AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಮುಕ್ತ ಗ್ರಾಮ; ಕೊರೊನಾ ಸೋಂಕು ಹರಡದಂತೆ ಕೊಡಗು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಜಾರಿ

ಜಿಲ್ಲೆಯ ಐದು ತಾಲ್ಲೂಕುಗಳ ಆರು ಗ್ರಾಮಗಳು ಕೊರೊನಾದಿಂದ‌ ಸಂಪೂರ್ಣ ಮುಕ್ತವಾಗಿವೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕಂದೂರು ಗ್ರಾಮ‌ ಪಂಚಾಯಿತಿಯ ಹೊದಕಾನ ಗ್ರಾಮ ಬಹಳ ಭಿನ್ನವಾಗಿ ನಿಲ್ಲುತ್ತದೆ. ಈ ಗ್ರಾಮದಲ್ಲಿ ಸುಮಾರು 90 ಮನೆಗಳಿದ್ದು, 350 ಕ್ಕೂ ಅಧಿಕ ಜನಸಂಖ್ಯೆಯಿದೆ. ವಿಶೇಷ ಅಂದರೆ ಈ ಗ್ರಾಮ ಕೊರೊನಾದಿಂದ ಮುಕ್ತವಾಗಿದೆ.

ಕೊವಿಡ್ ಮುಕ್ತ ಗ್ರಾಮ; ಕೊರೊನಾ ಸೋಂಕು ಹರಡದಂತೆ ಕೊಡಗು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಜಾರಿ
ಮಡಿಕೇರಿ ತಾಲ್ಲೂಕಿನ ಮಕ್ಕಂದೂರು ಗ್ರಾಮ‌
preethi shettigar
|

Updated on: Jun 01, 2021 | 5:16 PM

Share

ಕೊಡಗು: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದ್ದು, ಪ್ರತಿ ಜಿಲ್ಲೆಯಲ್ಲೂ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಅದರಲ್ಲೂ ಕೊವಿಡ್​ ರೇಟ್​ನಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದ್ದ ಕೊಡಗು ಜಿಲ್ಲೆಯ ಒಂದೊಂದೇ ಗ್ರಾಮಗಳು ಇದೀಗ ಕೊರೊನಾ ಮುಕ್ತವಾಗುತ್ತಿವೆ.

ಕೊಡಗು ಜಿಲ್ಲೆಯಲ್ಲಿ ಎಪ್ರಿಲ್ ಮೊದಲ ವಾರದಲ್ಲಿ ದಿನಕ್ಕೆ ಸಾವಿರ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದರು. ಇದರಿಂದ ಜಿಲ್ಲಾಡಳಿತ ಇನ್ನಿಲ್ಲದ ಒತ್ತಡಕ್ಕೆ ಒಳಗಾಗಿತ್ತು. ಗ್ರಾಮ ಮಟ್ಟದಲ್ಲಿ ಕೊರೊನಾ ಹೆಚ್ಚಾಗಿತ್ತು. ಆದರೆ ಇದೀಗ 50 ದಿನಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಜಿಲ್ಲೆಯ ಒಂದೊಂದೇ ಗ್ರಾಮಗಳು ಕೊರೊನಾ ವಿಷವರ್ತುಲದಿಂದ ಹೊರ ಬರುತ್ತಿವೆ.

ಜಿಲ್ಲೆಯ ಐದು ತಾಲ್ಲೂಕುಗಳ ಆರು ಗ್ರಾಮಗಳು ಕೊರೊನಾದಿಂದ‌ ಸಂಪೂರ್ಣ ಮುಕ್ತವಾಗಿವೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕಂದೂರು ಗ್ರಾಮ‌ ಪಂಚಾಯಿತಿಯ ಹೊದಕಾನ ಗ್ರಾಮ ಬಹಳ ಭಿನ್ನವಾಗಿ ನಿಲ್ಲುತ್ತದೆ. ಈ ಗ್ರಾಮದಲ್ಲಿ ಸುಮಾರು 90 ಮನೆಗಳಿದ್ದು, 350 ಕ್ಕೂ ಅಧಿಕ ಜನಸಂಖ್ಯೆಯಿದೆ. ವಿಶೇಷ ಅಂದರೆ ಈ ಗ್ರಾಮ ಕೊರೊನಾದಿಂದ ಮುಕ್ತವಾಗಿದೆ. ಈ ಗ್ರಾಮ ಕೊರೊನಾ ಮುಕ್ತವಾಗಲು ಈ ಗ್ರಾಮದ ಪಂಚಾಯಿತಿ ಅಧಿಕಾರಿಗಳು ಮತ್ತು ಜನರ ಪ್ರಯತ್ನ ಬಹಳ ಕೆಲಸ‌ಮಾಡಿದೆ ಎಂದು ಮಕ್ಕಂದೂರು ಗ್ರಾಮದ ಪಿಡಿಒ ದಿನೇಶ್ ತಿಳಿಸಿದ್ದಾರೆ.

ಗ್ರಾಮಸ್ಥರು ಕೂಡ ಸರ್ಕಾರದ ನೀತಿ ನಿಯಮಗಳನ್ನ ಚಾಚೂ ತಪ್ಪದೆ ಪಾಲಿಸಿ ಕೊರೊನಾ ತೊಲಗಿಸಲು ಪ್ರಯತ್ನಪಟ್ಟಿದ್ದಾರೆ. ಊರಿನ ಜನರು ಹೊರಹೋಗದಂತೆ ತಡೆದಿದ್ದಾರೆ. ಊರಿಗೆ ಹೊರಗಿನ‌ ಮಂದಿ‌ ಬಂದರೆ ಅವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಿದ್ದಾರೆ. ಮಾತ್ರವಲ್ಲದೆ ಅಗತ್ಯ ವಸ್ತುಗಳ ಹೊರತು ಇನ್ನಿತರ ಕೆಲಸಗಳಿಗೆ ಜನರು ಅಡ್ಡಾಡದಂತೆ ತಡೆದಿದ್ದಾರೆ. ಹಾಗಾಗಿ ಕೊರೊನಾ ಊರಿಡೀ ಹರಡದೆ ಸಂಪೂರ್ಣ ನಿಯಂತ್ರಣವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ಯಾಮ್ ತಿಳಿಸಿದ್ದಾರೆ.

ಎಷ್ಟೋ ಊರುಗಳಲ್ಲಿ ಜನರು ಸಾಮಾಜಿಕ ಅಂತರ ಪಾಲನೆ ಮಾಡದೆ‌ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ ಇಡೀ ಊರಿಗೆ ಗಂಡಾಂತರ ತಂದಿದ್ದಾರೆ. ಅಂತಹದರಲ್ಲಿ ಹೊದಕಾನ ಗ್ರಾಮಸ್ಥರು ಕೊರೊನಾ ನಿಯಮಗಳನ್ನು ಪಾಲಿಸಿ ಇಡೀ ಗ್ರಾಮವನ್ನು ಸೋಂಕಿನಿಂದ ಕಾಪಾಡಿರುವುದು ಎಲ್ಲಾ ಗ್ರಾ‌ಮಗಳಿಗೂ ಆದರ್ಶವಾಗಿದೆ.

ಇದನ್ನೂ ಓದಿ:

ಕೊರೊನಾ ಮೂರನೇ ಅಲೆ; ಮುಂಜಾಗೃತಾ ಕ್ರಮವಾಗಿ ಮಕ್ಕಳ ಸಮೀಕ್ಷೆಗೆ ಮುಂದಾದ ಕೊಪ್ಪಳ ಜಿಲ್ಲಾಡಳಿತ

ಭಾರತದಲ್ಲಿ ಎಲಿ ಲಿಲ್ಲಿ ಸಂಸ್ಥೆಯ ಆ್ಯಂಟಿಬಾಡಿ ಕಾಕ್​ಟೈಲ್​ ತುರ್ತು ಬಳಕೆಗೆ ಅಸ್ತು ಎಂದ ಡಿಸಿಜಿಐ; ಕೊರೊನಾ ಮಣಿಸಲು ಹೊಸ ಅಸ್ತ್ರ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?