ಬೆಂಗಳೂರು: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಕೋರ್​ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್​ ಜೋಶಿ, ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ ಸೇರಿ ಅನೇಕರು ಭಾಗಿಯಾಗಿದ್ದಾರೆ.

ಬೆಂಗಳೂರು: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ
ಯಡಯೂರಪ್ಪ, ಅಮಿತ್​ ಶಾ, ಸದಾನಂದ ಗೌಡ

Updated on: Jan 16, 2021 | 9:39 PM

ಬೆಂಗಳೂರು: ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಕೋರ್​ ಕಮಿಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್​ ಜೋಶಿ, ಡಿ.ವಿ.ಸದಾನಂದಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ, ಸಚಿವರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಅಕಾರ್ಯದರ್ಶಿ ಸಿ.ಟಿ.ರವಿ ಭಾಗಿಯಾಗಿದ್ದಾರೆ.

ಇನ್ನು, ಹೋಟೆಲ್​ನಲ್ಲಿರುವ ಅಮಿತ್​​ ಶಾ ಅವರನ್ನು ಭೇಟಿ ಆಗಲು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ತೆರಳಿದ್ದರು. ಆದರೆ, ಅವರ ಭೇಟಿ ಸಾಧ್ಯವಾಗದ ಕಾರಣ ಹೋಟೆಲ್​ನಿಂದ ಹೊರ ನಡೆದಿದ್ದಾರೆ.

ಕರ್ನಾಟಕ ಸಿಎಂ ಜೊತೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ -BSY ಕಾರ್ಯವೈಖರಿಗೆ ಅಮಿತ್ ಶಾ ಪ್ರಶಂಸೆ

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us