ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ

3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಚುನಾವಣೆಗೆ ತಯಾರಿ ಶುರು ಮಾಡಿದೆ. ಚುನಾವಣಾ ತಯಾರಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.

ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
ಬಿಬಿಎಂಪಿ ಚುನಾವಣೆಗೆ ತಯಾರಿ ಶುರು ಮಾಡಿದ ಕಾಂಗ್ರೆಸ್: ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ
Edited By:

Updated on: Jun 15, 2024 | 2:56 PM

ಬೆಂಗಳೂರು, ಜೂನ್​​ 15: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಕಾಂಗ್ರೆಸ್ ತಯಾರಿ ಶುರು ಮಾಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಸಭೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದ್ದು, ಜೊತೆಗೆ ಬಿಬಿಎಂಪಿ ಚುನಾವಣಾ ತಯಾರಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆ ಮೂಲಕ ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ.

ಬಿಬಿಎಂಪಿ ಚುನಾವಣೆ ಬಗ್ಗೆ ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಈ ವರ್ಷ ಬಿಬಿಎಂಪಿ ಚುನಾವಣೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನು ತಡ ಮಾಡುವಂತಿಲ್ಲ, ಇದೇ ಸೆಪ್ಟಂಬರ್‌ಗೆ ಬಿಬಿಎಂಪಿ ಚುನಾವಣೆ ನಡೆದು ನಾಲ್ಕು ವರ್ಷವಾಗಲಿದೆ. ಹೀಗಾಗಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಸಭೆಯಲ್ಲಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕೋರಿದ್ದರು. ಅಲ್ಲದೆ, ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳ ರಚನೆಯ ಬಗ್ಗೆಯೂ ಚರ್ಚಿಸಲಾಗಿತ್ತು.

ಇನ್ನು ಬಿಬಿಎಂಪಿ ಚುನಾವಣೆ ನಡೆಸಲು ಈಗಾಗಲೇ ಕೋರ್ಟ್ ನಿರ್ದೇಶನ ನೀಡಿದೆ. 225 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡಲಿದ್ದೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ.

ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್‌ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ

ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಅಷ್ಟೇ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us