AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ

ಬ್ರಿಟನ್ ರೂಪಾಂತರ ಕೊರೊನಾ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಜನವರಿ 31ರವರೆಗೂ ಹಿಂದಿನ ಮಾರ್ಗಸೂಚಿ ಮುಂದುವರಿಸಿ: ರಾಜ್ಯಗಳಿಗೆ ಕೇಂದ್ರದ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 9:38 PM

Share

ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರದಲ್ಲಿ ಜನವರಿ 31ರವರೆಗೂ ಈ ಹಿಂದೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯನ್ನೇ ಮುಂದುವರಿಸಲು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದೆ.

ಬ್ರಿಟನ್​ನಲ್ಲಿ ರೂಪಾಂತರಗೊಂಡಿರುವ ಕೊರೊನಾ ವೈರಾಣು ಹರಡುವ ಭೀತಿ ಇದೆ. ಹೀಗಾಗಿ ಆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ. ಈ ಬಗ್ಗೆ ಕೇಂದ್ರ ನೀಡಿರುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ. ಹೊಸ ವರ್ಷಾಚರಣೆ ವೇಳೆ‌ ಗುಂಪುಗೂಡದಂತೆ ನೋಡಿಕೊಳ್ಳಿ. ಈ ವೇಳೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಕೇಂದ್ರ ಗೃಹ ಇಲಾಖೆ ಪತ್ರದಲ್ಲಿ ತಿಳಿಸಿದೆ.

ಚಳಿಗಾಲದಲ್ಲಿ ಕೊರೊನಾ ಸೋಂಕು ಹೆಚ್ಚು ಹರಡಲಿದೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ, ಕೊರೊನಾ ಹೆಚ್ಚು ಹರಡಲು ಚಳಿಗಾಲ ಕಾರಣವಾಗಬಹುದು. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೈಹಿಕ ಅಂತರಕ್ಕೆ ಒತ್ತು ನೀಡಿ. ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಬಹುದು. ಇದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದಿರುವ ಗೃಹ ಇಲಾಖೆ, ಅಗತ್ಯ ಸೇವೆ, ಅಂತಾರಾಜ್ಯ ಸಂಚಾರಕ್ಕೆ ಅಡೆತಡೆ ಇರಬಾರದು ಎಂದು ಸೂಚಿಸಿದೆ.

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಒಂದಷ್ಟು ಮಾರ್ಗಗಗಳನ್ನು ಸೂಚಿಸಿತ್ತು. ಇದರಡಿಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಚಿತ್ರ ಮಂದಿರಗಳಲ್ಲಿ ಶೇ.50 ಆಸನಗಳಿಗೆ ಮಾತ್ರ ವ್ಯವಸ್ಥೆ ಮಾಡುವುದು ಸೇರಿ ಹಲವು ಸೂಚನೆಗಳನ್ನು ಇದು ಒಳಗೊಂಡಿದೆ.

ಕೊರೊನಾ ರೂಪಾಂತರ: ಬ್ರಿಟನ್​ನಿಂದ ಆಗಮಿಸುವವರ ತಪಾಸಣೆಗಾಗಿ ಕೇಂದ್ರದಿಂದ ನಿಯಮಾವಳಿ ಬಿಡುಗಡೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್