AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ

ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಾದ ಅನುದಾನ ವಿಚಾರಕ್ಕೆ ಕಾಂಗ್ರೆಸ್ ಸಿಡಿದೆದ್ದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಫೆಬ್ರವರಿ 7 ರಂದು ಬೆಳಗ್ಗೆ 11 ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಇಂದು ಡಿಕೆ ಶಿವಕುಮಾರ್ ಅವರು ಜಂತರ್ ಮಂತರ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ
ಫೆ.7 ರಂದು ಕೇಂದ್ರದ ವಿರುದ್ಧ ಪ್ರತಿಭಟನೆ: ದೆಹಲಿಯ ಜಂತರ್ ಮಂತರ್​​ಗೆ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರುImage Credit source: PTI
ಹರೀಶ್ ಜಿ.ಆರ್​. ನವದೆಹಲಿ
| Updated By: Rakesh Nayak Manchi|

Updated on: Feb 05, 2024 | 8:30 PM

Share

ನವದೆಹಲಿ, ಫೆ.5: ರಾಜ್ಯಕ್ಕೆ ಬರಬೇಕಾದ ಅನುದಾನಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ಪ್ರತಿಭಟನಾ ಸ್ಥಳ ದೆಹಲಿಯ ಜಂತರ್ ಮಂತರ್​ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಸದ ಡಿ.ಕೆ.ಸುರೇಶ್​, ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ ಇದ್ದರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದು‌ ಸರ್ಕಾರದ ಹೋರಾಟ, ಕಾಂಗ್ರೆಸ್, ಬಿಜೆಪಿಗೆ ಸಂಬಂಧವಿಲ್ಲ. ಕೇಂದ್ರದ ಗಮನ ಸೆಳೆಯಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಅನುದಾನ ನಮ್ಮ ಹಕ್ಕು, ಜನರಿಗೆ ಮನದಟ್ಟು ಮಾಡಬೇಕು. ನಮಗೆ ಸಿಗಬೇಕಾದ ಪಾಲು ಕೊಡಿಸುವುದು ನಮ್ಮ ಕರ್ತವ್ಯ. ಜನ ವೋಟ್ ಕೊಟ್ಟು ಗೆಲ್ಲಿಸಿದ್ದಾರೆ, ನ್ಯಾಯ ಸಲ್ಲಿಸಬೇಕಲ್ಲವೇ? ಕೇಂದ್ರ ಸರ್ಕಾರದ ಬಳಿ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಸ್ಟಂಟ್ ಮಾಡಲು ನಾನು ಸಿನಿಮಾ ನಟನಲ್ಲ. ಕೇಂದ್ರ ಬಳಿ ಅನುದಾನ ಕೇಳಲು ನಿಮಗೆ ಬಾಯಿ ಇಲ್ಲ ಅಂದರೆ ನಮಗೆ ಇಲ್ವಾ? ನೀವು ಇದ್ದಾಗ ಏನೂ ಮಾಡಿಲ್ಲ. ಬರ ಪರಿಹಾರಕ್ಕೆ ನಮ್ಮ ಸಚಿವರು ಬೇಡಿಕೆ ಇಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದಾರೆ. ಇದು ಸ್ಟಂಟಾ? ಮನರೇಗಾ ಕೂಲಿ ಹಣಕೊಟ್ಟಿಲ್ಲ, ಇದು ಸ್ಟಂಟಾ? ಇದು ಜನರ ಧ್ವನಿ, ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಎಂದರು.

ನಾವು ಕಟ್ಟುವ ತೆರಿಗೆಯಲ್ಲಿ ಅರ್ಧ ಕೊಡಿ ಸಾಕು. ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇವೆ. ಹಣಕಾಸು ಸಚಿವರನ್ನು ಭೇಟಿ ಮನವಿ ಮಾಡುತ್ತೇವೆ. ರಾಜ್ಯದ ಎಲ್ಲ ಸಂಸದ, ಶಾಸಕರಿಗೂ ಪ್ರತಿಭಟನೆಗೆ ಭಾಗಿಯಾಗುವಂತೆ ಮನವಿ ಮಾಡಿದ್ದೇವೆ. ನರ್ಮತೆಯಿಂದ ತಲೆಬಾಗಿ ಕೇಳಿಕೊಳ್ಳುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!
ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾದ ಯುವಕರು
ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾದ ಯುವಕರು