ಬಾಲಕೋಟೆಯಲ್ಲಿ ಮತ್ತೆ ಮುನ್ನಲೆಗೆ ಬಂದ ಶಿವಾಜಿ ಪ್ರತಿಮೆ ವಿವಾದ

ಬಾಗಲಕೋಟೆಯಲ್ಲಿ ಇಷ್ಟು ದಿನ ಸುಮ್ಮನಿದ್ದ ಶಿವಾಜಿ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಸದಸ್ಯರು, ಈಗ ಅದೇ ಪ್ರತಿಮೆಯನ್ನು ಅದೇ ಜಾಗದಲ್ಲಿ ಕೂರಿಸಲು ಮುಂದಾಗಿದ್ದಾರೆ‌. ಆದರೆ ಅನುಮತಿ ಇಲ್ಲ ನಾವು ಕೂರಿಸಲು ಅನುಮತಿ ಕೊಡೋದಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಆಗಸ್ಟ್ 25 ರಂದು ಅದೇ ಜಾಗದಲ್ಲಿ ಶಿವಾಜಿ ಪ್ರತಿಮೆ‌ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿದ್ದಾರೆ.

ಬಾಲಕೋಟೆಯಲ್ಲಿ ಮತ್ತೆ ಮುನ್ನಲೆಗೆ ಬಂದ ಶಿವಾಜಿ ಪ್ರತಿಮೆ ವಿವಾದ
ಬಾಲಕೋಟೆಯಲ್ಲಿ ಮತ್ತೆ ಮುನ್ನಲೆಗೆ ಬಂದ ಶಿವಾಜಿ ಪ್ರತಿಮೆ ವಿವಾದ
Edited By:

Updated on: Aug 23, 2024 | 10:37 PM

ಬಾಗಲಕೋಟೆ, ಆಗಸ್ಟ್​ 23: ನಗರದಲ್ಲಿ ಕಳೆದ ಒಂದು ವರ್ಷದ ಹಿಂದೆ ಶಿವಾಜಿ ಪ್ರತಿಮೆ (Shivaji statue) ವಿವಾದ ಶುರುವಾಗಿತ್ತು. ರಾತ್ರೋರಾತ್ರಿ ಶಿವಾಜಿ ಪ್ರತಿಮೆ ಕೂರಿಸಿದ್ದನ್ನು ಪೊಲೀಸರು ಅನುಮತಿ ಇಲ್ಲ ಅಂತ ತೆರವು ಮಾಡಿದ್ದರು. ಈ ವೇಳೆ ಗದ್ದಲ, ಪ್ರತಿಭಟನೆ ನಡೆದಿದ್ದರು. ಈಗ ಮತ್ತೆ ಪ್ರತಿಮೆ ಕೂರಿಸೋದಕ್ಕೆ ಮುಂದಾಗಿದ್ದು ಮತ್ತೆ ವಿವಾದದ ಹೊಗೆಯಾಡುತ್ತಿದೆ.

ಛತ್ರಪತಿ ಶಿವಾಜಿ ದೇಶ ಕಂಡ ಮಹಾನ್ ಶೂರ. ಇಂತಹ ‌ಮಹಾನ್ ವೀರನ ಪ್ರತಿಮೆ ಕೂರಿಸುವ ಕಾಲ ಬಾಗಲಕೋಟೆಯಲ್ಲಿ ಇಂದಿಗೂ ಕೂಡಿ ಬರುತ್ತಿಲ್ಲ. ಕಳೆದ ವರ್ಷ ಇದೆ ಶಿವಾಜಿ ಪ್ರತಿಮೆಯನ್ನು ಕಾಂಚನ ಪಾರ್ಕ್‌ ಬಳಿಯ ಜಾಗದಲ್ಲಿ ರಾತ್ರೋರಾತ್ರಿ ಅಪರಿಚಿತರು ಕೂರಿಸಿದ್ದರು. ಇದನ್ನು ತೆರವುಗೊಳಿಸಲು ಪೊಲೀಸರು ಮುಂದಾದಾಗ ಹಿಂದು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಕೊನೆಗೂ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದರು.

ಇದನ್ನೂ ಓದಿ: ಪ್ರಾಸಿಕ್ಯೂಷನ್​ ಭೀತಿ: ತಮ್ಮ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಮುರುಗೇಶ್ ನಿರಾಣಿ

ಇಷ್ಟು ದಿನ ಸುಮ್ಮನಿದ್ದ, ಶಿವಾಜಿ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಸದಸ್ಯರು, ಈಗ ಅದೇ ಪ್ರತಿಮೆಯನ್ನು ಅದೇ ಜಾಗದಲ್ಲಿ ಕೂರಿಸಲು ಮುಂದಾಗಿದ್ದಾರೆ‌. ಆದರೆ ಅನುಮತಿ ಇಲ್ಲ ನಾವು ಕೂರಿಸಲು ಅನುಮತಿ ಕೊಡೋದಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಕಳೆದ ವರ್ಷ ಪ್ರತಿಮೆ ತೆರವುಗೊಳಿಸುವಾಗ ಬಾರಿ ಹೈಡ್ರಾಮಾ ನಡೆದಿತ್ತು. ಹಿಂದು ಕಾರ್ಯಕರ್ತರು, ಶಿವಾಜಿ ಪ್ರತಿಮೆ ಪ್ರತಿಷ್ಠಾಪನಾ ಸದಸ್ಯರು ಬಾರಿ ವಿರೋಧ ಮಾಡಿದ್ದರು. ಈ ವೇಳೆ ಪೊಲೀಸರು ಖಾಕಿ ಸರ್ಪಗಾವಲಿನ ಮೂಲಕ ಪ್ರತಿಮೆ ತೆರವುಗೊಳಿಸಿದ್ದರು. ಅಂದು ಇದರ ಮುಂದಾಳತ್ವವನ್ನು ನಾರಾಯಣಸಾ ಬಾಂಡಗೆ ವಹಿಸಿಕೊಂಡಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಅಮರ ಈ ಹಲಗಲಿ ಬೇಡರು; ಇವರ ಬಗ್ಗೆ ನಿಮಗೆಷ್ಟು ಗೊತ್ತು?

ಇದೀಗ‌ ಮತ್ತೆ ಅದೇ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆಗಸ್ಟ್ 25 ರಂದು ಅದೇ ಜಾಗದಲ್ಲಿ ಶಿವಾಜಿ ಪ್ರತಿಮೆ‌ ಪ್ರತಿಷ್ಠಾಪನೆ ಮಾಡಿಯೆ ತೀರುತ್ತೇವೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ, ಬಾಗಲಕೋಟೆ ಶಾಸಕ ಎಚ್ ವೈ ಮೇಟಿ ಅವರಿಂದಲೇ ಪ್ರತಿಮೆ ಅನಾವರಣಗೊಳಿಸುತ್ತೇವೆ. ಮುಂದೆ ಸಿಎಂ ಅವರನ್ನು ಕರೆತಂದು ದೊಡ್ಡದಾಗಿ ಲೋಕಾರ್ಪಣೆ ಮಾಡುತ್ತೇವೆ ಅಂತಿದ್ದಾರೆ.

ಪೊಲೀಸರು ಅನುಮತಿ ಇರದೆ ಪ್ರತಿಮೆ ಕೂರಿಸಲು ಬಿಡೋದಿಲ್ಲ ಅಂತ ಹೇಳ್ತಿದ್ದಾರೆ. ಸದಸ್ಯರು ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಅಂತಿದ್ದಾರೆ. ಇಲ್ಲಿ ಯಾರ ಕೈ ಮೇಲಾಗುತ್ತೊ ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Fri, 23 August 24

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us