AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ

ಬ್ರಿಟನ್ ರೂಪಾಂತರ ಕೊರೊನಾ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 9:38 PM

Share

ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರದಲ್ಲಿ ಜನವರಿ 31ರವರೆಗೂ ಈ ಹಿಂದೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯನ್ನೇ ಮುಂದುವರಿಸಲು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದೆ.

ಬ್ರಿಟನ್​ನಲ್ಲಿ ರೂಪಾಂತರಗೊಂಡಿರುವ ಕೊರೊನಾ ವೈರಾಣು ಹರಡುವ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ. ಈ ವೇಳೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಕೇಂದ್ರ ಗೃಹ ಇಲಾಖೆ ಪತ್ರದಲ್ಲಿ ತಿಳಿಸಿದೆ.

ಚಳಿಗಾಲದಲ್ಲಿ ಕೊರೊನಾ ಸೋಂಕು ಹೆಚ್ಚು ಹರಡಲಿದೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ, ಕೊರೊನಾ ಹೆಚ್ಚು ಹರಡಲು ಚಳಿಗಾಲ ಕಾರಣವಾಗಬಹುದು. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೈಹಿಕ ಅಂತರಕ್ಕೆ ಒತ್ತು ನೀಡಿ. ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಬಹುದು. ಇದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದಿರುವ ಗೃಹ ಇಲಾಖೆ, ಅಗತ್ಯ ಸೇವೆ, ಅಂತಾರಾಜ್ಯ ಸಂಚಾರಕ್ಕೆ ಅಡೆತಡೆ ಇರಬಾರದು ಎಂದು ಸೂಚಿಸಿದೆ.

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಮಾರ್ಗಗಗಳನ್ನು ಸೂಚಿಸಿತ್ತು. ಇದರಡಿಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಚಿತ್ರ ಮಂದಿರಗಳಲ್ಲಿ ಶೇ.50 ಆಸನಗಳಿಗೆ ಮಾತ್ರ ವ್ಯವಸ್ಥೆ ಮಾಡುವುದು ಸೇರಿ ಹಲವು ಸೂಚನೆಗಳನ್ನು ಇದು ಒಳಗೊಂಡಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ