AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಪಕ್ಷಾಂತರ ಎಫೆಕ್ಟ್ ಪಂಚರಾಜ್ಯಗಳ ಮೇಲೆ ಆಗುತ್ತೆ ಅಂದಿದ್ದರು, ನಿಜವಾಗಿದೆ ಎಂದ ಮಹೇಶ್ ಟೆಂಗಿನಕಾಯಿ

ಪಂಚ ರಾಜ್ಯ ಚುನಾವಣೆಗಳ ಪೈಕಿ ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ಈ ಎಲ್ಲಾ ರಾಜ್ಯಗಳಲ್ಲಿ ಗೆಲವಿನ ಕನಸು ಕಾಣುತ್ತಿದ್ದ ಕಾಂಗ್ರೆಸ್, ತೆಲಂಗಾಣ ರಾಜ್ಯವನ್ನಷ್ಟೇ ಗೆದ್ದುಕೊಂಡಿದೆ. ಇದನ್ನೇ ಮುಂದಿಟ್ಟುಕೊಂಡ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವ್ಯಂಗ್ಯವಾಡಿದ್ದಾರೆ.

ಜಗದೀಶ್ ಶೆಟ್ಟರ್ ಪಕ್ಷಾಂತರ ಎಫೆಕ್ಟ್ ಪಂಚರಾಜ್ಯಗಳ ಮೇಲೆ ಆಗುತ್ತೆ ಅಂದಿದ್ದರು, ನಿಜವಾಗಿದೆ ಎಂದ ಮಹೇಶ್ ಟೆಂಗಿನಕಾಯಿ
ಮಹೇಶ್ ಟೆಂಗಿನಕಾಯಿ ಮತ್ತು ಜಗದೀಶ್ ಶೆಟ್ಟರ್
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Dec 03, 2023 | 6:35 PM

Share

ಹುಬ್ಬಳ್ಳಿ, ಡಿ.3: ಪಕ್ಷಾಂತರ ಎಫೆಕ್ಟ್ ಪಂಚರಾಜ್ಯಗಳ ಮೇಲೆ ಆಗುತ್ತದೆ ಅಂತಾ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದರು. ಈಗ ಅವರು ಹೇಳಿದ್ದು ನಿಜವಾಗಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲಾಗಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ವ್ಯಂಗ್ಯವಾಡಿದ್ದಾರೆ.

ರಾಜಸ್ಥಾನ, ಛತ್ತೀಸಗಢದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಸೋಲಿನ ಬಗ್ಗೆ ಜಗದೀಶ್ ಶೆಟ್ಟರ್ ಮೊದಲೆ ಮಾತಾಡಿದ್ದರು. ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಶೆಟ್ಟರ್ ಹೀನಾಯವಾಗಿ ಸೋತಿದ್ದರು. ತಮ್ಮ ಭೂತ್​ನಲ್ಲಿಯೇ ಕಡಿಮೆ ಮತಗಳನ್ನು ಪಡೆದಿದ್ದರು ಎಂದು ಟಾಂಗ್ ಕೊಟ್ಟರು.

ಶೆಟ್ಟರ್ ಮೊದಲು ಕಾಂಗ್ರೆಸ್ ಮುಳಗೋ ಹಡಗು ಅಂದಿದ್ದರು. ಈ ಅವರೇ ಮುಳುಗುವ ಹಡಗು ಹತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕೂಡ ಮುಳುಗಿಸುತ್ತಿದ್ದಾರೆ. ಲೀಡರ್‌ ಲೆಸ್‌ ಪಾರ್ಟಿ ಅಂದವರು ಈಗ ಏನಂತಾರೆ? ಲೀಡರ್ ಲೆಸ್ ಪಾರ್ಟಿ ಅನ್ನೋದು ಯಾವದೂ ಗೊತ್ತಾಯ್ತಾ? ಲಿಂಗಾಯತರ ಹೆಸರಲ್ಲಿ ರಾಜಕೀಯ ಮಾಡಲು ಹೋಗಿ ಸೋತಿದ್ದಾರೆ ಎಂದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’

ಜಗದೀಶ್ ಶೆಟ್ಟರ್ ಹೆಸರು ಈಗ ಎಲ್ಲಿಯೂ ನಡೆಯಲ್ಲ. ಶೆಟ್ಟರ್ ಮಾಜಿ ಶಾಸಕ ಚಿಕ್ಕನಗೌಡರರನ್ನ ಸಿಎಮ್ ಮನೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಎಷ್ಟು ಗಂಟೆ ಕಾದರು ಗೊತ್ತಾ? ಅದನ್ನು ನೋಡಿಯೇ ಚಿಕ್ಕನಗೌಡರ ವಾಪಸ್ ಬಿಜೆಪಿಗೆ ಬಂದಿದ್ದಾರೆ ಎಂದರು. ಶೆಟ್ಟರ್ ವಾಪಸ್ ಬಿಜೆಪಿಗೆ ಬರುವ ವಿಚಾರವಾಗಿ ಮಾತನಾಡಿದ ಟೆಂಗಿನಕಾಯಿ, ನಮ್ಮ ತತ್ವ ಸಿದ್ದಾಂತ ಒಪ್ಪಿ ಬರೋರಿಗೆ ಸ್ವಾಗತ ಎಂದರು.

ಈ ಮೊದಲು ಕಾಂಗ್ರೆಸ್​ನಲ್ಲಿ ಮನೆಯೊಂದು ಮೂರು ಬಾಗಿಲಿತ್ತು. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್​ನಲ್ಲಿ ಎಷ್ಟು ಬಾಗಿಲು ಆಗತ್ತೆ ಕಾದು ನೋಡಬೇಕು. ಫಲಿತಾಂಶದ ಎಫೆಕ್ಟ್ ಕರ್ನಾಟಕದ ಮೇಲೆ ತಟ್ಟತ್ತದೆ. ಎಪ್ರೀಲ್ ಮೇ ವೇಳೆಗೆ ರಾಜಕೀಯದಲ್ಲಿ‌ ಬದಲಾವಣೆಯಾಗಲಿದೆ ಎಂದರು.

ಮೂರು ರಾಜ್ಯಗಳಲ್ಲಿ ಬಿಜೆಪಿ ಅದ್ಭುತವಾದ ಜಯ ಸಾಧಿಸಿದೆ. ಪ್ರಲ್ಹಾದ್ ಜೋಶಿಯವರು ರಾಜಸ್ತಾನದಲ್ಲಿ ಚುನಾವಣಾ ಉಸ್ತುವಾರಿ ವಹಿಸಿದ್ದರು. ಪ್ರಧಾನಿಗಳ ನೇತ್ರತ್ವದಲ್ಲಿ ಅಭೂತಪೂರ್ವ ಜಯ ಸಿಕ್ಕಿದೆ. ಕಾಂಗ್ರೆಸ್ ಗ್ಯಾರಂಟಿ ನಡಿಲಿಲ್ಲ. ಓನ್ಲಿ ಗ್ಯಾರಂಟಿ ಅಂದರೆ ಅದು ಮೋದಿಯವರು ಮತ್ತು ಬಿಜೆಪಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​