AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ ಆಯ್ತು ಈಗ ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿಯ ಮಾತು! ಮತ್ತೆ ಸಿಎಂ ಬದಲಾವಣೆ ಚರ್ಚೆ

ಒಂದೆಡೆ ದಸರಾ ಹಬ್ಬದ ಸಂಭ್ರಮ ಜೋರಾಗಿದೆ. ಇತ್ತ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ ಮತ್ತೆ ಕುರ್ಚಿ ಕದನ ಎಂಬ ಬೂದಿ ಮುಚ್ಚಿದ ಕೆಂಡ ಪುಟಿದೇಳುತ್ತಿದೆ. ಸೆಪ್ಟೆಂಬರ್ ಮುಗಿದ ಬಳಿಕ ನವೆಂಬರ್ ಕ್ರಾಂತಿಯ ಮಾತುಗಳು ಶುರುವಾಗಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಆಡಿರುವ ಕೆಲ ಮಾತುಗಳು ಸಾಕಷ್ಟು ಕುತೂಹಲಕ್ಕೂ ಕಾರಣವಾಗಿವೆ!

ಸೆಪ್ಟೆಂಬರ್ ಆಯ್ತು ಈಗ ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿಯ ಮಾತು! ಮತ್ತೆ ಸಿಎಂ ಬದಲಾವಣೆ ಚರ್ಚೆ
ಸೆಪ್ಟೆಂಬರ್ ಆಯ್ತು ಈಗ ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿಯ ಮಾತು!
ಪ್ರಸನ್ನ ಗಾಂವ್ಕರ್​
| Edited By: |

Updated on:Oct 02, 2025 | 12:25 PM

Share

ಬೆಂಗಳೂರು, ಅಕ್ಟೋಬರ್ 2: ಕಾಂಗ್ರೆಸ್ (Congress) ಕುರ್ಚಿ ಅದಲುಬದಲು ಆಟದ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದ ಸೆಪ್ಟೆಂಬರ್ ಮುಗಿದು, ಅಕ್ಟೋಬರ್ ಬಂದಿದೆ. ಈಗ ನವೆಂಬರ್ ಕ್ರಾಂತಿ ಎಂಬ ಚರ್ಚೆ ಶುರುವಾಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ನಾನೇ ಸಿಎಂ ಆಗಿ ಇದ್ದೆ. ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದಿದ್ದಾರೆ. ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಎರಡೂವರೆ ವರ್ಷ ನಾನೇ ಸಿಎಂ ಆಗಿರುತ್ತೇನೆ ಎನ್ನಲು ಕಾರಣವಿದೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದೇಕೆ ಸಿದ್ದರಾಮಯ್ಯ? ಹಲವು ಚರ್ಚೆ

ನವೆಂಬರ್ ಕ್ರಾಂತಿ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್​ ತೀರ್ಮಾನದಂತೆ ನಡೆದುಕೊಳ್ಳಬೇಕು ಎಂದಿದ್ದಾರೆ. ಅಷ್ಟೇ ಅಲ್ಲ ಈ ಬಾರಿ ನೀವೇ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೀರಿ. ಮುಂದಿನ ವರ್ಷ ಪುಷ್ಪಾರ್ಚನೆ ಮಾಡುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಐ ಹೋಪ್ ಸೋ ಎನ್ನುವ ಮೂಲಕ ಅಡ್ಡಗೋಡೆ ಮೇಲೆ ದೀಪವಿಟ್ಟಿದ್ದಾರೆ.

ಅಷ್ಟಕ್ಕೂ ಸಿಎಂ ಈ ರೀತಿ ಮಾತನಾಡುವುದಕ್ಕೂ ಕಾರಣವಿದೆ. ಮಾಜಿ ಸಂಸದ ಶಿವರಾಮೇಗೌಡ ಬುಧವಾರ ಮಾತನಾಡಿ, ಡಿಕೆ ಶಿವಕುಮಾರ್ ನವೆಂಬರ್​​ನಲ್ಲಿ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಕುಣಿಗಲ್ ಕಾಂಗ್ರೆಸ್ ಶಾಸಕ ಹೆಚ್‌.ಡಿ ರಂಗನಾಥ್ ಕೂಡಾ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಅಭಿಲಾಷೆ ವ್ಯಕ್ತಪಡಿಸಿದ್ದು, ಸ್ಥಾನಮಾನದ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು ಎಂದಿದ್ದಾರೆ.

ಶಿವರಾಮೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಹೆಚ್‌.ಸಿ ಮಹದೇವಪ್ಪ, ವ್ಯಯಕ್ತಿಕ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಸಿಎಂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: 5 ವರ್ಷವೂ ನಾನೇ ಸಿಎಂ: ವಿರೋಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಕ್ಕರ್​

ಆದರೆ, ಬಿಜೆಪಿ ನಾಯಕರು ಮಾತ್ರ, ‘ಕಾಂಗ್ರೆಸ್ ಸಿಎಂ ಕುರ್ಚಿಯ ಜಗಳ ಬೀದಿಗೆ ಬಂದಿದೆ. ನವೆಂಬರ್ ಕ್ರಾಂತಿ ಶತಸಿದ್ಧ’ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಸಿಎಂ, ಬಿಜೆಪಿಯವರು ಭವಿಷ್ಯಕಾರರಲ್ಲ ಅಂತಾ ಗುಡುಗಿದ್ದಾರೆ. ಒಟ್ಟಿನಲ್ಲಿ ನವೆಂಬರ್ ಕ್ರಾಂತಿಯ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್​ನೊಳಗಿದ್ದವರೇ ಸಿಎಂ ಕುರ್ಚಿ ಬದಲಾವಣೆ ಸುಳಿವು ಕೊಡುತ್ತಿರುವುದು ಕುತೂಹಲ ಕೆರಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Thu, 2 October 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ