ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣ: ಸತೀಶ್ ಜಾರಕಿಹೊಳಿ

ಕರ್ನಾಟಕ ಸರ್ಕಾರವು ಮುಂದಿನ ತಿಂಗಳುಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 24 ಕಾಲು ಸೇತುವೆಗಳ ನಿರ್ಮಾಣ ಮಾಡಲು ಯೋಜಿಸುತ್ತಿದೆ. ಬೆಂಗಳೂರು ನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಇವುಗಳನ್ನು ನಿರ್ಮಿಸಲಾಗುವುದು ಎಂದು ಬೆಳಗಾವಿ ಅಧಿವೇಶನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣ: ಸತೀಶ್ ಜಾರಕಿಹೊಳಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದಾಟಲು ಕಾಲು ಸೇತುವೆಗಳ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ
Follow us
| Updated By: Rakesh Nayak Manchi

Updated on: Dec 10, 2023 | 4:34 PM

ಬೆಂಗಳೂರು, ಡಿ.10: ಕರ್ನಾಟಕ ಸರ್ಕಾರವು ಮುಂದಿನ ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) 24 ಕಾಲು ಸೇತುವೆಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಹೆದ್ದಾರಿ ದಾಟಲು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಎಕ್ಸ್‌ಪ್ರೆಸ್‌ವೇ ಸುತ್ತಮುತ್ತಲಿನ ಗ್ರಾಮಸ್ಥರಿಂದ ದೂರುಗಳು ಬಂದಿರುವ ಹಿನ್ನೆಲೆ ಕಾಲು ಸೇತುವೆಗಳ ನಿರ್ಮಾಣ ಯೋಜನೆಯನ್ನು ಪ್ರಸ್ತಾಪಿಸಲು ಸರ್ಕಾರ ಈಗಾಗಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (NHAI) ಕೇಳಿದೆ.

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಎಕ್ಸ್‌ಪ್ರೆಸ್‌ವೇಗೆ ಅಡ್ಡಲಾಗಿ ಒಟ್ಟು 24 ಕಾಲು ಸೇತುವೆಗಳು ಬರಲಿವೆ. ಇವುಗಳು ಗ್ರಾಮಸ್ಥರಿಗೆ ಎಕ್ಸ್‌ಪ್ರೆಸ್‌ವೇ ದಾಟಲು ಸಹಾಯ ಮಾಡಲಿವೆ. ಬೆಂಗಳೂರು ನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಇವುಗಳನ್ನು ನಿರ್ಮಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು, ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಹೆಚ್ಚಳ

ಈ ಹಿಂದೆ ಹೆದ್ದಾರಿಯ ಎರಡೂ ಬದಿಯಲ್ಲಿ ನಿರ್ಮಿಸಿರುವ ಕಂಬಗಳ ಮೇಲಿನ ಬ್ರೇಸಿಂಗ್‌ಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಅಲ್ಲದೆ, ಪ್ರಕರಣಗಳ ಬಗ್ಗೆ ದೂರು ನೀಡಲು ನನಗೆ ದುಃಖವಾಗಿದೆ. ಇವೆಲ್ಲವನ್ನೂ ನಿಮ್ಮ ಸ್ವಂತ ಹಣದಿಂದ ಸ್ಥಾಪಿಸಲಾಗಿದ್ದು, ಅವುಗಳನ್ನು ನಿಮ್ಮ ಹಣದಿಂದಲೇ ಮರು-ಸ್ಥಾಪಿಸಲಾಗುವುದು. ದಯವಿಟ್ಟು ಅಂತಹ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದರು.

ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ 119 ಕಿಮೀ ಎಕ್ಸ್‌ಪ್ರೆಸ್‌ವೇಯನ್ನು 8,408 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಈ ಯೋಜನೆಯು 11 ಮೇಲ್ಸೇತುವೆಗಳು, 64 ಅಂಡರ್‌ಪಾಸ್‌ಗಳು, ಐದು ಬೈಪಾಸ್‌ಗಳು, 42 ಸಣ್ಣ ಸೇತುವೆಗಳನ್ನು ಒಳಗೊಂಡಿದೆ. ಎಕ್ಸ್‌ಪ್ರೆಸ್‌ವೇ ಆರು ಲೇನ್‌ಗಳನ್ನು ಹೊಂದಿದ್ದು, ಎರಡೂ ಬದಿಗಳಲ್ಲಿ ಹೆಚ್ಚುವರಿ ದ್ವಿಪಥದ ಸೇವಾ ರಸ್ತೆಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್