AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾನ್ಸ್​ಫಾರ್ಮರ್​ಗಳಿಂದ ಪಾದಚಾರಿಗಳಿಗೆ ತೊಂದರೆ ತಪ್ಪಿಸಲು ಸಮನ್ವಯ ಸಮಿತಿ ರಚನೆ: ಹೈಕೋರ್ಟ್​ಗೆ ಬೆಸ್ಕಾಂ ಮಾಹಿತಿ

ಈ ಸಮಿತಿಯು ಫುಟ್‌ಪಾತ್‌ಗಳಲ್ಲಿನ ಟ್ರಾನ್ಸ್‌ಫಾರ್ಮರ್​ಗಳು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಗಿದೆಯೆ? ಇಲ್ಲವೇ ಎಂದು ಪರಿಶೀಲಿಸಲಿದೆ. ಈಗಾಗಲೇ ಈ ಸಮಿತಿ ಒಂದು ಸಭೆ ನಡೆಸಿದೆ. 2ನೇ ಸಭೆ ಜೂನ್ 24ಕ್ಕೆ ನಿಗದಿಯಾಗಿದೆ ಎಂದು ಹೈಕೋರ್ಟ್‌ಗೆ ಬೆಸ್ಕಾಂ ಪರ ವಕೀಲರು ಮಾಹಿತಿ ನೀಡಿದರು.

ಟ್ರಾನ್ಸ್​ಫಾರ್ಮರ್​ಗಳಿಂದ ಪಾದಚಾರಿಗಳಿಗೆ ತೊಂದರೆ ತಪ್ಪಿಸಲು ಸಮನ್ವಯ ಸಮಿತಿ ರಚನೆ: ಹೈಕೋರ್ಟ್​ಗೆ ಬೆಸ್ಕಾಂ ಮಾಹಿತಿ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jun 07, 2021 | 3:58 PM

Share

ಬೆಂಗಳೂರು: ನಗರದ ಫುಟ್​ಪಾತ್​ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳನ್ನು (ಟ್ರಾನ್ಸ್​ಫಾರ್ಮರ್) ತೆರವುಗೊಳಿಸಬೇಕು ಎಂದು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಜನರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಪರಾಮರ್ಶಿಸಲು ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಲಾಗಿದೆ.

ಈ ಸಮಿತಿಯು ಫುಟ್‌ಪಾತ್‌ಗಳಲ್ಲಿನ ಟ್ರಾನ್ಸ್‌ಫಾರ್ಮರ್​ಗಳು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಗಿದೆಯೆ? ಇಲ್ಲವೇ ಎಂದು ಪರಿಶೀಲಿಸಲಿದೆ. ಈಗಾಗಲೇ ಈ ಸಮಿತಿ ಒಂದು ಸಭೆ ನಡೆಸಿದೆ. 2ನೇ ಸಭೆ ಜೂನ್ 24ಕ್ಕೆ ನಿಗದಿಯಾಗಿದೆ ಎಂದು ಹೈಕೋರ್ಟ್‌ಗೆ ಬೆಸ್ಕಾಂ ಪರ ವಕೀಲರು ಮಾಹಿತಿ ನೀಡಿದರು.

ಈ ಹಿಂದೆ, ಅಂದರೆ ಮಾರ್ಚ್ ತಿಂಗಳಲ್ಲಿ ಟ್ರಾನ್ಸ್​ಫಾರ್ಮರ್​ಗಳಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಟ್ರಾನ್ಸ್​ಫಾರ್ಮರ್​ ಅಳವಡಿಸುವ ಮೊದಲು ನೆಲ ಅಗೆಯಲು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಲೈಸೆನ್ಸ್ ಪಡೆದುಕೊಳ್ಳಬೇಕು ಎಂದು ಹೇಳಿತ್ತು. ಎಲೆಕ್ಟ್ರಿಸಿಟ್ ಆ್ಯಕ್ಟ್​ (2003) ಅನ್ವಯ ಬೆಸ್ಕಾಂ ಇಂಥ ಅನುಮತಿ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರತಿ ಬಾರಿ ನೆಲ ಅಗೆಯುವ ಮೊದಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯಲೇಬೇಕು ಎಂದು ಹೇಳಿತ್ತು. ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿದೆ. ರಸ್ತೆಗಳಲ್ಲಿ ಹೇಗಂದರೆ ಹಾಗೆ ವಿದ್ಯುತ್ ತಂತಿಗಳು ನೇತಾಡುತ್ತಿದ್ದು, ಜನರ ಜೀವಕ್ಕೆ ಅಪಾಯ ತಂದೊಡ್ಡಿದೆ ಎಂದು ಅತ್ರಿ ದೂರಿದ್ದರು. ಇದನ್ನು ನಿರಾಕರಿಸಿದ್ದ ಬೆಸ್ಕಾಂ ಟ್ರಾನ್ಸ್​ಫಾರ್ಮರ್ ಅಳವಡಿಕೆ ವೇಳೆ ಎಲ್ಲ ನಿಯಮಗಳನ್ನೂ ಪಾಲಿಸಲಾಗುತ್ತಿದೆ. ಎಲೆಕ್ಟ್ರಿಕಲ್ ಇನ್​ಸ್ಪೆಕ್ಟರ್​ಗಳೂ ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸುರಕ್ಷೆಯನ್ನು ಖಾತ್ರಿಪಡಿಸುತ್ತಿದ್ದಾರೆ ಎಂದು ಹೇಳಿತ್ತು.

(Coordination Committee formed to Solve Public facing Problem from Transformers inform BESCOM to Karnataka High Court)

ಇದನ್ನೂ ಓದಿ: ಲಸಿಕೆ ಪೂರೈಕೆ, ಸಂಪರ್ಕ ಮತ್ತು ಮೂಲಸೌಕರ್ಯ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ: ಹೈಕೋರ್ಟ್​ಗಳಿಗೆ ಸಿಜೆ ರಮಣ ಭರವಸೆ

ಇದನ್ನೂ ಓದಿ: ಪ್ರಚಾರಕ್ಕಾಗಿ ಮಾಡಿದ ಪ್ರಯತ್ನವಿದು: 5ಜಿ ಬಗ್ಗೆ ಪ್ರಶ್ನಿಸಿ ಕೇಸ್ ಹಾಕಿದ್ದಕ್ಕೆ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್​ ತರಾಟೆ, 20 ಲಕ್ಷ ದಂಡ

Published On - 3:56 pm, Mon, 7 June 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ