AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ಸಾಧು ಶ್ರೀನಾಥ್​|

Updated on:Apr 25, 2022 | 7:38 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನದ ಮೇರೆಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Contractor kempanna) ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾದರು. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ. ಏಜೆಂಟ್ ಆಗಿದ್ದರೆ ನನ್ನ ಮೇಲೆ ಯಾವ ಕ್ರಮವನ್ನಾದರೂ ಕೈಗೊಳ್ಳಲಿ. ನನ್ನ ವಿರುದ್ಧ ಬೇಕಾದ್ರೆ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿಬಿಡಿ. ನಾನು 40 % ಕಮೀಷನ್ ಬಗ್ಗೆ ಮಾತನಾಡಿದ್ದು ನಿಜ, ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಪರ್ಸೆಂಟೇಜ್ ಇರಬಾರದೆಂಬ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಕಮಿಟಿ ಮಾಡಿ ನಿರ್ಧರಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ (CM Basavaraj Bommai) ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಇವತ್ತಿನ ಭೇಟಿಗೂ 40 ಪರ್ಸೆಂಟ್ ಕಮಿಷನ್ ಹೋರಾಟಕ್ಕೂ ಸಂಬಂಧವಿಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ನಮ್ಮ ಸಹಕಾರ ಬೇಕು ಅಂದಿದ್ದಾರೆ ಮುಖ್ಯಮಂತ್ರಿ. ನಮ್ಮ ಬೇಡಿಕೆಗಳಿಗೆ ಸಿಎಂ ಬೊಮ್ಮಾಯಿ ಚೆನ್ನಾಗಿ ಸ್ಪಂದಿಸಿದ್ದಾರೆ. ನಾವೂನೂ ಸಹಕಾರ ಕೊಡ್ತೀವಿ, ಅವರು ಕೂಡ ನಮಗೆ ಸಹಕಾರ ಕೊಡ್ತಾರೆ. ನಾವೂ ನಿರಂತರವಾಗಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡ್ತೀವಿ. ನಮ್ಮ ಬೇಡಿಕೆ ಈಡೇರದಿದ್ದರೆ ದಾಖಲೆಗಳನ್ನ ಹೊರಗಡೆ ಬಿಡುಗಡೆ ಮಾಡ್ತೀವಿ ಎಂದು ಕೆಂಪಣ್ಣ ಗುಡುಗಿದ್ದಾರೆ.

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ. ಮೇ 11 ರಂದು ನಮ್ಮ ಗುತ್ತಿಗೆದಾರರ ಸಂಘದಿಂದ ಸಭೆ ಆಯೋಜಿಸಿದ್ದೇವೆ. ಬಳಿಕ ಹೋರಾಟದ ಸ್ವರೂಪದ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತೇವೆ.

Kempanna: ಈಗ ಪಡಿತಿರೋ 40% ಕಮಿಷನ್‌ ಕಮ್ಮಿ ಮಾಡಿ ಅಂತಾ ಮನವಿ ಮಾಡಿದ್ದೇನೆ

Published On - 5:25 pm, Mon, 25 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?