AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಕೆ.ಸುಧಾಕರ ನೀಡಿದ ‘ಏಕಪತ್ನಿವ್ರತಸ್ಥ’ ಹೇಳಿಕೆಗೆ ಕಾಂಗ್ರೆಸ್ ಪ್ರತ್ಯಸ್ತ್ರ: ಸಿದ್ದರಾಮಯ್ಯ ಮನೆಯಲ್ಲಿ ರಣತಂತ್ರ

ಸುಧಾಕರ್ ಹೇಳಿಕೆಯ ನಂತರ ಕಾಂಗ್ರೆಸ್ ಪಾಳಯ ಒಮ್ಮೆಲೆ ಚುರುಕಾಗಿದ್ದು, ಬುಧವಾರ ಹಲವು ಕ್ಷಿಪ್ರಗತಿಯ ಪ್ರತಿಕ್ರಿಯೆ ಮತ್ತು ರಾಜಕೀಯ ಬೆಳವಣಿಗೆಗಳು ಕಂಡುಬಂದವು.

ಡಾ.ಕೆ.ಸುಧಾಕರ ನೀಡಿದ ‘ಏಕಪತ್ನಿವ್ರತಸ್ಥ’ ಹೇಳಿಕೆಗೆ ಕಾಂಗ್ರೆಸ್ ಪ್ರತ್ಯಸ್ತ್ರ: ಸಿದ್ದರಾಮಯ್ಯ ಮನೆಯಲ್ಲಿ ರಣತಂತ್ರ
ವಿಪಕ್ಷ ನಾಯಕ ಸಿದ್ದರಾಮಯ್ಯ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 24, 2021 | 3:38 PM

Share

ಬೆಂಗಳೂರು: ಆರೋಗ್ಯ ಸಚಿವ ಡಾ.ಸುಧಾಕರ ನೀಡಿರುವ ಏಕಪತ್ನಿವ್ರಸ್ಥ ವಿಚಾರವನ್ನು ಪ್ರತಿಪಕ್ಷಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಕುರಿತು ವಿಶೇಷ ಕಾರ್ಯಪಡೆ (ಎಸ್​ಐಟಿ) ರಚಿಸಿ, ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರಬರೆದು ಒತ್ತಾಯಿಸಲು ಕಾಂಗ್ರೆಸ್ ನಿರ್ಧರಿಸಿದೆ. ಸುಧಾಕರ್ ಹೇಳಿಕೆಯ ನಂತರ ಕಾಂಗ್ರೆಸ್ ಪಾಳಯ ಒಮ್ಮೆಲೆ ಚುರುಕಾಗಿದ್ದು, ಬುಧವಾರ ಹಲವು ಕ್ಷಿಪ್ರಗತಿಯ ಪ್ರತಿಕ್ರಿಯೆ ಮತ್ತು ರಾಜಕೀಯ ಬೆಳವಣಿಗೆಗಳು ಕಂಡುಬಂದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ನ ಮುಂದಿನ ನಡೆ ನಿರ್ಧರಿಸಲೆಂದು ಭೋಜನಕೂಟ ಆಯೋಜಿಸಲಾಗಿದೆ. ಹಲವು ಹಿರಿಯ ನಾಯಕರು ಮತ್ತು ಶಾಸಕರು ಭೋಜನಕೂಟದಲ್ಲಿ ಪಾಲ್ಗೊಂಡಿದ್ದಾರೆ. ಸುಧಾಕರ್ ಹೇಳಿಕೆಯ ಹಿನ್ನೆಲೆಯಲ್ಲಿ ಎಸ್​ಐಟಿ ತನಿಖೆಗೆ ಒತ್ತಾಯಿಸಲು ಶಾಸಕರಿಂದ ಸಹಿ ಸಂಗ್ರಹಿಸಲು ಕಾಂಗ್ರೆಸ್ ನಿರ್ಧರಿಸಿದೆ. ಸಹಿ ಸಂಗ್ರಹದ ನಿರ್ಧಾರ ಡಿ.ಕೆ.ಶಿವಕುಮಾರ್ ಅವರದು ಎನ್ನಲಾಗಿದೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಬರೆದ ಪತ್ರ ಆಧರಿಸಿ ಗೃಹ ಸಚಿವರು ಎಸ್​ಐಟಿ ತನಿಖೆಗೆ ಸೂಚಿಸಿದ್ದಾರೆ. ಅದೇ ಮಾದರಿಯಲ್ಲಿ ಈಗ ನಮ್ಮ ಶಾಸಕರು ನೀಡಿರುವ ಪತ್ರ ಆಧರಿಸಿ, ಎಲ್ಲ ಶಾಸಕರ ವಿರುದ್ಧ ತನಿಖೆ ನಡೆಸಲು ಎಸ್​ಐಟಿಗೆ ಅಧಿಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ಒತ್ತಾಯಿಸಲಿದೆ.

ಬೆಂಗಳೂರಿನ ಗಾಂಧೀಭವನ ರಸ್ತೆಯಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂಭಾಗದ ಲಾನ್​ನಲ್ಲಿ ಶಾಮಿಯಾನಾ ಹಾಕಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಾಸಕರು, ಹಿರಿಯ ನಾಯಕರನ್ನು ವಿಶ್ವಾಸದಿಂದ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸುತ್ತಿದ್ದಾರೆ.

ಸಿದ್ದರಾಮಯ್ಯ ನಿವಾಸದಲ್ಲಿ ಯಾರೆಲ್ಲಾ ಇದ್ದಾರೆ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ಶಾಸಕರಾದ ಡಿ.ಕೆ.ಶಿವಕುಮಾರ್, ರಮೇಶ್​ಕುಮಾರ್, ಎಚ್.ಕೆ.ಪಾಟೀಲ್, ಶರತ್ ಬಚ್ಚೇಗೌಡ, ಗಣೇಶ್ ಹುಕ್ಕೇರಿ, ಪಿ.ಟಿ.‌ಪರಮೇಶ್ವರ್ ನಾಯಕ್, ಅನಿಲ್ ಚಿಕ್ಕಮಾದು, ಸತೀಶ್ ಜಾರಕಿಹೊಳಿ, ಅಭಯ ಚಂದ್ರ ಜೈನ್, ಅಂಜಲಿ ನಿಂಬಾಳ್ಕರ್, ರೂಪಾ ಶಶಿಧರ್, ಕೆ.ಜೆ. ಜಾರ್ಜ್, ಪುಟ್ಟರಂಗ ಶೆಟ್ಟಿ, ರಹಮಾನ್ ಖಾನ್, ಶಿಡ್ಲಘಟ್ಟ ಮುನಿಯಪ್ಪ, ಪ್ರಿಯಾಂಕ ಖರ್ಗೆ, ಸೌಮ್ಯ ರೆಡ್ಡಿ ಸೇರಿದಂತೆ ಹಲವು ಶಾಸಕರು ಬಂದಿದ್ದಾರೆ.

ಸಂಸದರು, ಪರಿಷತ್ ಸದಸ್ಯರನ್ನು ಬಿಟ್ಟಿದ್ದೇಕೆ? ರಾಜ್ಯದ ಎಲ್ಲ ಶಾಸಕರ ವಿರುದ್ಧ ತನಿಖೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಆಗ್ರಹ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ನಾಯಕ ರಾಮಲಿಂಗಾರೆಡ್ಡಿ, ವಿಧಾನಪ ಪರಿಷತ್ ಸದಸ್ಯರು ಮತ್ತು ಸಂಸದರನ್ನ ಕೈಬಿಟ್ಟಿದ್ದು ಏಕೆಂದು ಪ್ರಶ್ನಿಸಿದರು.

‘ಸುಧಾಕರ್ ಬುದ್ಧಿವಂತರು. ಏಕೆ ಹೀಗೆ ಹೇಳಿದ್ರೋ ಗೊತ್ತಾಗ್ತಿಲ್ಲ. ಸಚಿವ ಡಾ.ಕೆ.ಸುಧಾಕರ್ ಮಾತನಾಡಿರುವುದು ತಪ್ಪು. ಹೀಗೆ ಮಾತನಾಡಬೇಡಿ ಎಂದು ಸುಧಾಕರ್‌ಗೆ ಹೇಳ್ತೇನೆ’ ಎಂದು ಮಾಜಿ ಸಚಿವರೂ ಆಗಿರುವ ರಾಮಲಿಂಗಾರೆಡ್ಡಿ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್