AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: ಸಾಧು ಶ್ರೀನಾಥ್​|

Updated on:Apr 25, 2022 | 7:38 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನದ ಮೇರೆಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Contractor kempanna) ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾದರು. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ. ಏಜೆಂಟ್ ಆಗಿದ್ದರೆ ನನ್ನ ಮೇಲೆ ಯಾವ ಕ್ರಮವನ್ನಾದರೂ ಕೈಗೊಳ್ಳಲಿ. ನನ್ನ ವಿರುದ್ಧ ಬೇಕಾದ್ರೆ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿಬಿಡಿ. ನಾನು 40 % ಕಮೀಷನ್ ಬಗ್ಗೆ ಮಾತನಾಡಿದ್ದು ನಿಜ, ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಪರ್ಸೆಂಟೇಜ್ ಇರಬಾರದೆಂಬ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಕಮಿಟಿ ಮಾಡಿ ನಿರ್ಧರಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ (CM Basavaraj Bommai) ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಇವತ್ತಿನ ಭೇಟಿಗೂ 40 ಪರ್ಸೆಂಟ್ ಕಮಿಷನ್ ಹೋರಾಟಕ್ಕೂ ಸಂಬಂಧವಿಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ನಮ್ಮ ಸಹಕಾರ ಬೇಕು ಅಂದಿದ್ದಾರೆ ಮುಖ್ಯಮಂತ್ರಿ. ನಮ್ಮ ಬೇಡಿಕೆಗಳಿಗೆ ಸಿಎಂ ಬೊಮ್ಮಾಯಿ ಚೆನ್ನಾಗಿ ಸ್ಪಂದಿಸಿದ್ದಾರೆ. ನಾವೂನೂ ಸಹಕಾರ ಕೊಡ್ತೀವಿ, ಅವರು ಕೂಡ ನಮಗೆ ಸಹಕಾರ ಕೊಡ್ತಾರೆ. ನಾವೂ ನಿರಂತರವಾಗಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡ್ತೀವಿ. ನಮ್ಮ ಬೇಡಿಕೆ ಈಡೇರದಿದ್ದರೆ ದಾಖಲೆಗಳನ್ನ ಹೊರಗಡೆ ಬಿಡುಗಡೆ ಮಾಡ್ತೀವಿ ಎಂದು ಕೆಂಪಣ್ಣ ಗುಡುಗಿದ್ದಾರೆ.

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ. ಮೇ 11 ರಂದು ನಮ್ಮ ಗುತ್ತಿಗೆದಾರರ ಸಂಘದಿಂದ ಸಭೆ ಆಯೋಜಿಸಿದ್ದೇವೆ. ಬಳಿಕ ಹೋರಾಟದ ಸ್ವರೂಪದ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತೇವೆ.

Kempanna: ಈಗ ಪಡಿತಿರೋ 40% ಕಮಿಷನ್‌ ಕಮ್ಮಿ ಮಾಡಿ ಅಂತಾ ಮನವಿ ಮಾಡಿದ್ದೇನೆ

Published On - 5:25 pm, Mon, 25 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು