ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ

ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್​ಟೇಬಲ್ ಬಸವರಾಜುಗೆ ಥಳಿಸಿರುವಂತಹ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಬಳಿ ನಡೆದಿದೆ. ಸ್ಥಳೀಯರ ಸಹಕಾರದಿಂದ ಪುಂಡರನ್ನು ವಶಕ್ಕೆ ಪಡೆಯಲಾಗಿದೆ.

ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ
ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ
Edited By:

Updated on: Oct 09, 2024 | 7:58 PM

ಕೊಪ್ಪಳ, ಅಕ್ಟೋಬರ್​ 09: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ (Constable) ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸದ್ಯ ಸ್ಥಳೀಯರ ಸಹಕಾರದಿಂದ ಪೊಲೀಸರು ಹಲ್ಲೆ ಮಾಡಿದ ರೌಡಿಶೀಟರ್​ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್​ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್​ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಲಾಗಿದೆ. ಸದ್ಯ ಕಾನ್ಸ್​ಟೇಬಲ್ ಬಸವರಾಜುವನ್ನು​ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬಿಡಿಎಗೆ ನಕಲಿ ದಾಖಲೆ ಸಲ್ಲಿಸಿ 70 ಕೋಟಿ ರೂ ಪರಿಹಾರಕ್ಕೆ ಪ್ಲ್ಯಾನ್: ಐವರು ಆರೋಪಿಗಳ ಬಂಧನ

ವಶಕ್ಕೆ ಪಡೆದವರನ್ನು ಗಂಗಾವತಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ರೌಡಿಶೀಟರ್ ಅರ್ಬಾಜ್
ಈ ಹಿಂದೆ ಕೂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಸದ್ಯ ಪೊಲೀಸರ ಮೇಲೆಯೇ ಹಲ್ಲೆ ಯತ್ನಿಸಿದ ಪುಂಡರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ಕಟ್: ಆಸ್ಪತ್ರೆಗೆ ದಾಖಲು

ಕೊಡಗು: ಜಿಲ್ಲೆ ಮಡಿಕೇರಿ ನಗರದ ಟಿ.ಜಾನ್​ ಲೇಔಟ್‌ನಲ್ಲಿ ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ಕಟ್ ಆಗಿರುವಂತಹ ಘಟನೆ ನಡೆದಿದೆ. ಮಡಿಕೇರಿಯ ಕನ್ನಂಡ ಬಾಣೆ ನಿವಾಸಿ ಹರೀಶ್ ಕೈ ಕಟ್​ ಆಗಿದೆ.​

ಮನೆ ಕಟ್ಟಲು ಸಿಮೆಂಟ್ ಮಿಕ್ಸಿಂಗ್ ಮಾಡುತ್ತಿದ್ದ ವೇಳೆ ಅಚಾನಕ್​ ಆಗಿ ಮಿಷನ್‌‌ಗೆ ಕೈ ಸಿಲುಕಿಕೊಂಡಿದೆ. ಯುವಕನನ್ನ ರಕ್ಷಿಸಿದ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಟಿಪ್ಪರ್ ಲಾರಿಗೆ ವಿದ್ಯುತ್​ ತಂತಿ ತಗುಲಿ ಚಾಲಕ ಸ್ಥಳದಲ್ಲೇ ಸಾವು

ಕೋಲಾರ: ಟಿಪ್ಪರ್ ಲಾರಿಗೆ 11 ಕೆವಿ ವಿದ್ಯುತ್​ ತಂತಿ ತಗುಲಿ ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಅತ್ತಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಲವ್ವಿಡವ್ವಿ ಇಟ್ಟುಕೊಂಡಿದ್ದ ಮಹಿಳೆಯಿಂದಲೇ ಕೊಲೆಯಾದ ಯುವಕ: ಪ್ರಕರಣ ಬೇಧಿಸಿದ್ದೇ ರೋಚಕ

ಶ್ರೀನಿವಾಸಪುರ ತಾಲ್ಲೂಕು ಯಗವಪಾಪಶೆಟ್ಟಿಹಳ್ಳಿ ಗ್ರಾಮದ ಶಿವಣ್ಣ (36) ಮೃತ ಚಾಲಕ. ಅತ್ತಹಳ್ಳಿ ಗ್ರಾಮದಲ್ಲಿ ಟಿಪ್ಪರ್​ನಲ್ಲಿದ್ದ ಜೆಲ್ಲಿಕಲ್ಲು ಸುರಿಯುವ ವೇಳೆ ಘಟನೆ ಸಂಭವಿಸಿದೆ. 11 ಕೆವಿ ವಿದ್ಯುತ್ ತಗುಲಿದ ಪರಿಣಾಮ ಲಾರಿಯ ಟಯರ್​ಗಳು ಬರ್ಸ್ಟ್​ ಆಗಿದೆ. ನಂಗಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us