AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ

ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ ವಿಚಾರಕ್ಕೆ ಕಾಂಗ್ರೆಸ್ ಸಿಡಿದೆದ್ದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಫೆಬ್ರವರಿ 7 ರಂದು ಬೆಳಗ್ಗೆ 11 ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಅವರು ಜಂತರ್ ಮಂತರ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ
ಫೆ.7 ರಂದು ಕೇಂದ್ರದ ವಿರುದ್ಧ ಪ್ರತಿಭಟನೆ: ದೆಹಲಿಯ ಜಂತರ್ ಮಂತರ್​​ಗೆ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರುImage Credit source: PTI
ಹರೀಶ್ ಜಿ.ಆರ್​.
| Edited By: |

Updated on: Feb 05, 2024 | 8:30 PM

Share

ನವದೆಹಲಿ, ಫೆ.5: ರಾಜ್ಯಕ್ಕೆ ಬರಬೇಕಾದ ಅನುದಾನಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ಪ್ರತಿಭಟನಾ ಸ್ಥಳ ದೆಹಲಿಯ ಜಂತರ್ ಮಂತರ್​ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್​, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ ಇದ್ದರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದು‌ ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ಜನರಿಗೆ ಮನದಟ್ಟು ಮಾಡಬೇಕು. ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಜನ ವೋಟ್ ಕೊಟ್ಟು ಗೆಲ್ಲಿಸಿದ್ದಾರೆ, ನ್ಯಾಯ ಸಲ್ಲಿಸಬೇಕಲ್ಲವೇ? ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಸ್ಟಂಟ್ ಮಾಡಲು ನಾನು ಸಿನಿಮಾ ನಟನಲ್ಲ. ಕೇಂದ್ರ ಬಳಿ ಅನುದಾನ ಕೇಳಲು ನಿಮಗೆ ಬಾಯಿ ಇಲ್ಲ ಅಂದರೆ ನಮಗೆ ಇಲ್ವಾ? ನೀವು ಇದ್ದಾಗ ಏನೂ ಮಾಡಿಲ್ಲ. ಬರ ಪರಿಹಾರಕ್ಕೆ ನಮ್ಮ ಸಚಿವರು ಬೇಡಿಕೆ ಇಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದಾರೆ. ಇದು ಸ್ಟಂಟಾ? ಮನರೇಗಾ ಕೂಲಿ ಹಣಕೊಟ್ಟಿಲ್ಲ, ಇದು ಸ್ಟಂಟಾ? ಇದು ಜನರ ಧ್ವನಿ, ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಎಂದರು.

ನಾವು ಕಟ್ಟುವ ತೆರಿಗೆಯಲ್ಲಿ ಅರ್ಧ ಕೊಡಿ ಸಾಕು. ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇವೆ. ಹಣಕಾಸು ಸಚಿವರನ್ನು ಭೇಟಿ ಮನವಿ ಮಾಡುತ್ತೇವೆ. ರಾಜ್ಯದ ಎಲ್ಲ ಸಂಸದ, ಶಾಸಕರಿಗೂ ಪ್ರತಿಭಟನೆಗೆ ಭಾಗಿಯಾಗುವಂತೆ ಮನವಿ ಮಾಡಿದ್ದೇವೆ. ನರ್ಮತೆಯಿಂದ ತಲೆಬಾಗಿ ಕೇಳಿಕೊಳ್ಳುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Harish GR
Harish GR
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ