ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ
ಬಿ.ಸಿ.ಪಾಟೀಲ್​

Updated on: Jan 26, 2021 | 8:06 PM

ಬೆಂಗಳೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ಯುವ ಕಾಂಗ್ರೆಸ್ ಸಮಿತಿಯಿಂದ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆಯೆಂದು ಸಚಿವ ಬಿ.ಸಿ.ಪಾಟೀಲ್‌ ಆರೋಪಿಸಿದ್ದರು.

ಪಾಕಿಸ್ತಾನ ಬೆಂಬಲಿತರು ಎನ್ನುವ ಮೂಲಕ ರೈತರ ಮೇಲೆ ಗಂಭೀರ ಆರೋಪ ಹೊರಿಸಲಾಗಿದೆ. ರೈತ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆ ಎಂಬ ಸಚಿವರ ಬಹಿರಂಗ ಹೇಳಿಕೆ ಸರಿಯಲ್ಲ. ಹಾಗಾಗಿ, ರೈತರು ಯಾರು? ಯಾವ ದೇಶದವರು ಎಂಬುದಕ್ಕೆ ಸಚಿವರಿಂದ ಉತ್ತರ ಪಡೆಯುವಂತೆ ಕಾಂಗ್ರೆಸ್​ ಕಾರ್ಯಕರ್ತರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

Loading...
Unable to load recommendations.
Follow Us