AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕರ ದುಬೈ ಪ್ರವಾಸಕ್ಕೆ ಮರುಜೀವ: ಸತೀಶ್ ಜಾರಕಿಹೊಳಿ ಬೆಂಬಲಿಗರ ತಂಡದಿಂದ ಸಿದ್ಧತೆ

ಹಿಡಕಲ್ ಡ್ಯಾಮ್ ಯೋಜನೆ ಕಾಮಗಾರಿಯ ಟೆಂಡರ್​​ಗೆ ಏಕಪಕ್ಷೀಯವಾಗಿ ಅನುಮೋದನೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರದಿಂದ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶಗೊಂಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್​ನಲ್ಲಿ ಬಣ ತಿಕ್ಕಾಟ ಮತ್ತೆ ತೀವ್ರಗೊಳ್ಳುವ ಸುಳಿವು ಲಭ್ಯವಾಗಿದೆ. ಜಾರಕಿಹೊಳಿ ಬೆಂಬಲಿಗ ಶಾಸಕರ ದುಬೈ ಪ್ರವಾಸ ಮತ್ತೆ ಮುನ್ನೆಲೆಗೆ ಬಂದಿದೆ.

ಕಾಂಗ್ರೆಸ್ ಶಾಸಕರ ದುಬೈ ಪ್ರವಾಸಕ್ಕೆ ಮರುಜೀವ: ಸತೀಶ್ ಜಾರಕಿಹೊಳಿ ಬೆಂಬಲಿಗರ ತಂಡದಿಂದ ಸಿದ್ಧತೆ
ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
ಪ್ರಸನ್ನ ಗಾಂವ್ಕರ್​
| Edited By: |

Updated on: Jan 29, 2025 | 9:06 AM

Share

ಬೆಂಗಳೂರು, ಜನವರಿ 29: ಬೆಳಗಾವಿ ರಾಜಕೀಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಂಟ್ರಿಯಾದ ಬೆನ್ನಲ್ಲೇ ಬಿರುಸುಗೊಂಡಿದ್ದ ಬಣ ತಿಕ್ಕಾಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೈಕಮಾಂಡ್ ಮಧ್ಯ ಪ್ರವೇಶ, ಖಡಕ್ ಸೂಚನೆ ಬಳಿಕ ತುಸು ತಣ್ಣಗಾದಂತೆ ಕಂಡಿದ್ದ ಬಣ ಸಂಘರ್ಷ ಈಗ ಮತ್ತೆ ಮುನ್ನೆಲೆಗೆ ಬರುವ ಎಲ್ಲ ಸಾಧ್ಯತೆಗಳು ಗೋಚರಿಸಿವೆ. ಸಚಿವ ಸತೀಶ್ ಜಾರಕಿಹೊಳಿ ಬಣದ 15 ಶಾಸಕರ ತಂಡ ತೆರೆಯ ಮರೆಯಲ್ಲೇ ದುಬೈ ಪ್ರವಾಸಕ್ಕೆ ಸಿದ್ಧತೆ ಮಾಡಿಕೊಂಡಿದೆ ಎಂಬುದು ತಿಳಿದುಬಂದಿದೆ.

ಕಾಂಗ್ರೆಸ್ ಬೆಳಗಾವಿ ಸಮಾವೇಶದ (ಗಾಂಧಿ ಭಾರತ ಸಮಾವೇಶ) ಸಂದರ್ಭದಲ್ಲಿ, ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್​​ ಶಾಸಕರಿಂದ ವಿದೇಶ ಪ್ರವಾಸಕ್ಕೆ ಪ್ಲ್ಯಾನ್ ನಡೆದಿರುವ ಬಗ್ಗೆ ಚರ್ಚೆಯಾಗಿತ್ತು. ಆದರೆ, ನಂತರ ಆ ವಿಚಾರ ತಣ್ಣಗಾಗಿತ್ತು. ಆದರೆ, ಇದೀಗ ಮತ್ತೆ ಆ ವಿಷಯ ಮುನ್ನೆಲೆಗೆ ಬಂದಿದ್ದು ಪ್ರವಾಸದ ನೆಪದಲ್ಲಿ ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಮುಂದಾಗುತ್ತಿದ್ದಾರೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿಯನ್ನು ಕೆರಳಿಸಿದ ಡಿಕೆ ಶಿವಕುಮಾರ್ ನಡೆ

ತಣ್ಣಗಾಗಿದ್ದ ತಿಕ್ಕಾಟದ ಬೆಂಕಿಗೆ ಮತ್ತೆ ತುಪ್ಪ ಸುರಿದಿದ್ದೇ ಕಾಮಗಾರಿ ವಿಚಾರ. ಹಿಡಕಲ್ ಡ್ಯಾಮ್ ಪೈಪ್‌ಲೈನ್ ಕಾಮಗಾರಿಗೆ ಟೆಂಡರ್ ಅನುಮೋದನೆ ನೀಡಿದ್ದು ಸತೀಶ್ ಜಾರಕಿಹೊಳಿ ಮುನಿಸಿಗೆ ಕಾರಣ ಎನ್ನಲಾಗಿದೆ. ಬೆಳಗಾವಿಯ ಹಿಡಕಲ್ ಡ್ಯಾಮ್‌ನಿಂದ ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ 300 ಕೋಟಿ ರೂ. ಮೊತ್ತದ ಕಾಮಗಾರಿ ಟೆಂಡರ್​​ಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಕಾಮಗಾರಿ ಆರಂಭಿಸಲು ಸೈಲೆಂಟಾಗಿಯೇ ಅನುವು ಮಾಡಿಕೊಟ್ಟಿದ್ದಾರೆ. ಈ ನಡೆ ಸತೀಶ್ ಜಾರಕಿಹೊಳಿ ಅವರನ್ನು ಕೆರಳಿಸಿದೆ.

ಬೆಳಗಾವಿ ಜಿಲ್ಲೆ ಶಾಸಕರಿಂದಲೂ ಡಿಕೆಶಿ ವಿರುದ್ಧ ಆಕ್ರೋಶ

ಬೆಳಗಾವಿ ಜಿಲ್ಲೆಯ ಶಾಸಕರಿಂದಲೂ ಡಿಕೆ ಶಿವಕುಮಾರ್ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಸಿಟ್ಟು ಅವರಲ್ಲಿದೆ. ಡ್ಯಾಮ್ ಬೆಳಗಾವಿಯದ್ದು, ನೀರು ಧಾರವಾಡಕ್ಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್​​ ಶಾಸಕರಿಂದ ವಿದೇಶ ಪ್ರವಾಸಕ್ಕೆ ಪ್ಲ್ಯಾನ್: ಡಿಕೆಶಿ ಅಚ್ಚರಿಯ ಪ್ರತಿಕ್ರಿಯೆ

ಹೀಗಾಗಿ ಡಿಕೆ ಶಿವಕುಮಾರ್​ ನಿರ್ಧಾರಗಳಿಂದ ಆಕ್ರೋಶಗೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಬೆಂಬಲಿಗರ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಫೆಬ್ರವರಿ ಮೊದಲ ವಾರದವರೆಗೆ ಸುಮ್ಮನಿರಿ ಎಂದು ಸತೀಶ್ ಬೆಂಬಲಿಗ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಕಾಮಗಾರಿ ನಿಲ್ಲಿಸಲು ಡಿಸಿಗೆ ಸತೀಶ್ ಸೂಚನೆ

ಏತನ್ಮಧ್ಯೆ, ಹಿಡಕಲ್ ಡ್ಯಾಮ್ ಪೈಪ್‌ಲೈನ್ ಕಾಮಗಾರಿ ನಿಲ್ಲಿಸುವಂತೆ ಡಿಸಿಗೆ ಸತೀಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ನಡುವಣ ಸಂಘರ್ಷವನ್ನು ಮತ್ತೆ ಮುನ್ನೆಲೆಗೆ ತರುವ ಎಲ್ಲ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು