ಮಾಡಿ ಟೈಮ್​ ಕೇಳಿದ್ದರು. ಅದಕ್ಕೆ 2 ದಿನ ಕಾಲಾವಕಾಶ ಕೇಳಿದ್ದ ಎಸ್.ಎಲ್.ಭೋಜೇಗೌಡ. ಈ ನಡುವೆ ಹೆಚ್​ಡಿಕೆ ಪಲ್ಟಿ ಗಿರಾಕಿ ಎಂದು ಜಮೀರ್ ಹೇಳಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆ ಗಲಾಟೆ ತಾರಕ್ಕೇರಿತ್ತು. ಹಾಗಾಗಿ, ನಿಖಿಲ್ ಕುಮಾರಸ್ವಾಮಿ ಗನ್ ಮ್ಯಾನ್ ಬೀಗ ಮುರಿದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಸದಾಶಿವನಗರದ ಎಂದರೆ ಹೆಚ್ ಡಿ ಕುಮಾರಸ್ವಾಮಿ ಅಥವಾ ಹೆಚ್ ಡಿ ಕುಮಾರಸ್ವಾಮಿ ಎಂದರೆ ಸದಾಶಿವನಗರ ಎನ್ನುವ ಕಾಲವೊಂದಿತ್ತು. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರಿಗೆ ಜಮೀರ್ ಬಹಳ ಆಪ್ತರಾಗಿದ್ದರು ಆಗ ಜಮೀನನ್ನು ಕುಮಾರಸ್ವಾಮಿಯವರಿಗೆ ಬಿಟ್ಟುಕೊಟ್ಟಿದ್ದರು. ಅದು ಎಷ್ಟರ ಮಟ್ಟಿಗೆ ಗುರುತಿಸಲ್ಪಟ್ಟಿತ್ತು ಎಂದರೆ ಗೆಸ್ಟ್ ಹೌಸ್ ಅನ್ನು ಕುಮಾರಸ್ವಾಮಿಯವರೇ ಕೊಂಡುಕೊಂಡಿದ್ದಾರೆ ಅವರ ಹೆಸರಿನಲ್ಲಿಯೇ ಇದೆ ಎಂದು ಜನ ನಂಬಿದ್ದರು ಆದರೆ ಕುಮಾರಸ್ವಾಮಿ ಮತ್ತು ಜಮೀರ್ ಅವರ ನಡುವೆ ಬಿರುಕು ಬಿಟ್ಟು ಕಾಂಗ್ರೆಸ್ಸಿಗೆ ಹೋಗಿದ್ದರೂ ಸಹ ವಿಚಾರ ಇಷ್ಟು ಕೆಳಕ್ಕೆ ಇದ್ದಿರಲಿಲ್ಲ ಬಿದ್ದಿರಲಿಲ್ಲ. ಈಗ ಹಾಗೆ ಬಾಗಿಲು ಮುರಿದು ಒಳಗೆ ಹೋಗಲು ಯತ್ನಿಸಿದ್ದಾರೆ ಎಂಬ ಆರೋಪ ಬಂದಿರುವುದು ಒಂದು ವಿಚಿತ್ರ ಆದರೂ ಸತ್ಯ.

ಇದನ್ನೂ ಓದಿ: Zameer on HDK : ಕುಮಾರಸ್ವಾಮಿ ಅಧಿಕಾರಕ್ಕಾಗಿ ಯಾವಾಗ ಬೇಕಾದರೂ ಪಲ್ಟಿ ಹೊಡಿತಾನೆ

ಕರ್ನಾಟಕದಲ್ಲಿ ಕಾಂಗ್ರೆಸ್ ಮೂಲೆಗುಂಪಾಗುವಂಥ ತಂತ್ರ ಹೆಣಿ: ಕುಮಾರಸ್ವಾಮಿಗೆ ದೇವೇಗೌಡರ ಕಿವಿಮಾತು

Published On - 7:16 pm, Wed, 9 June 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ