ಅಡುಗೆ ಅನಿಲ ಸೋರಿಕೆ: ಮನೆಯಲ್ಲಿ ಭಾರೀ ಸ್ಫೋಟ

ಮಂಗಳೂರು: ನಗರದ ವಾಸ್ ಲೇನ್ ಬಳಿಯ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದೆ. ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ತಿಳಿಯದೇ ಮನೆಯವ್ರು ವಿದ್ಯುತ್ ಸ್ವಿಚ್ ಹಾಕಿದ್ದಾರೆ.ಆ ವೇಳೆ ದೊಡ್ಡ ಸ್ಫೋಟ ಸಂಭವಿಸಿದೆ. ಮನೆಯಲ್ಲಿದ್ದ ಗದಗ ಮೂಲದ ಮಂಜುನಾಥ್(25) ಮತ್ತು ರೇಖಾ(20) ಎಂಬವರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಗಾಜು ಒಡೆದಿದ್ದು, ಮನೆ ಮುಂದೆ ನಿಂತಿದ್ದ ಕಾರಿಗೆ ಹಾನಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

ಅಡುಗೆ ಅನಿಲ ಸೋರಿಕೆ:  ಮನೆಯಲ್ಲಿ ಭಾರೀ ಸ್ಫೋಟ
ಸಾಧು ಶ್ರೀನಾಥ್​

Updated on: Nov 25, 2019 | 1:40 PM

ಮಂಗಳೂರು: ನಗರದ ವಾಸ್ ಲೇನ್ ಬಳಿಯ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದೆ.

ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದು, ತಿಳಿಯದೇ ಮನೆಯವ್ರು ವಿದ್ಯುತ್ ಸ್ವಿಚ್ ಹಾಕಿದ್ದಾರೆ.ಆ ವೇಳೆ ದೊಡ್ಡ ಸ್ಫೋಟ ಸಂಭವಿಸಿದೆ. ಮನೆಯಲ್ಲಿದ್ದ ಗದಗ ಮೂಲದ ಮಂಜುನಾಥ್(25) ಮತ್ತು ರೇಖಾ(20) ಎಂಬವರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಗಾಜು ಒಡೆದಿದ್ದು, ಮನೆ ಮುಂದೆ ನಿಂತಿದ್ದ ಕಾರಿಗೆ ಹಾನಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

Published On - 1:11 pm, Mon, 25 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us