AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ; ಸ್ಥೂಲಕಾಯ, ಟೈಪ್ 1 ಡಯಾಬಿಟಿಸ್ ಇರುವ ಮಕ್ಕಳ ಬಗ್ಗೆ ಇರಲಿ ಹೆಚ್ಚಿನ ಎಚ್ಚರ

ಸ್ಥೂಲಕಾಯ ಇರುವ ಮಕ್ಕಳಲ್ಲಿ ACE 2 ರಿಸೆಪ್ಟರ್ ಹೆಚ್ಚಿರುತ್ತೆ. ACE 2 ರಿಸೆಪ್ಟರ್, ವೈರಸ್‌ನ್ನು ಜೀವಕೋಶದೊಳಕ್ಕೆ ಎಳೆದುಕೊಳ್ಳುವ ಕೆಲಸ ಮಾಡುತ್ತದೆ. ಟೈಪ್ 1 ಡಯಾಬಿಟಿಸ್ ಇರುವ ಮಕ್ಕಳಲ್ಲೂ ಸೋಂಕು ಹರಡುವ ತೀವ್ರತೆ ಹೆಚ್ಚಿದೆ. ಮೊದಲ ಅಲೆ, 2ನೇ ಅಲೆಯಲ್ಲಿ ಈ ಮಕ್ಕಳಿಗೇ ಸೋಂಕು ಹೆಚ್ಚು ಕಾಡಿತ್ತು.

ಕೊರೊನಾ 3ನೇ ಅಲೆ; ಸ್ಥೂಲಕಾಯ, ಟೈಪ್ 1 ಡಯಾಬಿಟಿಸ್ ಇರುವ ಮಕ್ಕಳ ಬಗ್ಗೆ ಇರಲಿ ಹೆಚ್ಚಿನ ಎಚ್ಚರ
ಪಿಟಿಐ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 28, 2021 | 1:20 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತಿದ್ದು ಇನ್ನೆರೆಡು ತಿಂಗಳಲ್ಲಿ ಕೊರೊನಾ 3ನೇ ಅಲೆ ಶುರುವಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ವಿಚಾರಕ್ಕೆ ಸಂಬಂಧಿಸಿ ಸ್ಥೂಲಕಾಯ ಇರುವ ಮಕ್ಕಳು ಹಾಗೂ ಟೈಪ್ 1 ಡಯಾಬಿಟಿಸ್ ಇರುವ ಮಕ್ಕಳ ಬಗ್ಗೆ ಹೆಚ್ಚಿನ ಎಚ್ಚರವಿರಲಿ ಎಂದು ಮಕ್ಕಳ ಶ್ವಾಸಕೋಶ ತಜ್ಞ ಹಾಗೂ ಮಕ್ಕಳ ತಜ್ಞರ ಸಮಿತಿ ಸದಸ್ಯ ಡಾ. ಶ್ರೀಕಂಠ ಜೆ.ಟಿ ಎಚ್ಚರಿಕೆ ನೀಡಿದ್ದಾರೆ.

ಸ್ಥೂಲಕಾಯ ಇರುವ ಮಕ್ಕಳಲ್ಲಿ ACE 2 ರಿಸೆಪ್ಟರ್ ಹೆಚ್ಚಿರುತ್ತೆ. ACE 2 ರಿಸೆಪ್ಟರ್, ವೈರಸ್‌ನ್ನು ಜೀವಕೋಶದೊಳಕ್ಕೆ ಎಳೆದುಕೊಳ್ಳುವ ಕೆಲಸ ಮಾಡುತ್ತದೆ. ಟೈಪ್ 1 ಡಯಾಬಿಟಿಸ್ ಇರುವ ಮಕ್ಕಳಲ್ಲೂ ಸೋಂಕು ಹರಡುವ ತೀವ್ರತೆ ಹೆಚ್ಚಿದೆ. ಮೊದಲ ಅಲೆ, 2ನೇ ಅಲೆಯಲ್ಲಿ ಈ ಮಕ್ಕಳಿಗೇ ಸೋಂಕು ಹೆಚ್ಚು ಕಾಡಿತ್ತು. ಹೀಗಾಗಿ ಸ್ಥೂಲಕಾಯ, ಟೈಪ್ 1 ಡಯಾಬಿಟಿಸ್ ಇದ್ರೆ ಅಂತಹ ಮಕ್ಕಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಡಾ.ಜೆ.ಟಿ.ಶ್ರೀಕಂಠ ತಿಳಿಸಿದ್ದಾರೆ.

ಜುಲೈ ಅಂತ್ಯ ಅಥವಾ ಆಗಸ್ಟ್ನಿಂದ ಮಕ್ಕಳಿಗೆ ಲಸಿಕೆ ನೀಡಿಕೆ? ಇನ್ನು ಕೊರೊನಾ ವಿರುದ್ಧ ರಕ್ಷಣೆಗೆ ಝೈಡಸ್ ಕ್ಯಾಡಿಲಾ ಮಕ್ಕಳಿಗಾಗಿ ಲಸಿಕೆ ಕಂಡು ಹಿಡಿದಿದೆ. ಇದರ ತುರ್ತು ಬಳಕೆಗೆ ಅನುಮತಿ ಕೋರಿ ಡಿಸಿಜಿಐಗೆ ಅರ್ಜಿ ಸಲ್ಲಿಸಿದೆ. ಡಿಸಿಜಿಐ ಅನುಮತಿ ನೀಡಿದ್ರೆ. ಜುಲೈ ಅಂತ್ಯದ ವೇಳೆಗೆ ಝೈಡಸ್ ಕ್ಯಾಡಿಲಾ ಲಸಿಕೆ ಮಕ್ಕಳಿಗೆ ನೀಡಲು ಆರಂಭಿಸಲಾಗುತ್ತೆ ಅಂತಾ ಕೊವಿಡ್ ತಜ್ಞರ ಸಮಿತಿಯ ಅಧ್ಯಕ್ಷ ಡಾ.ಎನ್.ಕೆ.ಅರೋರ ಹೇಳಿದ್ದಾರೆ. ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಿದ ಬಳಿಕ ಶಾಲೆಗಳನ್ನ ತೆರೆಯಲು ಯಾವುದೇ ಅಡ್ಡಿ ಆತಂಕ ಇಲ್ಲ ಅಂತಾ ಏಮ್ಸ್ ಮುಖ್ಯಸ್ಥ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಭಾರತ್ ಬಯೋಟೆಕ್ ಕಂಪನಿ 2 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಲಸಿಕೆಯನ್ನ ಪ್ರಯೋಗ ಮಾಡ್ತಿದೆ. ಇದರ ಎರಡನೇ ಹಂತ ಮತ್ತು ಮೂರನೇ ಹಂತದ ಪ್ರಯೋಗದ ಮಾಹಿತಿ ಶೀಘ್ರವೇ ಡಿಸಿಜಿಐಗೆ ಸಲ್ಲಿಕೆಯಾಗಲಿದೆ. ಇದು ಮಕ್ಕಳಿಗೆ ಕೊರೊನಾ ವಿರುದ್ಧ ರಕ್ಷಣೆ ನೀಡುತ್ತೆ ಅನ್ನೋದು ಪಕ್ಕಾ ಆದ್ರೆ, ಸೆಪ್ಟೆಂಬರ್ ವೇಳೆಗೆ ಭಾರತ್ ಬಯೋಟೆಕ್ ಲಸಿಕೆ ಕೂಡ ಮಾರುಕಟ್ಟೆಗೆ ಬರುತ್ತೆ ಅಂತಾ ರಣದೀಪ್ ಗುಲೇರಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಝೈಡಸ್ ಕ್ಯಾಡಿಲಾ, ಭಾರತ್ ಬಯೋಟೆಕ್ ಜೊತೆಗೆ ಶೀಘ್ರವೇ ಭಾರತಕ್ಕೆ ಫೈಜರ್ ಲಸಿಕೆ ಎಂಟ್ರಿ ಕೊಡಲಿದೆ. ಭಾರತದಲ್ಲಿ ಫೈಜರ್ ಪೂರೈಕೆ ಆರಂಭವಾದ್ರೆ, ಮಕ್ಕಳಿಗೆ ಈ ಲಸಿಕೆಯನ್ನ ಕೊಡಲು ಯಾವುದೇ ತೊಂದರೆ ಇಲ್ಲ ಅಂತಾ ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿದೆದ್ದ ರಾಜಕೀಯ ಪಕ್ಷಗಳಿಗೆ ಕೊರೊನಾ 3ನೇ ಅಲೆ ನೆನಪಿಸಿದ ಅರವಿಂದ್ ಕೇಜ್ರಿವಾಲ್​; ದೆಹಲಿ ಜನರ ಜೀವರಕ್ಷಣೆಗಾಗಿ ಅಪರಾಧ ಮಾಡಿದೆ ಎಂದ ಸಿಎಂ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ