AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಕ್ಷೇತ್ರದ ಮೂಲಕ ಹೆಚ್​ಸಿ ಮಹದೇವಪ್ಪರನ್ನು ಲೋಕಸಭೆಗೆ ಕಳುಹಿಸಿ ಯತೀಂದ್ರಗೆ ಸಚಿವ ಸ್ಥಾನ ನೀಡುವ ಪ್ಲಾನ್

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಬೇಕಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ, ಸಚಿವ ಹೆಚ್​ಸಿ ಮಹದೇವಪ್ಪ ಅವರು ಚಾಮರಾಜನಗರ ಕ್ಷೇತ್ರದ ಟಿಕೆಟ್ ತನ್ನ ಪುತ್ರ ಸುನಿಲ್ ಬೋಸ್​ಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಆದರೆ, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಶಾಸಕರು, ಮಹದೇವಪ್ಪ ಅವರಿಗೇ ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್​ಗೆ ಒತ್ತಡ ಹಾಕುತ್ತಿದ್ದಾರೆ.

ಚಾಮರಾಜನಗರ ಕ್ಷೇತ್ರದ ಮೂಲಕ ಹೆಚ್​ಸಿ ಮಹದೇವಪ್ಪರನ್ನು ಲೋಕಸಭೆಗೆ ಕಳುಹಿಸಿ ಯತೀಂದ್ರಗೆ ಸಚಿವ ಸ್ಥಾನ ನೀಡುವ ಪ್ಲಾನ್
ಹೆಚ್​ಸಿ ಮಹದೇವಪ್ಪ ಮತ್ತು ಯತೀಂದ್ರ ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Mar 24, 2024 | 3:39 PM

Share

ಮೈಸೂರು, ಮಾ.24: ಇತ್ತೀಚೆಗೆ ಬಿಡುಗಡೆಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ, ಚಾಮರಾಜನಗರ (Chamarajanagara) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಘೋಷಣೆಯಾಗಿಲ್ಲ. ಈ ಕ್ಷೇತ್ರದ ಟಿಕೆಟ್ ತನ್ನ ಪುತ್ರ ಸುನಿಲ್ ಬೋಸ್​ಗೆ ನೀಡಬೇಕು ಎಂದು ಸಚಿವ ಹೆಚ್​ಸಿ ಮಹದೇವಪ್ಪ (HC Mahadevappa) ಅವರು ರಾಜ್ಯ ಮತ್ತು ಹೈಕಮಾಂಡ್​ಗೆ ನಾಯಕರಿಗೆ ಒತ್ತಾಯಿಸುತ್ತಿದ್ದಾರೆ. ಆದರೆ, ಇವರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲವು ಶಾಸಕರು, ಸುನಿಲ್ ಬೋಸ್​ಗೆ ಟಿಕೆಟ್ ಬೇಡ, ಮಹದೇವಪ್ಪ ಅವರಿಗೇ ಕೊಡಿ ಎಂದು ಹೈಕಮಾಂಡ್​ ಮೇಲೆ ಒತ್ತಡ ಹೇರುತ್ತಿದ್ದಾರೆ. ಹಾಗಿದ್ದರೆ ಒತ್ತಡ ಹಾಕುತ್ತಿರುವವರು ಯಾರು?

ಚಾಮರಾಜನಗರ ಕ್ಷೇತ್ರದಿಂದ ಸುನೀಲ್ ಬೋಸ್ ಸ್ಪರ್ಧೆ ಬೇಡ, ಮಹದೇವಪ್ಪ ಬೇಕಾದರೆ ಸ್ಪರ್ಧೆ ಮಾಡಲಿ ಎಂದು ಕೈ ಶಾಸಕರು ಹೈಕಮಾಂಡ್ ಮುಂದೆ ಹೇಳಿದ್ದಾರೆ. ಹಾಗಾದರೆ, ಶಾಸಕರು ಸಚಿವ ಸ್ಥಾನಕ್ಕಾಗಿ ಈ ರೀತಿಯ ಒತ್ತಡ ಹಾಕುತ್ತಿದ್ದಾರಾ? ಸಚಿವ ಮಹದೇವಪ್ಪ ಲೋಕಸಭೆಗೆ ಸ್ಪರ್ಧೆ ಮಾಡಿ ಗೆದ್ದರೆ ಅವರ ಸಚಿವ ಸ್ಥಾನ ತೆರವಾಗಲಿದೆ. ಇದೇ ಕಾರಣಕ್ಕೆ ಶಾಸಕರು ಮಹದೇವಪ್ಪ ಸ್ಪರ್ಧೆಗೆ ಒತ್ತಡ ಹೇರುತ್ತಿರುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ದಲಿತ ನಾಯಕನಿಗೆ ಮುಖ್ಯಮಂತ್ರಿ ಸ್ಥಾನ ಸಿಗದಿರುವುದಕ್ಕೆ ಬೇಸರ ಮತ್ತು ಅಸಮಾಧಾನ ಹೊರಹಾಕಿದ ಹೆಚ್ ಸಿ ಮಹದೇವಪ್ಪ

ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಆದರೆ, ಎಂ ಲಕ್ಷ್ಮಣ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇದೀಗ ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮಾತುಗಳು ಕೇಳಿಬರಲು ಆರಂಭವಾಗಿದೆ.

ಮಹದೇವಪ್ಪ ಅವರು ಲೋಕಸಭೆಗೆ ಸ್ಪರ್ಧಿಸಿ ಗೆದ್ದರೆ ಅವರಿಂದ ತೆರವಾಗುವ ಸಚಿವ ಸ್ಥಾನವನ್ನು ಯತೀಂದ್ರ ಅವರಿಗೆ ನೀಡುವ ಮಾತುಗಳು ಕೇಳಿಬರುತ್ತಿವೆ. ಹೌದು, ಯತೀಂದ್ರ ಅವರನ್ನ ಎಂಎಲ್​ಸಿ ಮಾಡಿ ನಂತರ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ಚರ್ಚೆ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ