AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಪ್ಲಾನ್; ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದೆ. ಗೆಲ್ಲುವಂತಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ, ಇಂದು ಸಭೆ ನಡೆಯಲಿದ್ದು ಚರ್ಚೆ ನಡೆಸಿ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಪ್ಲಾನ್; ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ
ಪ್ರಾತಿನಿಧಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: ಆಯೇಷಾ ಬಾನು|

Updated on: Mar 04, 2024 | 11:50 AM

Share

ಬೆಂಗಳೂರು, ಮಾರ್ಚ್.04: ಲೋಕಸಭಾ ಚುನಾವಣೆಗೆ (Lok Sabha Election) ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿವೆ. ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ಬೆನ್ನಲ್ಲೇ ಇತ್ತ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ (Congress) ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಗೆಲ್ಲುವ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಇಂದು ಅಂತಿಮ ಕಸರತ್ತು ನಡೆಯುವ ಸಾಧ್ಯತೆ ಇದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಾಯಕರ ಅಭ್ಯರ್ಥಿಗಳ ಆಯ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಅಲರ್ಟ್ ಆದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಮುಂದಾಗಿದೆ.

ಕಳೆದ ಬಾರಿ ನಡೆದ ಸಭೆಯಲ್ಲಿ ಸಮೀಕ್ಷಾ ವರದಿ ಬಗ್ಗೆ ಚರ್ಚೆ ನಡೆದಿತ್ತು. ಈಗಾಗಲೇ ವೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಎಐಸಿಸಿ, ಕೆಪಿಸಿಸಿ, ಸಿಎಂ, ಡಿಸಿಎಂ ಮಾಡಿಸಿದ್ದ ಸಮೀಕ್ಷೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಯಾವುದೇ ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಶಾರ್ಟ್​ಲಿಸ್ಟ್ ಬಿಡುಗಡೆ ಮಾಡಲಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಪ್ರತಿ ಕ್ಷೇತ್ರಕ್ಕೆ ಇಬ್ಬರ ಹೆಸರು ಶಿಫಾರಸು ಮಾಡಲಿದ್ದಾರೆ. ಕಾಂಗ್ರೆಸ್ ನಾಯಕರು ಎಐಸಿಸಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಿದ್ದಾರೆ. ರಾಜ್ಯದಲ್ಲಿ ಟಾರ್ಗೆಟ್ 20 ರೀಚ್ ಆಗಲು ಕಾಂಗ್ರೆಸ್ ನಾಯಕರ ಕಸರತ್ತು ನಡೆಸುತ್ತಿದ್ದಾರೆ. ಬೇಗ ಅಭ್ಯರ್ಥಿಗಳ ಆಯ್ಕೆಯಾದರೆ ಕ್ಷೇತ್ರದಲ್ಲಿ ಕೆಲಸ ಮಾಡಲು ಅನುಕೂಲ ಆಗುತ್ತೆ. ಸರ್ಕಾರದ ಗ್ಯಾರಂಟಿ ಯೋಜನೆ ಜೊತೆ ವೈಯಕ್ತಿಕ ಸಾಧನೆ ತಿಳಿಸಲು ಅನುಕೂಲ ಆಗುತ್ತೆ. ಹೀಗಾಗಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಂಗೇರಿದ ಮಂಡ್ಯ ಲೋಕಸಭಾ ಅಖಾಡ; ಟಿಕೆಟ್ ಘೋಷಣೆಗೂ ಮೊದಲೇ ಹಾಲಿ ಸಂಸದೆ ಸುಮಲತಾ ಫುಲ್ ಆಕ್ಟೀವ್

ಇನ್ನು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ವಾರದೊಳಗೆ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿ‌ನಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಚರ್ಚೆ ನಡೆಸಿದೆ. ಕಳೆದ ಎರಡು ದಿನಗಳಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ವರದಿಯನ್ನು ರಾಜ್ಯ ಚುನಾವಣಾ ಸಮಿತಿಗೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಸಮಿತಿ ಮತ್ತು ಕೋರ್ ಕಮಿಟಿ ವೀಕ್ಷಕರಿಂದ ಸಲ್ಲಿಕೆಯಾದ ಹೆಸರುಗಳ ಬಗ್ಗೆ ಚರ್ಚೆ ನಡೆಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ