AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಪ್ರತಿಭಟನೆ ಬೆನ್ನಲ್ಲೇ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್​ ಕಾರು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ​ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್​ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.

ಕಾಂಗ್ರೆಸ್​ ಪ್ರತಿಭಟನೆ ಬೆನ್ನಲ್ಲೇ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್​ ಕಾರು
ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್
Kiran HV
| Edited By: |

Updated on:Aug 21, 2024 | 1:36 PM

Share

ಬೆಂಗಳೂರು, ಆಗಸ್ಟ್​ 21: ಮುಖ್ಯಮಂತ್ರಿ ಸಿದ್ದಾರಮಯ್ಯ (Siddaramaiah) ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ (Congress)​ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ (Governor Thawar Chand Gehlot)​ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿ​ಗೆ Z ಕೆಟಗರಿ ಸೆಕ್ಯೂರಿಟಿ (Z Security) ನೀಡಿದೆ. ರಾಜ್ಯಪಾಲರು ಬುಲೆಟ್ ಪ್ರೂಫ್​ ಕಾರು ತರಿಸಿಕೊಂಡಿದ್ದಾರೆ. ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ​ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್​ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.

ರಾಜ್ಯಪಾಲರ ವಿರುದ್ಧ ಆಡಿದ ಮಾತುಗಳೇನು?

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ಮಾತನಾಡಿ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ MLC ಹೇಳಿಕೆಗೆ ಭುಗಿಲೆದ್ದ ಆಕ್ರೋಶ

ಪ್ರತಿಭಟನೆಯಲ್ಲಿ ಮಾತನಾಡಿದ್ದ, ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್, ಸಚಿವ ಕೃಷ್ಣಭೈರೇಗೌಡ ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದರು. ರಾಜ್ಯಪಾಲರೇ ನಾಚಿಕೆ ಇದ್ಯಾ ನಿಮಗೆ’ ಆಯೋಗ್ಯ ರಾಜ್ಯಪಾಲರು ಎನ್ನಬೇಕು ಎಂದು ಕಿಡಿಕಾರಿದ್ದರು.

ಬಿಜೆಪಿ ದೂರು

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್​ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರ ನಿಯೋಗ ಪೊಲೀಸ್​ ಮಹಾ ನಿರ್ದೇಶಕರಿಗೆ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:34 pm, Wed, 21 August 24

Follow Us
Kiran HV
Kiran HV
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ