AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಪಿಎಫ್​ಐ ನಿಷೇಧಕ್ಕೆ ಕಾಂಗ್ರೆಸ್​ ಸ್ವಾಗತ; ಆರ್​ಎಸ್​ಎಸ್​ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

‘ಪಿಎಫ್​ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಯ ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ’ ಎಂದು ಕಾಂಗ್ರೆಸ್​ ಪಕ್ಷವು ಟ್ವೀಟ್ ಮಾಡಿದೆ.

PFI Ban: ಪಿಎಫ್​ಐ ನಿಷೇಧಕ್ಕೆ ಕಾಂಗ್ರೆಸ್​ ಸ್ವಾಗತ; ಆರ್​ಎಸ್​ಎಸ್​ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ
ಪಿಎಫ್​ಐ ನಿಷೇಧ
TV9 Web
| Edited By: |

Updated on:Sep 28, 2022 | 12:34 PM

Share

ಬೆಂಗಳೂರು: ಪಿಎಫ್​ಐ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸಿದೆ. ‘ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. ಪಿಎಫ್​ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಯ ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ’ ಎಂದು ಕಾಂಗ್ರೆಸ್​ ಪಕ್ಷವು ಟ್ವೀಟ್ ಮಾಡಿದೆ.

ಪಿಎಫ್​ಐ ನಿಷೇಧ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ, ಕಾನೂನು ವಿರುದ್ಧವಾಗಿ ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳಿ. ಯಾರು ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್​ಗೆ ತಿರುಗೇಟು ಕೊಟ್ಟಿರುವ ಅವರು, ಇಷ್ಟು ದಿನ ಯಾಕೆ ಬ್ಯಾನ್ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು.

ಮೈಸೂರಿನ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪಿಎಫ್​ಐ ನಿಷೇಧ ಆದೇಶವು ರಾಜಕೀಯ​ ದುರುದ್ದೇಶದಿಂದ ಕೂಡಿದೆ ಎಂದು ಅನುಮಾನಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಮತಗಳನ್ನು ಗಟ್ಟಿಮಾಡಿಕೊಳ್ಳಲು ಇಂಥ ಆದೇಶ ಹೊರಡಿಸಿದ್ದಾರೆ. ಇದು ಪೂರ್ವನಿಯೋಜಿತ ಕೃತ್ಯ. ಪಿಎಫ್​ಐ ಬ್ಯಾನ್ ಹಿಂದೆ ಸಾಕಷ್ಟು ಅನುಮಾನ ಇದೆ. 4 ದಿನದ ಹಿಂದೆ ರಿಸರ್ಚ್​​ ಮಾಡಿ ಬ್ಯಾನ್ ಮಾಡಿದ್ರಾ? ವಿಚಾರಣೆ ಏನಾಯಿತು? ಅವರ ಬಳಿ ಏನು ಸಿಕ್ಕಿದೆ? ಏನು ಸಂಚು ಗೊತ್ತಾಗಬೇಕಿದೆ ಎಂದು ಆಗ್ರಹಿಸಿದರು.

ದೇಶದ ಭದ್ರತೆ, ಸುರಕ್ಷತೆಗಾಗಿ ಯಾವುದನ್ನು ಬೇಕಾದರೂ ಬಂದ್ ಮಾಡಿ. ಎಲ್ಲ ಸಂಘಟನೆಗಳನ್ನು ನಿಷೇಧಿಸಿ. ಆದರೆ ಏಕೆ ನಿಷೇಧಿಸಲಾಗಿದೆ? ಅವರ ಬಳಿ ಸಿಕ್ಕಿರುವ ದಾಖಲೆಗಳೇನು ಎನ್ನುವುದನ್ನು ಬಹಿರಂಗಪಡಿಸಿ ಎಂದು ಒತ್ತಾಯಿಸಿದರು. ನಿಷೇಧಕ್ಕಾಗಿ ಚುನಾಯಿತ ಪ್ರತಿನಿಧಿಗಳ ಹತ್ಯೆ ಯತ್ನ ಆರೋಪ ವಿಚಾರವನ್ನು ಉಲ್ಲೇಖಿಸಲಾಗಿದೆ. ಆದರೆ ನನ್ನ ಪ್ರಕರಣದಲ್ಲೂ ಇಂಥ ಯಾವುದೇ ಅಂಶ ಪ್ರಸ್ತಾಪವಾಗಿಲ್ಲ. ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಹೇಳಿದ್ದಾರೆ ಎಂದು ಹೇಳಿದರು.

ನನ್ನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಬಗ್ಗೆ ನನಗೆ ತೃಪ್ತಿಯಿಲ್ಲ. ‘ನಾನು ನಿರಂತರವಾಗಿ ಗೆಲ್ಲುತ್ತಿರುವುದೇ ನನ್ನ ಮೇಲಿನ ಹಲ್ಲೆಗೆ ಕಾರಣ’ ಎಂದಿದ್ದಾರೆ. ಆದರೆ ನಿಜವಾದ ಕಾರಣ ಬೇರೆಯೇ ಇದೆ. ಅವೆಲ್ಲವೂ ಕೂಲಂಕಷವಾಗಿ ತನಿಖೆಯಾಗಬೇಕು. ಇವರು ಕೇವಲ ಮುಸ್ಲಿಮ್ ಸಂಘಟನೆಗಳನ್ನು ಮಾತ್ರವಲ್ಲ, ಮುಸ್ಲಿಮರನ್ನೇ ಗುರಿಯಾಗಿಸಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Published On - 12:33 pm, Wed, 28 September 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ