AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಕಾಂಗ್ರೆಸ್​ನಲ್ಲಿ ಬಂಡಾಯದ ಬಿಸಿ: ಸಿಎಂ, ಡಿಸಿಎಂ ಬಂದರೂ ಪ್ರಚಾರಕ್ಕೆ ಬಾರದ ಸಚಿವ ಕೆಎಚ್​ ಮುನಿಯಪ್ಪ

ಕೋಲಾರ ಕಾಂಗ್ರೆಸ್​ನಲ್ಲಿ ಬಂಡಾಯದ ಬಿಸಿ ತಟ್ಟಿದೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಖುದ್ದಾಗಿ ಬಂದು ಪ್ರಚಾರಕ್ಕಿಳಿದರೂ ಸಚಿವ ಕೆಎಚ್​ ಮುನಿಯಪ್ಪ ಹಾಗೂ ಅವರ ಪುತ್ರಿ ಶಾಸಕಿ ರೂಪಕಲಾ ಆ ಕಡೆಗೆ ಸುಳಿದಿಲ್ಲ. ಹೀಗಾಗಿ ಕೋಲಾರದಲ್ಲಿ ಎರಡು ಬಣಗಳು ಒಂದಾಗದೆ ಅಭ್ಯರ್ಥಿ ಕೆವಿ ಗೌತಮ್​ಗೆ ಚುನಾವಣೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಕೋಲಾರ ಕಾಂಗ್ರೆಸ್​ನಲ್ಲಿ ಬಂಡಾಯದ ಬಿಸಿ: ಸಿಎಂ, ಡಿಸಿಎಂ ಬಂದರೂ ಪ್ರಚಾರಕ್ಕೆ ಬಾರದ ಸಚಿವ ಕೆಎಚ್​ ಮುನಿಯಪ್ಪ
ಕೆಎಚ್​ ಮುನಿಯಪ್ಪImage Credit source: Udayavani
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Apr 07, 2024 | 8:36 AM

Share

ಲೋಕಸಭಾ ಚುನಾವಣೆ(Lok Sabha Election)ಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಸಾಕಷ್ಟು ನಾಯಕರಿಗೆ ತಮಗೆ ಅಥವಾ ತಮ್ಮ ಸಂಬಂಧಿಗೆ ಟಿಕೆಟ್​ ಬೇಕೆಂಬ ಹಂಬಲ, ಸಿಗದಿದ್ದಾಗ ಬಂಡಾಯವೇಳುವುದು ಸಾಮಾನ್ಯ. ಹಾಗೆಯೇ ಕೋಲಾರ ಕಾಂಗ್ರೆಸ್​ಗೂ ಬಂಡಾಯದ ಬಿಸಿ ತಟ್ಟಿದೆ. ಕೆಎಚ್​ ಮುನಿಯಪ್ಪ(KH Muniyappa) ಅವರ ಅಳಿಯ ಚಿಕ್ಕಪೆದ್ದಣ್ಣರಿಗೆ ಟಿಕೆಟ್​ ಕೈತಪ್ಪಿದ್ದಕ್ಕಾಗಿ ಬೇಸರಗೊಂಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೋಲಾರದಲ್ಲಿ ಪ್ರಚಾರ ನಡೆಸಿದರೂ ಕೂಡ ಸಚಿವ ಕೆಎಚ್​ ಮುನಿಯಪ್ಪ ಹಾಗೂ ಪುತ್ರಿ ಶಾಸಕಿ ರೂಪಕಲಾ ಆ ಕಡೆ ಮುಖಹಾಕಿಲ್ಲ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಮೇಶ್​ ಕುಮಾರ್ ಬಣ ಮೇಲುಗೈ ಸಾಧಿಸಿದ್ದಕ್ಕೆ ಬೇಸರಗೊಂಡಿದ್ದಾರೆ, ಅದಕ್ಕೂ ಮುನ್ನ ಅಭ್ಯರ್ಥಿ ಕೆವಿ ಗೌತಮ್ ನಾಮಪತ್ರ ಸಲ್ಲಿಸುವ ವೇಳೆ ಸುರ್ಜೇವಾಲಾ ಅವರ ಒತ್ತಾಯಕ್ಕೆ ಮಣಿದು ಒಲ್ಲದ ಮನಸ್ಸಿನಿಂದ ಮುನಿಯಪ್ಪ ಹಾಗೂ ರೂಪಕಲಾ ಬಂದಿದ್ದರು.

ನಾಮಪತ್ರ ಸಲ್ಲಿಸುವ ವೇಳೆಯಲ್ಲೂ ಅಭ್ಯರ್ಥಿ ಜತೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಲಾಗಿತ್ತು. ಕೋಲಾರದಲ್ಲಿ ಅಭ್ಯರ್ಥಿಯ ಸೋಲು-ಗೆಲುವು ನನಗೆ ಸಂಬಂಧಪಟ್ಟಿದ್ದಲ್ಲ ಅದು ಭೈರತಿ ಸುರೇಶ್​ ಹಾಗೂ ಶಾಸಕರಿಗೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ.

ಮುಳಬಾಗಿಲು ಕುರುಡುಮಲೈ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನಡೆಸಿದ ಬಳಿಕ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ಓದಿ: ಕೋಲಾರ ಕೈ ಟಿಕೆಟ್ ಕೋಲಾಹಲ: ರಮೇಶ್ ಕುಮಾರ್ ಬಣಕ್ಕೆ ಮುನಿಯಪ್ಪ ಬಣದಿಂದ ಕೌಂಟರ್

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್ ಸೇರಿ ಕೋಲಾರ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಜೊತೆಗಿದ್ದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮೊದಲಿಗೆ ವಿಶೇಷ ಪೂಜೆ ಸಲ್ಲಿಸಿ ರೋಡ್ ಶೋ ನಡೆಸುತ್ತಾ ಮುಳಬಾಗಿಲು ದರ್ಗಾಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಎರಡು ಧರ್ಮದಗಳ ಪವಿತ್ರ ಕ್ಷೇತ್ರಗಳಲ್ಲಿ ಪೂಜೆಯನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್​ 136 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ