AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ

ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತಾಗಿ ಇಂದು ಹೈಕೋರ್ಟ್​​ನಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ
ಹೈಕೋರ್ಟ್
Ramesha M
| Edited By: |

Updated on: Aug 17, 2023 | 10:24 PM

Share

ಬೆಂಗಳೂರು, ಆಗಸ್ಟ್​ 17: ಕರ್ನಾಟಕದ ನಾಡಗೀತೆಗೆ (karnataka anthem) ಸಂಗೀತ ಸಂಯೋಜನೆ ಕುರಿತಂತೆ ಎದ್ದಿರುವ ವಿವಾದಕ್ಕೆ‌ ಸಂಬಂಧಿಸಿದಂತೆ ಇಂದು ಹೈಕೋರ್ಟ್​​ನಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರ ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ರವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಗಾಯಕಿ ಬಿ.ಕೆ.ಸುಮಿತ್ರಾ ಖುದ್ದು ಹಾಜರಾಗಿ ಧಾಟಿಯ ಬಗ್ಗೆ ವಿವರಣೆ ನೀಡಿದರು.

ಕವಿ ಬಿ.ಆರ್.ಲಕ್ಷ್ಮಣ ರಾವ್‌, ಗಾಯಕ ವೈ.ಕೆ.ಮುದ್ದುಕೃಷ್ಣ, ಮೃತ್ಯುಂಜಯ ದೊಡ್ಡವಾಡ ಕೂಡಾ ಹೈಕೋರ್ಟ್ ನಲ್ಲಿ ನಾಡಗೀತೆ ಹಾಡಿ ವಿವರಣೆ ನೀಡಿದರು. ನಾಡಗೀತೆಯ ಜಯಭಾರತ ಜನನಿಯ ತನುಜಾತೆ ಹಾಡಿಗಿರುವ ಭಿನ್ನ ಧಾಟಿಗಳ ವ್ಯತ್ಯಾಸಗಳನ್ನು ಹಾಡಿ ತೋರಿಸಿದರು. ಕೋರ್ಟ್ ಹಾಲ್ 7 ರಲ್ಲಿ ಕೆಲಕಾಲ ಸಂಗೀತ ಕಛೇರಿ ನಡೆದಂತೆ ಭಾಸವಾಯಿತು.

ಇದನ್ನೂ ಓದಿ: ನಾಡಗೀತೆಗೆ ಸಂಗೀತ ಸಂಯೋಜನೆ ವಿವಾದ: ಹಾಡಿನ ಮೂಲಕ ಹೈಕೋರ್ಟ್​ಗೆ ವಿವರಣೆ ನೀಡಿದ ಕಿಕ್ಕೇರಿ ಕೃಷ್ಣಮೂರ್ತಿ

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಮಧ್ಯಂತರ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ವಾದ ಮಂಡಿಸಿ, ರಾಜ್ಯ ಸರ್ಕಾರ ಈಗಾಗಲೇ ತನ್ನೆಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಮೈಸೂರು ಅನಂತಸ್ವಾಮಿಯವರ ಧಾಟಿಯಲ್ಲೇ ಹಾಡುವುದು ಸೂಕ್ತ ಎಂಬುದನ್ನು ತೀರ್ಮಾನಿಸಿ ಆದೇಶ ಹೊರಡಿಸಿದೆ.

ಹೀಗಾಗಿ ಸರ್ಕಾರದ ಕ್ರಮ ಸರಿಯಾಗಿದೆ ಎಂದು ವಾದಿಸಿದರು. ನಿಮ್ಮ ವಾದಕ್ಕೆ ಕಾನೂನಿನ ಮಾನ್ಯತೆ ಇರುವ ಬಗ್ಗೆ ಪುಷ್ಟೀಕರಿಸುವ ದಾಖಲೆ ಹಾಜರುಪಡಿಸುವಂತೆ ಕೋರ್ಟ್ ವಾದಿ, ಪ್ರತಿವಾದಿಗಳಿಗೆ ಸೂಚಿಸಿದೆ. ಗಾಯಕಿ ಬಿ.ಕೆ.ಸುಮಿತ್ರಾ ಖುದ್ದು ಹಾಜರಾಗಿ ಮೈಸೂರು ಅನಂತಸ್ವಾಮಿ ಮತ್ತು ಸಿ.ಅಶ್ವತ್ಥ್‌ ಅವರ ಧಾಟಿಗಳ ಕುರಿತಾದ ವ್ಯತ್ಯಾಸವನ್ನು ವಿವರಿಸಿದರು.

ಇದನ್ನೂ ಓದಿ: ಲಘು ಯುದ್ಧ ವಿಮಾನದ ಮಾಹಿತಿ ಕದ್ದವನಿಗಿಲ್ಲ ರಿಲೀಫ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕಿಕ್ಕೇರಿ ಕೃಷ್ಣಮೂರ್ತಿ ಪರವಾಗಿ ಹಾಜರಾಗಿದ್ದ ಪ್ರಣಯ ಕವಿ ಎಂದೇ ಹೆಸರಾದ ಬಿ.ಆರ್.ಲಕ್ಷ್ಮಣ ರಾವ್‌, ಅಶ್ವತ್ಥ್‌ ಅವರ ಧಾಟಿಯು ವೃಂದಗಾನಕ್ಕೆ ಹೇಳಿ ಮಾಡಿಸಿದಂತಿದ್ದು, ಅವರ ಧಾಟಿಯನ್ನೇ ಮುಂದುವರಿಸುವುದು ಸೂಕ್ತ ಎಂದು ತಿಳಿಸಿದರು. ಎಲ್ಲರ ಅಭಿಪ್ರಾಯ ಆಲಿಸಿದ ನ್ಯಾಯಪೀಠ, ಅನಂತಸ್ವಾಮಿ ಮತ್ತು ಅಶ್ವತ್ಥ್‌ ಇಬ್ಬರೂ ಸಂಗೀತ ಲೋಕದ ದಿಗ್ಗಜರೆಂದು ಶ್ಲಾಘಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesha M
Ramesha M
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​