AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ

3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಚುನಾವಣೆಗೆ ತಯಾರಿ ಶುರು ಮಾಡಿದೆ. ಚುನಾವಣಾ ತಯಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
ಪ್ರಸನ್ನ ಗಾಂವ್ಕರ್​
| Edited By: |

Updated on: Jun 15, 2024 | 2:56 PM

Share

ಬೆಂಗಳೂರು, ಜೂನ್​​ 15: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಕಾಂಗ್ರೆಸ್ ತಯಾರಿ ಶುರು ಮಾಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದ್ದು, ಜೊತೆಗೆ ಬಿಬಿಎಂಪಿ ಚುನಾವಣಾ ತಯಾರಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆ ಮೂಲಕ ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ.

ಬಿಬಿಎಂಪಿ ಚುನಾವಣೆ ಬಗ್ಗೆ ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಈ ವರ್ಷ ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನು ತಡ ಮಾಡುವಂತಿಲ್ಲ, ಇದೇ ಸೆಪ್ಟಂಬರ್‌ಗೆ ಬಿಬಿಎಂಪಿ ಚುನಾವಣೆ ನಡೆದು ನಾಲ್ಕು ವರ್ಷವಾಗಲಿದೆ. ಹೀಗಾಗಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಸಭೆಯಲ್ಲಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕೋರಿದ್ದರು. ಅಲ್ಲದೆ, ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳ ರಚನೆಯ ಬಗ್ಗೆಯೂ ಚರ್ಚಿಸಲಾಗಿತ್ತು.

ಇನ್ನು ಬಿಬಿಎಂಪಿ ಚುನಾವಣೆ ನಡೆಸಲು ಈಗಾಗಲೇ ಕೋರ್ಟ್ ನಿರ್ದೇಶನ ನೀಡಿದೆ. 225 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡಲಿದ್ದೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ.

ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್‌ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ

ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಅಷ್ಟೇ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ