AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ

3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಚುನಾವಣೆಗೆ ತಯಾರಿ ಶುರು ಮಾಡಿದೆ. ಚುನಾವಣಾ ತಯಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jun 15, 2024 | 2:56 PM

ಬೆಂಗಳೂರು, ಜೂನ್​​ 15: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಕಾಂಗ್ರೆಸ್ ತಯಾರಿ ಶುರು ಮಾಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದ್ದು, ಜೊತೆಗೆ ಬಿಬಿಎಂಪಿ ಚುನಾವಣಾ ತಯಾರಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆ ಮೂಲಕ ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ.

ಬಿಬಿಎಂಪಿ ಚುನಾವಣೆ ಬಗ್ಗೆ ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಈ ವರ್ಷ ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನು ತಡ ಮಾಡುವಂತಿಲ್ಲ, ಇದೇ ಸೆಪ್ಟಂಬರ್‌ಗೆ ಬಿಬಿಎಂಪಿ ಚುನಾವಣೆ ನಡೆದು ನಾಲ್ಕು ವರ್ಷವಾಗಲಿದೆ. ಹೀಗಾಗಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಸಭೆಯಲ್ಲಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕೋರಿದ್ದರು. ಅಲ್ಲದೆ, ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳ ರಚನೆಯ ಬಗ್ಗೆಯೂ ಚರ್ಚಿಸಲಾಗಿತ್ತು.

ಇನ್ನು ಬಿಬಿಎಂಪಿ ಚುನಾವಣೆ ನಡೆಸಲು ಈಗಾಗಲೇ ಕೋರ್ಟ್ ನಿರ್ದೇಶನ ನೀಡಿದೆ. 225 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡಲಿದ್ದೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ.

ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್‌ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ

ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಅಷ್ಟೇ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ