AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಕಾಂಗ್ರೆಸ್ ‘ಟ್ರೆಂಡ್ ಅಲರ್ಟ್’ ಅಭಿಯಾನ.. ಮಧ್ಯಾಹ್ನ ಸರಣಿ ಟ್ವೀಟ್ ಮೂಲಕ ಪ್ರಶ್ನೆ

Congress Trend Alert | ರಾಜ್ಯ ಕಾಂಗ್ರೆಸ್‌ ಇಂದು ಮಧ್ಯಾಹ್ನ 2 ಗಂಟೆಯಿಂದ ಟ್ವಿಟ್ಟರ್‌ನಲ್ಲಿ ‘ಟ್ರೆಂಡ್ ಅಲರ್ಟ್’ ಅಭಿಯಾನ ಕೈಗೊಳ್ಳಲು ಸಿದ್ಧತೆ ನಡೆಸಿದೆ.

ಸರ್ಕಾರದ ವಿರುದ್ಧ ಕಾಂಗ್ರೆಸ್ ‘ಟ್ರೆಂಡ್ ಅಲರ್ಟ್’ ಅಭಿಯಾನ.. ಮಧ್ಯಾಹ್ನ ಸರಣಿ ಟ್ವೀಟ್ ಮೂಲಕ ಪ್ರಶ್ನೆ
ಸಾಂಕೇತಿಕ ಚಿತ್ರ
Follow us
ಆಯೇಷಾ ಬಾನು
|

Updated on: Apr 22, 2021 | 12:42 PM

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಇಂದು ಮಧ್ಯಾಹ್ನ 2 ಗಂಟೆಯಿಂದ ಟ್ವಿಟ್ಟರ್‌ನಲ್ಲಿ ‘ಟ್ರೆಂಡ್ ಅಲರ್ಟ್’ ಅಭಿಯಾನ ಕೈಗೊಳ್ಳಲು ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಕೊವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಅಲರ್ಟ್ ಮಾಡಲು ಕಾಂಗ್ರೆಸ್ ಮುಂದಾಗಿದ್ದು ಟ್ವಿಟ್ಟರ್‌ನಲ್ಲಿ ಸರಣಿ ಪ್ರಶ್ನೆ ಕೇಳುವ ಮೂಲಕ ಅಲರ್ಟ್ ಮಾಡಲಿದೆ.

ಕೊವಿಡ್ 2ನೇ ಅಲೆಯ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ನಿಯಂತ್ರಿಸುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್‌ಗಳನ್ನು ಒದಗಿಸಲು ಆಗ್ರಹಿಸಿ ‘ಟ್ರೆಂಡ್ ಅಲರ್ಟ್’ ನಡೆಸಲಿದ್ದಾರೆ. ಇಡೀ ಸರ್ಕಾರ ಕೊರೊನಾ ತಡೆಗೆ ಅಣಿಯಾಗಬೇಕು.

ಲಸಿಕೆ ತಯಾರಿ 2 ಕಂಪನಿಗೆ ಸೀಮಿತವಾಗಬಾರದು. ಬೇರೆ ಕಂಪನಿಗಳಿಗೂ ಅವಕಾಶ ನೀಡಬೇಕೆಂದು ಆಗ್ರಹಿಸಲಿದೆ. ಜನಸಂಖ್ಯೆಗೆ ಅನುಗುಣವಾಗಿ ಔಷಧ ತಯಾರಿಸಬೇಕು. ಎಲ್ಲ ವಯೋಮಾನದವರಿಗೂ ಲಸಿಕೆಯನ್ನು ನೀಡಬೇಕು. ಬಿಕ್ಕಟ್ಟಿನ ವೇಳೆ ಸಚಿವರ ಮಧ್ಯೆ ಸಮನ್ವಯತೆ ಇರಬೇಕು. ಈ ರೀತಿ ಹಲವು ಪ್ರಶ್ನೆ ಕೇಳುವ ಮೂಲಕ ಕಾಂಗ್ರೆಸ್‌ನಿಂದ ‘ಟ್ರೆಂಡ್ ಅಲರ್ಟ್’ ನಡೆಸಲಿದೆ. ಇನ್ನು ಟ್ರೆಂಡಿಂಗ್ ಅಲರ್ಟ್‌ನಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿಯಿಂದ ಸೂಚನೆ ನೀಡಲಾಗಿದೆ.

ಕೊವಿಡ್ ಸಂಕಷ್ಟದಲ್ಲೂ ಅಗತ್ಯ ವಸ್ತುಗಳಿಗೆ GSTಯನ್ನು ಮುಕ್ತಗೊಳಿಸಲಿಲ್ಲ. ವೆಂಟಿಲೇಟರ್‌ಗಳಿಗೆ ಶೇಕಡಾ 12ರಷ್ಟು ಜಿಎಸ್‌ಟಿ. ಆಕ್ಸಿಜನ್‌ಗೆ ಶೇ.12ರಷ್ಟು GST, ಮಾಸ್ಕ್‌ಗೆ ಶೇ.5, ಟೆಸ್ಟಿಂಗ್ ಕಿಟ್‌ಗಳಿಗೆ ಶೇಕಡಾ 12ರಷ್ಟು ಜಿಎಸ್‌ಟಿ, ಸ್ಯಾನಿಟೈಸರ್‌ಗೆ ಶೇಕಡಾ 18ರಷ್ಟು ಜಿಎಸ್‌ಟಿ ಇದೆ. ಪಿಪಿಇ ಕಿಟ್‌ಗಳಿಗೆ ಶೇ.5ರಿಂದ 12ರಷ್ಟು GST ಇದೆ. ರೆಮ್‌ಡಿಸಿವಿರ್‌ಗೆ ಶೇಕಡಾ 12ರಷ್ಟು ಜಿಎಸ್‌ಟಿ ಇದೆ. ವ್ಯಾಕ್ಸಿನ್ ಸ್ಟೋರೇಜ್‌ಗೆ ಶೇ.18ರಷ್ಟು GST ಇದೆ. ಲಸಿಕೆಗೆ ಶೇ.5ರಷ್ಟು ಜಿಎಸ್‌ಟಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕೇರಳದಲ್ಲಿ ಆಮ್ಲಜನಕಕ್ಕೆ ಇಲ್ಲ ಬರ, ತಮಿಳುನಾಡು ಕರ್ನಾಟಕಕ್ಕೆ ಇಲ್ಲಿಂದ ಪೂರೈಕೆಯಾಗಲಿದೆ ವೈದ್ಯಕೀಯ ಆಕ್ಸಿಜನ್

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ