AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಪ್ರತಿಭಟನೆ ಬೆನ್ನಲ್ಲೇ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್​ ಕಾರು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ​ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್​ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.

ಕಾಂಗ್ರೆಸ್​ ಪ್ರತಿಭಟನೆ ಬೆನ್ನಲ್ಲೇ ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್​ ಕಾರು
ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್
Kiran HV
| Edited By: ವಿವೇಕ ಬಿರಾದಾರ|

Updated on:Aug 21, 2024 | 1:36 PM

Share

ಬೆಂಗಳೂರು, ಆಗಸ್ಟ್​ 21: ಮುಖ್ಯಮಂತ್ರಿ ಸಿದ್ದಾರಮಯ್ಯ (Siddaramaiah) ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ (Congress)​ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ (Governor Thawar Chand Gehlot)​ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಲ್ಲದೇ, ಬಾಂಗ್ಲಾದೇಶ ಪ್ರಧಾನಿಯಂತೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿ​ಗೆ Z ಕೆಟಗರಿ ಸೆಕ್ಯೂರಿಟಿ (Z Security) ನೀಡಿದೆ. ರಾಜ್ಯಪಾಲರು ಬುಲೆಟ್ ಪ್ರೂಫ್​ ಕಾರು ತರಿಸಿಕೊಂಡಿದ್ದಾರೆ. ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ​ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್​ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.

ರಾಜ್ಯಪಾಲರ ವಿರುದ್ಧ ಆಡಿದ ಮಾತುಗಳೇನು?

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ಮಾತನಾಡಿ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ MLC ಹೇಳಿಕೆಗೆ ಭುಗಿಲೆದ್ದ ಆಕ್ರೋಶ

ಪ್ರತಿಭಟನೆಯಲ್ಲಿ ಮಾತನಾಡಿದ್ದ, ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್, ಸಚಿವ ಕೃಷ್ಣಭೈರೇಗೌಡ ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದರು. ರಾಜ್ಯಪಾಲರೇ ನಾಚಿಕೆ ಇದ್ಯಾ ನಿಮಗೆ’ ಆಯೋಗ್ಯ ರಾಜ್ಯಪಾಲರು ಎನ್ನಬೇಕು ಎಂದು ಕಿಡಿಕಾರಿದ್ದರು.

ಬಿಜೆಪಿ ದೂರು

ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್​ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರ ನಿಯೋಗ ಪೊಲೀಸ್​ ಮಹಾ ನಿರ್ದೇಶಕರಿಗೆ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:34 pm, Wed, 21 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು