AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಶೂಟಿಂಗ್ ಸಾಮಾನ್ ಇದೆ ಅಂದ್ರೆ ನನಗೆ ಕೇಳ್ಬೇಕಿತ್ತು, ಮನೆ ಬಾಗಿಲು ಮುರಿಯೋದಾ ಕುಮಾರಸ್ವಾಮಿ: ಜಮೀರ್ ಅಹಮದ್​ ಪ್ರಶ್ನೆ

HD Kumaraswamy: ಟಿವಿ9 ಜೊತೆ ಮಾತನಾಡಿದ ಜಮೀರ್ ಅಹಮದ್ ಖಾನ್ ‘ಕುಮಾರಸ್ವಾಮಿ ಕಡೆಯವರ ಮೇಲೆ ಡಕಾಯತಿ ಕೇಸ್ ಹಾಕಬೇಕು ಅಂತಾ ಹೇಳಿದ್ದಾರೆ. ಮನೆ ಬೀಗ ಒಡೆದು ನುಗ್ಗಿದರೆ ಏನ್ ಮಾಡಬೇಕು ಹೇಳಿ? ನನ್ನ ಮನೆ, ನಾನು ಬೀಗ ಹಾಕಿಕೊಂಡರೆ ತಪ್ಪೇನು? ಎಂದು ನಿನ್ನೆಯ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಿಖಿಲ್ ಶೂಟಿಂಗ್ ಸಾಮಾನ್ ಇದೆ ಅಂದ್ರೆ ನನಗೆ ಕೇಳ್ಬೇಕಿತ್ತು, ಮನೆ ಬಾಗಿಲು ಮುರಿಯೋದಾ ಕುಮಾರಸ್ವಾಮಿ: ಜಮೀರ್ ಅಹಮದ್​ ಪ್ರಶ್ನೆ
ನಿಖಿಲ್ ಶೂಟಿಂಗ್ ಸಾಮಾನ್ ಇದೆ ಅಂದ್ರೆ ನನಗೆ ಕೇಳ್ಬೇಕಿತ್ತು, ಮನೆ ಬಾಗಿಲು ಮುರಿಯೋದಾ ಕುಮಾರಸ್ವಾಮಿ: ಜಮೀರ್ ಅಹಮದ್​ ಪ್ರಶ್ನೆ
TV9 Web
| Edited By: |

Updated on:Jun 10, 2021 | 1:29 PM

Share

ಚಡ್ಡಿ ದೋಸ್ತ್​​ಗಳಂತಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಎಚ್​ಡಿ ಕುಮಾರಸ್ವಾಮಿ ಮತ್ತು ಮಾಜಿ ಮಂತ್ರಿ, ಕಾಂಗ್ರೆಸ್​ ಶಾಸಕ ಜಮೀರ್​ ಅಹಮದ್ ಖಾನ್​ ಅವರ ನಡುವಣ ಕಲಹ ಮತ್ತೊಂದು ಮಜಲಿಗೆ ಬಂದು ನಿಂತಿದೆ. ಜೆಡಿಎಸ್​ ನಾಯಕ ಎಚ್​ಡಿ ಕುಮಾರಸ್ವಾಮಿ ಯಾವ ಬಣ್ಣದ ಚಡ್ಡಿ ಹಾಕಿಕೊಂಡಿದ್ದರು ಅಂತಾ ನನಗೆ ಗೊತ್ತು ಎಂದು ಕಳೆದ ಸಾರ್ವತ್ರಿಕ ಚುನಾವಣೆ ಪ್ರಚಾರದ ವೇಳೆ ಸಾರ್ವತ್ರಿಕವಾಗಿ ಕೆಳ ಹಂತಕ್ಕೆ ಜಾರಿದ್ದ ಉಭಯ ನಾಯಕರ ನಡುವಣ ಕಾದಾಟ, ನಿನ್ನೆಯಿಂದ ದಿಢೀರನೆ ಮತ್ತೆ ಕಾಣಿಸಿಕೊಂಡಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗನ್​ಮ್ಯಾನ್​ಗಳು ಬೀಗ ಮುರಿದು ಒಳನುಗ್ಗಿದ್ದಾರೆ. ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ಜಮೀರ್​ ದೂರು ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅಲ್ಲಿ ತಮ್ಮ ಪುತ್ರನ ಶೂಟಿಂಗ್​ ಪರಿಕರಗಳು ಇದ್ದವು. ಅದನ್ನು ತೆಗೆದುಕೊಡು ಬರಲು ಹೋಗಿದ್ದರು ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದರು.

ಆದರೆ ಇದಕ್ಕೆ ತಿರುಗೇಟು ನೀಡಿರುವ ಶಾಸಕ ಜಮೀರ್​ ಅಹಮದ್, ಕುಮಾರಸ್ವಾಮಿ ಅವರು ತಮ್ಮ ಪುತ್ರ, ನಟ ನಿಖಿಲ್ ಗೌಡ ಅವರ ಶೂಟಿಂಗ್ ಸಾಮಾನ್ ಗೆಸ್ಟ್​ ಹೌಸ್​ನಲ್ಲಿ ಇದೆ ಅಂತಾ ನನಗೆ ಕೇಳ್ಬೇಕಿತ್ತು. ಆಗ ನಾನೇ ನಿಂತು ಬಾಗಿಲು ತೆಗೆಸಿ ಅವರಿಗೆ ಸೇರಿದ ಸಾಮಾನು ತೆಗೆದುಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯ ಪ್ರಕರಣದ ಬಗ್ಗೆ ಟಿವಿ9 ಜೊತೆ ಮಾತನಾಡಿದ ಜಮೀರ್ ಅಹಮದ್ ಖಾನ್ ‘ಕುಮಾರಸ್ವಾಮಿ ಕಡೆಯವರ ಮೇಲೆ ಡಕಾಯತಿ ಕೇಸ್ ಹಾಕಬೇಕು ಅಂತಾ ಹೇಳಿದ್ದಾರೆ. ಮನೆ ಬೀಗ ಒಡೆದು ನುಗ್ಗಿದರೆ ಏನ್ ಮಾಡಬೇಕು ಹೇಳಿ? ನನ್ನ ಮನೆ, ನಾನು ಬೀಗ ಹಾಕಿಕೊಂಡರೆ ತಪ್ಪೇನು? ಕುಮಾರಸ್ವಾಮಿಗೆ 2001ರಲ್ಲಿ ಕೂರಲು ಜಾಗ ಇರಲಿಲ್ಲ. ಆಗ ಸದಾಶಿವನಗರದಲ್ಲಿದ್ದ ನನ್ನ ಗೆಸ್ಟ್ ಹೌಸ್ ಹಾಗೂ ಯುಬಿ ಸಿಟಿಯಲ್ಲಿದ್ದ ನನ್ನ ಗೆಸ್ಟ್ ಹೌಸ್ ಗಳನ್ನು ನಾನೇ ಕೊಟ್ಟಿದ್ದು. ಆಗ ನಾನೇ ಕೊಟ್ಟಿದ್ದು, ಅವರಿಗೆ ಯಾರೂ ಇರಲಿಲ್ಲ ಆಗ, ಈಗ ಅವರು ದೊಡ್ಡವರಾಗಿದ್ದಾರೆ ಅಂತಾ ಜಮೀರ್​ ಆಕ್ರೋಶ, ಅಸಮಾಧಾನ ಹೊರಹಾಕಿದರು.

ಇದಕ್ಕೂ ಮುನ್ನ ನಿನ್ನೆ ಬುಧವಾರ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ. ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸದಾಶಿವ ನಗರದ ಗೆಸ್ಟ್​​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂಬುದು ದೂರು.

ಸದಾಶಿವ ನಗರದ ಗೆಸ್ಟ್​​ಹೌಸ್​​ಗೆ ಗನ್​ಮ್ಯಾನ್​ಗಳು ಪ್ರವೇಶ ಮಾಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗನ್​ಮ್ಯಾನ್​ಗಳು ಬೀಗ ಮುರಿದು ಒಳನುಗ್ಗಿದ್ದಾರೆ. ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆಂದು ದೂರು ಸಲ್ಲಿಸಲಾಗಿದೆ. ಅದರೆ ಕುಮಾರಸ್ವಾಮಿ ಅವರ ಆಪ್ತ ಭೋಜೇಗೌಡರು ಕ್ಷಮೆಯಾಚಿಸಿದ್ದರಿಂದ ದೂರು ನೀಡಿಲ್ಲ ಎಂದೂ ಜಮೀರ್​ ಅಹ್ಮದ್​ ಇದೇ ವೇಳೆ ಹೇಳಿದ್ದಾರೆ.

ಸದಾಶಿವನಗರದ ಎಂದರೆ ಹೆಚ್ ಡಿ ಕುಮಾರಸ್ವಾಮಿ ಅಥವಾ ಹೆಚ್ ಡಿ ಕುಮಾರಸ್ವಾಮಿ ಎಂದರೆ ಸದಾಶಿವನಗರ ಎನ್ನುವ ಕಾಲವೊಂದಿತ್ತು. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರಿಗೆ ಜಮೀರ್ ಬಹಳ ಆಪ್ತರಾಗಿದ್ದರು ಆಗ ಜಮೀನನ್ನು ಕುಮಾರಸ್ವಾಮಿಯವರಿಗೆ ಬಿಟ್ಟುಕೊಟ್ಟಿದ್ದರು. ಅದು ಎಷ್ಟರ ಮಟ್ಟಿಗೆ ಗುರುತಿಸಲ್ಪಟ್ಟಿತ್ತು ಎಂದರೆ ಗೆಸ್ಟ್ ಹೌಸ್ ಅನ್ನು ಕುಮಾರಸ್ವಾಮಿಯವರೇ ಕೊಂಡುಕೊಂಡಿದ್ದಾರೆ ಅವರ ಹೆಸರಿನಲ್ಲಿಯೇ ಇದೆ ಎಂದು ಜನ ನಂಬಿದ್ದರು ಆದರೆ ಕುಮಾರಸ್ವಾಮಿ ಮತ್ತು ಜಮೀರ್ ಅವರ ನಡುವೆ ಬಿರುಕು ಬಿಟ್ಟು ಕಾಂಗ್ರೆಸ್ಸಿಗೆ ಹೋಗಿದ್ದರೂ ಸಹ ವಿಚಾರ ಇಷ್ಟು ಕೆಳಕ್ಕೆ ಇದ್ದಿರಲಿಲ್ಲ ಬಿದ್ದಿರಲಿಲ್ಲ. ಈಗ ಹಾಗೆ ಬಾಗಿಲು ಮುರಿದು ಒಳಗೆ ಹೋಗಲು ಯತ್ನಿಸಿದ್ದಾರೆ ಎಂಬ ಆರೋಪ ಬಂದಿರುವುದು ಒಂದು ವಿಚಿತ್ರ ಆದರೂ ಸತ್ಯ.

ಶಾಸಕ ಜಮೀರ್​ ಅಹಮದ್, ನಿನ್ನೆಯ ಪ್ರಕರಣದ ಬಗ್ಗೆ ಇನ್ನೂ ಏನು ಹೇಳಿದ್ದಾರೆ… ಈ ವಿಡಿಯೋ ನೋಡಿ:

ಕುಮಾರಸ್ವಾಮಿ ಉಲ್ಟಾ ಗಿರಾಕಿ ಅಂದಿದ್ದಕ್ಕೆ ಮನೆ ಬಾಗಿಲು ಮುರಿದ್ರು |Zameer ahmad|HDKumaraswamy

(congress mla Zameer ahmed khan questions HD Kumaraswamy motive behind barging in to his guest house in sadashivanagar)

Published On - 1:13 pm, Thu, 10 June 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ