AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ, 40% ಬಗ್ಗೆ ಈಗಲೂ ಬದ್ಧ: ಸಿಎಂ ಬೊಮ್ಮಾಯಿ ಭೇಟಿ ಬಳಿಕ ಗುತ್ತಿಗೆದಾರ ಕೆಂಪಣ್ಣ ಮಾತು
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Apr 25, 2022 | 7:38 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನದ ಮೇರೆಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Contractor kempanna) ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾದರು. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು ನಾನು ಯಾವುದೇ ಪಕ್ಷದ ಏಜೆಂಟ್​ ಅಲ್ಲ. ಏಜೆಂಟ್ ಆಗಿದ್ದರೆ ನನ್ನ ಮೇಲೆ ಯಾವ ಕ್ರಮವನ್ನಾದರೂ ಕೈಗೊಳ್ಳಲಿ. ನನ್ನ ವಿರುದ್ಧ ಬೇಕಾದ್ರೆ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿಬಿಡಿ. ನಾನು 40 % ಕಮೀಷನ್ ಬಗ್ಗೆ ಮಾತನಾಡಿದ್ದು ನಿಜ, ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಪರ್ಸೆಂಟೇಜ್ ಇರಬಾರದೆಂಬ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಕಮಿಟಿ ಮಾಡಿ ನಿರ್ಧರಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ (CM Basavaraj Bommai) ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಇವತ್ತಿನ ಭೇಟಿಗೂ 40 ಪರ್ಸೆಂಟ್ ಕಮಿಷನ್ ಹೋರಾಟಕ್ಕೂ ಸಂಬಂಧವಿಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ನಮ್ಮ ಸಹಕಾರ ಬೇಕು ಅಂದಿದ್ದಾರೆ ಮುಖ್ಯಮಂತ್ರಿ. ನಮ್ಮ ಬೇಡಿಕೆಗಳಿಗೆ ಸಿಎಂ ಬೊಮ್ಮಾಯಿ ಚೆನ್ನಾಗಿ ಸ್ಪಂದಿಸಿದ್ದಾರೆ. ನಾವೂನೂ ಸಹಕಾರ ಕೊಡ್ತೀವಿ, ಅವರು ಕೂಡ ನಮಗೆ ಸಹಕಾರ ಕೊಡ್ತಾರೆ. ನಾವೂ ನಿರಂತರವಾಗಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡ್ತೀವಿ. ನಮ್ಮ ಬೇಡಿಕೆ ಈಡೇರದಿದ್ದರೆ ದಾಖಲೆಗಳನ್ನ ಹೊರಗಡೆ ಬಿಡುಗಡೆ ಮಾಡ್ತೀವಿ ಎಂದು ಕೆಂಪಣ್ಣ ಗುಡುಗಿದ್ದಾರೆ.

ಹೊಸದಾಗಿ ಕಮಿಟಿ ಮಾಡುವ ಭರವಸೆಯನ್ನ ಸಿಎಂ ಹೇಳಿದ್ದಾರೆ. ಪ್ಯಾಕೇಜ್ ಪದ್ಧತಿಯನ್ನ ಆದಷ್ಟು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡೋದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆ ಮಾಡಿದರು. ಸೀನಿಯಾರಿಟಿ ಪ್ರಕಾರ ಪೇಮೆಂಟ್ ಕೊಡಿಸೋದಾಗಿ ಹೇಳಿದ್ದಾರೆ. ಮೇ 11 ರಂದು ನಮ್ಮ ಗುತ್ತಿಗೆದಾರರ ಸಂಘದಿಂದ ಸಭೆ ಆಯೋಜಿಸಿದ್ದೇವೆ. ಬಳಿಕ ಹೋರಾಟದ ಸ್ವರೂಪದ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತೇವೆ.

Kempanna: ಈಗ ಪಡಿತಿರೋ 40% ಕಮಿಷನ್‌ ಕಮ್ಮಿ ಮಾಡಿ ಅಂತಾ ಮನವಿ ಮಾಡಿದ್ದೇನೆ

Published On - 5:25 pm, Mon, 25 April 22

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!