AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI Ban: ಪಿಎಫ್​ಐ ನಿಷೇಧಕ್ಕೆ ಕಾಂಗ್ರೆಸ್​ ಸ್ವಾಗತ; ಆರ್​ಎಸ್​ಎಸ್​ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

‘ಪಿಎಫ್​ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಯ ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ’ ಎಂದು ಕಾಂಗ್ರೆಸ್​ ಪಕ್ಷವು ಟ್ವೀಟ್ ಮಾಡಿದೆ.

PFI Ban: ಪಿಎಫ್​ಐ ನಿಷೇಧಕ್ಕೆ ಕಾಂಗ್ರೆಸ್​ ಸ್ವಾಗತ; ಆರ್​ಎಸ್​ಎಸ್​ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ
ಪಿಎಫ್​ಐ ನಿಷೇಧ
TV9 Web
| Edited By: |

Updated on:Sep 28, 2022 | 12:34 PM

Share

ಬೆಂಗಳೂರು: ಪಿಎಫ್​ಐ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸಿದೆ. ‘ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. ಪಿಎಫ್​ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಯ ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ’ ಎಂದು ಕಾಂಗ್ರೆಸ್​ ಪಕ್ಷವು ಟ್ವೀಟ್ ಮಾಡಿದೆ.

ಪಿಎಫ್​ಐ ನಿಷೇಧ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ, ಕಾನೂನು ವಿರುದ್ಧವಾಗಿ ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳಿ. ಯಾರು ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಅದೇ ರೀತಿ ಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ‘ನಾವು ನುಡಿದಂತೆ ನಡೆದಿದ್ದೇವೆ’ ಎಂಬ ಬಿಜೆಪಿ ಟ್ವೀಟ್​ಗೆ ತಿರುಗೇಟು ಕೊಟ್ಟಿರುವ ಅವರು, ಇಷ್ಟು ದಿನ ಯಾಕೆ ಬ್ಯಾನ್ ಮಾಡಿರಲಿಲ್ಲ? ಇಷ್ಟು ದಿನ ಏನ್ ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು.

ಮೈಸೂರಿನ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪಿಎಫ್​ಐ ನಿಷೇಧ ಆದೇಶವು ರಾಜಕೀಯ​ ದುರುದ್ದೇಶದಿಂದ ಕೂಡಿದೆ ಎಂದು ಅನುಮಾನಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಮತಗಳನ್ನು ಗಟ್ಟಿಮಾಡಿಕೊಳ್ಳಲು ಇಂಥ ಆದೇಶ ಹೊರಡಿಸಿದ್ದಾರೆ. ಇದು ಪೂರ್ವನಿಯೋಜಿತ ಕೃತ್ಯ. ಪಿಎಫ್​ಐ ಬ್ಯಾನ್ ಹಿಂದೆ ಸಾಕಷ್ಟು ಅನುಮಾನ ಇದೆ. 4 ದಿನದ ಹಿಂದೆ ರಿಸರ್ಚ್​​ ಮಾಡಿ ಬ್ಯಾನ್ ಮಾಡಿದ್ರಾ? ವಿಚಾರಣೆ ಏನಾಯಿತು? ಅವರ ಬಳಿ ಏನು ಸಿಕ್ಕಿದೆ? ಏನು ಸಂಚು ಗೊತ್ತಾಗಬೇಕಿದೆ ಎಂದು ಆಗ್ರಹಿಸಿದರು.

ದೇಶದ ಭದ್ರತೆ, ಸುರಕ್ಷತೆಗಾಗಿ ಯಾವುದನ್ನು ಬೇಕಾದರೂ ಬಂದ್ ಮಾಡಿ. ಎಲ್ಲ ಸಂಘಟನೆಗಳನ್ನು ನಿಷೇಧಿಸಿ. ಆದರೆ ಏಕೆ ನಿಷೇಧಿಸಲಾಗಿದೆ? ಅವರ ಬಳಿ ಸಿಕ್ಕಿರುವ ದಾಖಲೆಗಳೇನು ಎನ್ನುವುದನ್ನು ಬಹಿರಂಗಪಡಿಸಿ ಎಂದು ಒತ್ತಾಯಿಸಿದರು. ನಿಷೇಧಕ್ಕಾಗಿ ಚುನಾಯಿತ ಪ್ರತಿನಿಧಿಗಳ ಹತ್ಯೆ ಯತ್ನ ಆರೋಪ ವಿಚಾರವನ್ನು ಉಲ್ಲೇಖಿಸಲಾಗಿದೆ. ಆದರೆ ನನ್ನ ಪ್ರಕರಣದಲ್ಲೂ ಇಂಥ ಯಾವುದೇ ಅಂಶ ಪ್ರಸ್ತಾಪವಾಗಿಲ್ಲ. ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಹೇಳಿದ್ದಾರೆ ಎಂದು ಹೇಳಿದರು.

ನನ್ನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಬಗ್ಗೆ ನನಗೆ ತೃಪ್ತಿಯಿಲ್ಲ. ‘ನಾನು ನಿರಂತರವಾಗಿ ಗೆಲ್ಲುತ್ತಿರುವುದೇ ನನ್ನ ಮೇಲಿನ ಹಲ್ಲೆಗೆ ಕಾರಣ’ ಎಂದಿದ್ದಾರೆ. ಆದರೆ ನಿಜವಾದ ಕಾರಣ ಬೇರೆಯೇ ಇದೆ. ಅವೆಲ್ಲವೂ ಕೂಲಂಕಷವಾಗಿ ತನಿಖೆಯಾಗಬೇಕು. ಇವರು ಕೇವಲ ಮುಸ್ಲಿಮ್ ಸಂಘಟನೆಗಳನ್ನು ಮಾತ್ರವಲ್ಲ, ಮುಸ್ಲಿಮರನ್ನೇ ಗುರಿಯಾಗಿಸಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Published On - 12:33 pm, Wed, 28 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ