Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಚರ್ಚೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಹಿಂದ ವರ್ಸಸ್ ದಲಿತ ಸಮಾವೇಶಕ್ಕೆ ಪ್ಲ್ಯಾನ್

ದಲಿತ ಸಮಾವೇಶಗಳ ಕುರಿತು ಚರ್ಚೆ ಸುದ್ದಿ ಬೆನ್ನಲ್ಲೇ ಪರಮಾಪ್ತ ಡಾ.H.C.ಮಹದೇವಪ್ಪ ಜೊತೆಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಗೌಪ್ಯ ಸ್ಥಳದಲ್ಲಿ ನಿನ್ನೆ ಮಹದೇವಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು.

ಸಿಎಂ ಚರ್ಚೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಹಿಂದ ವರ್ಸಸ್ ದಲಿತ ಸಮಾವೇಶಕ್ಕೆ ಪ್ಲ್ಯಾನ್
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Jun 28, 2021 | 2:25 PM

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಭವಿಷ್ಯದ ಸಿಎಂ ಚರ್ಚೆ ಬೆನ್ನಲ್ಲೇ ಅಹಿಂದ ವರ್ಸಸ್ ದಲಿತ ಸಮಾವೇಶ ಕೂಗು ಕೇಳಿ ಬಂದಿದೆ. ಅಹಿಂದ ಸಮಾವೇಶಗಳಿಗೆ ಸಿದ್ದರಾಮಯ್ಯ ಪ್ಲ್ಯಾನ್ ಹಿನ್ನೆಲೆಯಲ್ಲಿ ಅಹಿಂದ ಪ್ಲ್ಯಾನ್ಗೆ ದಲಿತ ಸಮಾವೇಶದ ಕೌಂಟರ್ ಪ್ಲ್ಯಾನ್ ಮಾಡಲಾಗಿದೆ. ಕಾಂಗ್ರೆಸ್ ದಲಿತ ನಾಯಕರಿಂದ ದಲಿತ ಸಮಾವೇಶಗಳಿಗೆ ಪ್ಲ್ಯಾನ್ ನಡೆಯುತ್ತಿದೆ.

ದಲಿತ ಸಮಾವೇಶಗಳ ಕುರಿತು ಚರ್ಚೆ ಸುದ್ದಿ ಬೆನ್ನಲ್ಲೇ ಪರಮಾಪ್ತ ಡಾ.H.C.ಮಹದೇವಪ್ಪ ಜೊತೆಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಗೌಪ್ಯ ಸ್ಥಳದಲ್ಲಿ ನಿನ್ನೆ ಮಹದೇವಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ದಲಿತ ಸಮಾವೇಶ ಮಾಡಿದರೆ ಅಹಿಂದ ಸಮಾವೇಶಕ್ಕೆ ಹಿನ್ನಡೆಯಾಗುತ್ತೆ. ಆದ್ದರಿಂದ ಅಹಿಂದ ಹೋರಾಟಕ್ಕೆ ಚಾಲನೆ ನೀಡಲು ಕಸರತ್ತು ಮಾಡಲಾಗುತ್ತಿದೆ. ದಲಿತ ಸಮಾವೇಶಗಳಿಗೆ ಮಹದೇವಪ್ಪ ಸಹಕಾರಕ್ಕೆ ಮನವಿ ಮಾಡಿದ್ದಾರೆ. ಮಹದೇವಪ್ಪ ಜೊತೆ ಡಾ.ಜಿ.ಪರಮೇಶ್ವರ್ ಹಾಗೂ ಇತರರ ಚರ್ಚೆ ನಡೆಸಿದ್ದು ದಲಿತ ನಾಯಕರು ಮಹದೇವಪ್ಪರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ.

ದಲಿತ ಸಮಾವೇಶ ನಡೆಸಲು ದಲಿತ ನಾಯಕರ ಪ್ಲ್ಯಾನ್ ನಾವೇ ಅಹಿಂದ ಸಮಾವೇಶ ನಡೆಸೋಣವೆಂದು ಮನವರಿಕೆ ಮಾಡಿದ್ದಾರೆ. ಮಹದೇವಪ್ಪ ಜೊತೆ ಸಿದ್ದರಾಮಯ್ಯ ಒಂದು ಸುತ್ತಿನ ಚರ್ಚೆ ನಡೆಸಿ ಅಹಿಂದ ಸಮಾವೇಶ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಸಿಎಂ ಗಾದಿ ಮೇಲೆ ಕಣ್ಣಿಟ್ಟ ಕೈ ನಾಯಕರಿಂದ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ. ಪಕ್ಷದ ವೇದಿಕೆ ಬಿಟ್ಟು ಸಮುದಾಯ ಸಮಾವೇಶಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಭಾರತದ ಮೊದಲ ‘ಆಕಸ್ಮಿಕ’ ಪ್ರಧಾನಿ ಪಿ.ವಿ.ನರಸಿಂಹ ರಾವ್ ಇತಿಹಾಸದಲ್ಲಿ ತಮ್ಮ ಸ್ಥಾನವನ್ನು ಗಳಿಸಿದ್ದು ಹೇಗೆ?

ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ