
ಬೆಂಗಳೂರು, (ನವೆಂಬರ್ 08): ಕಾಂಗ್ರೆಸ್ ಸರ್ಕಾರ (Congress Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ(guarantee scheme) ಅನುದಾನ ಸರಿದೂಗಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಬೇರೆ ಯೋಜನೆಗಳ ಅನುದಾನವನ್ನು ಈ ಗ್ಯಾರಂಟಿಗೆ ಕೊಡಲಾಗುತ್ತಿದೆ. ಅಲ್ಲದೇ ಕೆಲ ಯೋಜನೆಗಳಿಗೆ ಕತ್ತರಿ ಹಾಕಲಾಗಿದೆ. ಅದರಂತೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಕತ್ತರಿ ಬಿದ್ದಿದೆ. ಹೌದು.. ಕಾರ್ಮಿಕ ಇಲಾಖೆ, ಕಲಿಕಾ ಭಾಗ್ಯ ಯೋಜನೆ(kalika bhagya yojana) ಅಡಿಯಲ್ಲಿ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೀಡುವ ವಾರ್ಷಿಕ ಸಹಾಯಧನವನ್ನು ಕಡಿತಗೊಳಿಸಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗುತ್ತಿದ್ದ ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿದೆ. ಭಾರೀ ಪ್ರಮಾಣದಲ್ಲಿ ಸಹಾಯಧನ ಕಡಿತ ಮಾಡಿದ್ದು ಈ ಬಗ್ಗೆ ಸರ್ಕಾರ ಅಕ್ಟೋಬರ್ 30 ರಂದು ಅಧಿಸೂಚನೆ ಹೊರಡಿಸಿದೆ. ಕಟ್ಟಡ ಕಾರ್ಮಿಕರ ಮಕ್ಕಳ ಕಲಿಕೆ ಭಾಗ್ಯಕ್ಕೆ “ಕಡಿತ” ಭಾಗ್ಯ ಕರುಣಿಸಿದೆ.
ಇದನ್ನೂ ಓದಿ: 2023-24ರಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಅವಕಾಶಗಳು
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:39 pm, Wed, 8 November 23