AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮೂಡ ಆರೋಪದ ಬಳಿಕ‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮತ್ತೊಂದು ಗಂಭೀರ ಆರೋಪ‌ ಮಾಡಿದ್ದಾರೆ. ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ ಎಂದು ಪ್ರಶ್ನಿಸಿದ್ದಾರೆ.

ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌
ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌
Sunil MH
| Edited By: |

Updated on:Sep 14, 2024 | 3:41 PM

Share

ಬೆಂಗಳೂರು, ಸೆಪ್ಟೆಂಬರ್​​ 14: ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ರಾಮನಗರದಲ್ಲಿ ಆಡಿರುವ ಮಾತು. ಪ್ರಕರಣದ ವಿಚಾರಣೆ ಮುಗಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಈ ಮಧ್ಯೆ ಮೂಡ ಆರೋಪದ ಬಳಿಕ‌ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ? ದಲಿತ ಸಿಎ ಸೈಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಹೊಸ ಅಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ, ಕೋರ್ಟ್​ನಲ್ಲಿ ದಾವೆ

15 ಸೈಟ್ ತಗೊಂಡಿರುವುದಲ್ಲದೇ, ಇಂತದೇ ಹಗರಣದ ಸರಣಿಯೇ ಇದೆ‌ ಮೈಸೂರಿನಲ್ಲಿ. ವಿಕಲಚೇತನ ದಲಿತ ವ್ಯಕ್ತಿ 24 ಸಾವಿರ ರೂ. ನೀಡಿ ಸೈಟ್​ ಪಡೆಯುತ್ತಾರೆ. ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ 10 ಸಾವಿರ ರೂ. ಸ್ಕೈಯರ್ ಫೀಟ್ ಜಾಗ ಅಕ್ರಮವಾಗಿ ಪಡೆಯುತ್ತಾರೆ. ಆಮೇಲೆ ಸೈಟ್ ತಗೊಂಡವನು ಯಾರೋ ಮನೆ ಕಟ್ಟಿದ್ದಾರೆಂದು ನೋಡುವುದಕ್ಕೆ ಬರ್ತಾರೆ. ಈ ಬಗ್ಗೆ ನನ್ನ ಬಳಿ ಈಗಲೂ ದಾಖಲೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನನ್ನದು ತೆರದ ಪುಸ್ತಕ ಅಂತಾ ಸಿದ್ದರಾಮಯ್ಯ ಯಾವಾಗಲೂ ಹೇಳುತ್ತಾರೆ. ಅದನ್ನ ತೆಗೆಯಿರಿ ಯಾರಿಗೆ ನೀವು ಸೇಲ್ ಮಾಡಿದ್ದೀರಿ? ಇನ್ನೂ ಯಾರ ಕೈಯಲ್ಲಿದೆ ಸೈಟ್, ಹೆಸರಿಗೆ ಮಾರಾಟ ತೋರಿಸಿಕೊಂಡಿದ್ದಾರೆ. ಅದನ್ನು ತೆಗೆದರೆ ಮತ್ತೊಂದು ರಾಮಾಯಣ ಶುರುವಾಗುತ್ತೆ ಎಂದು ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಹಾಲಿನ ದರ ಏರಿಕೆ ಬಗ್ಗೆ ಕಿಡಿ

ಹಾಲಿನ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ವಿಚಾರವಾಗಿ ಮಾತನಾಡಿದ್ದು, ಯಾರ ಬಳಿಯೋ ಕಿತ್ತುಕೊಂಡು ಯಾರಿಗೊ ದಾನ ಮಾಡಿದ ರೀತಿ ಇದೆ. ಗ್ರಾಹಕರ ಮೇಲೆ ಹೊರೆಹಾಕಿ ರೈತರಿಗೆ ಪ್ರೋತ್ಸಾಹಧನ ಕೊಡುತ್ತೇವೆ ಅಂತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ, 10 ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದವು; ಕುಮಾರಸ್ವಾಮಿ ಪ್ರಶ್ನೆ

ಹಾಲು ಉತ್ಪಾದಕರ ಸಂಘದ ಜಿಲ್ಲೆಗಳಲ್ಲಿ ಒಂದುವರೆ ಎರಡು ರೂಪಾಯಿ ಯಾಕೆ ಕಡಿಮೆ ಮಾಡಿದ್ದಿರಾ. ಎಲ್ಲೆಲ್ಲಿ ಕಡಿಮೆ ಮಾಡಿದ್ದಿರಲ್ಲಾ ಅಲ್ಲಿ ಬೆಲೆ ಏರಿಕೆ ಮಾಡಿದ್ದಿರಲ್ಲಾ. ಆ ದುಡ್ಡನ್ನ ರೈತರಿಗೆ ಕೊಡುತ್ತೇವೆ ಅಂತ ಹೇಳ್ತಿದ್ದಿರಲ್ಲಾ ಹಾಗಾದ್ರೆ ಯಾವ ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹಾಲಿನ ಪ್ರೊತ್ಸಾಹ ದರ ಕಡಿಮೆ ಮಾಡಿದ್ದಿರಾ. ದಾಖಲೆ‌ ಇಲ್ವಾ, ಪಟ್ಟಿ ಇಲ್ವಾ. ರೈತರಿಗೆ ಕೊಡುತ್ತೇವೆ ಅಂತ ಸುಳ್ಳು ಹೇಳಿ, ಒಂದು ಕಡೆ ರೈತರಿಗೂ ಇಲ್ಲಾ ಗ್ರಾಹಕರಿಗೂ ಇಲ್ಲಾ. ದುಡ್ಡು ಮಾತ್ರ ಸರ್ಕಾರ ವಸೂಲಿ ಮಾಡುತ್ತಿದೆ. ಇದು ನಿಮ್ಮ ಹವ್ಯಾಸ ಎಂದು ವಾಗ್ದಾಳಿ ಮಾಡಿದ್ದಾರೆ.

ನಾನು ಕೇಂದ್ರ ಸಚಿವನಾಗಿದ್ದಕ್ಕೆ ಇವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ

ನಾನು ಕೇಂದ್ರ ಸಚಿವನಾಗಿದ್ದಕ್ಕೆ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಾನು ರಾಜ್ಯಕ್ಕೆ ಬಂದ್ರೆ ಇವರು ಸಹಿಸಲ್ಲ, ಇದು ನನ್ನ ಪರಿಸ್ಥಿತಿ. ನನ್ನ ಮುಖ ನೋಡಿದಾಗಲೆಲ್ಲ ಮುಗಿದೆ ಹೋದ ಅಂತಿದ್ದರು. ಆದರೆ ನಾನು ಕೇಂದ್ರ ಮಂತ್ರಿ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ನೋವಿಗೆ ಎಲ್ಲಿ ಔಷಧಿ ಕೊಡಲಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Sat, 14 September 24

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​